ಬೆಂಗಳೂರು: ರಾಜ್ಯದಲ್ಲಿ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಾಲಾ' ಚಿತ್ರ ಬಿಡುಗಡೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಚಿತ್ರ ಪ್ರದರ್ಶನಕ್ಕೆಅವಕಾಶ ನೀಡದಂತೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ನಡೆಸಿದರು. 


COMMERCIAL BREAK
SCROLL TO CONTINUE READING

ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದು, ಕರ್ನಾಟಕದಲ್ಲಿ 'ಕಾಲಾ' ಚಿತ್ರ ಬಿಡುಗಡೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕಾಳಾ ಚಿತ್ರ ಬಿಡುಗಡೆಯಾಗುವ ಚಿತ್ರಮಂದಿರಗಳಿಗೆ ಪೋಲಿಸ್ ಭದ್ರತೆ ಒದಗಿಸಲಾಗಿದೆ. ಆದರೂ ಪ್ರತಿಭಟನೆ ಮುಂದುವರೆಸಿ ಚಿತ್ರ ಪ್ರದರ್ಶನ ರದ್ದು ಪಡಿಸುತ್ತೇವೆ, ಜೈಲಿಗೆ ಹೋಗಲೂ ಹಿಂಜರಿಯುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. 



ಮಂಗಳವಾರವಷ್ಟೇ ಕರ್ನಾಟಕದಲ್ಲಿ 'ಕಾಲಾ' ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಮತ್ತು ಚಿತ್ರ ಪ್ರದರ್ಶನವಾಗುವ ಚಿತ್ರಮಂದಿರಗಳಿಗೆ ಪೋಲಿಸ್ ಭದ್ರತೆ ಒದಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು.