Jack Manju Hospitalized: ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಚಿತ್ರತಂಡ ಸಹ ಭರ್ಜರಿ ಪ್ರಚಾರ ಆರಂಭಿಸಿದೆ. ಈ ಮಧ್ಯೆ ಈ ಚಿತ್ರದ ನಿರ್ಮಾಪಕ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬನ್ನೇರುಘಟ್ಟ ಬಳಿ ಇರುವ ಅಪೋಲೋ ಆಸ್ಪತ್ರೆಗೆ ಜಾಕ್‌ ಮಂಜು ದಾಖಲಾಗಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಪರಿಣಾಮಕಾರಿಯಾಗಿವೆ ಈ ನಾಲ್ಕು ಡ್ರೈ ಫ್ರೂಟ್ಸ್ ..!


ನಟ ಕಿಚ್ಚ ಸುದೀಪ್ ಆಪ್ತರಾದ ಜಾಕ್‌ ಮಂಜು ಕಾರ್ಯಕ್ರಮಕ್ಕೆ ಹೋದಾಗ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರಂತೆ. ಈ ಹಿನ್ನೆಲೆ ಎರಡು ದಿನದ ದಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 20 ದಿನಗಳ ಹಿಂದೆ ಜಾಕ್‌ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರಂತೆ. ಆ ಬಳಿಕ ಕಾಲಿನ ಸಮಸ್ಯೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಯಾವುದೇ ಉಪಯೋಗವಾಗಿರಲಿಲ್ಲ. 


ಇದನ್ನೂ ಓದಿ: Portable Matress AC: ನಿಮಿಷಗಳಲ್ಲಿ ಕೋಣೆಯನ್ನು ತಂಪಾಗಿಸುವ ಬಜೆಟ್‌ ಎಸಿ


ದಿನ ಕಳೆದಂತೆ ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ ಊತ ಬರಲು ಆರಂಭವಾಗಿತ್ತಂತೆ. ಈ ಕಾರಣಕ್ಕಾಗಿ ಮಂಜು ಎರಡು‌ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಆಪರೇಷನ್ ಮಾಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.