Puneeth RajKumar: ಅಪ್ಪು ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ

Puneeth RajKumar: ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನಗಲಿರುವ ಕನ್ನಡದ ಪವರ್ ಸ್ಥಾರ್ ಪುನೀತ್ ರಾಜ್ ಕುಮಾರ್, ಎಲ್ಲರ ನೆಚ್ಚಿನ ಅಪ್ಪು ಇನ್ನು ನೆನಪು ಮಾತ್ರ. ಇಂದಿಗೂ ಕನ್ನಡ ನಾಡಿನ ಪ್ರತಿ ಮನೆಯಲ್ಲೂ ಅಗಲಿದ ಯುವರತ್ನನಿಗಾಗಿ ಕಂಬನಿ ಮಿಡಿಯುತ್ತಿದ್ದಾರೆ.  

Written by - Yashaswini V | Last Updated : Nov 2, 2021, 01:50 PM IST
  • ಎಲ್ಲರ ನೆಚ್ಚಿನ ಅಪ್ಪು ಇನ್ನು ನೆನಪು ಮಾತ್ರ
  • ಇಂದಿಗೂ ಕನ್ನಡ ನಾಡಿನ ಪ್ರತಿ ಮನೆಯಲ್ಲೂ ಅಗಲಿದ ಯುವರತ್ನನಿಗಾಗಿ ಕಂಬನಿ ಮಿಡಿಯುತ್ತಿದ್ದಾರೆ
  • ಸುಮಾರು 25 ಲಕ್ಷ ಮಂದಿ ಅಗಲಿದ 'ಅಪ್ಪು' ಅವರ ಅಂತಿಮ ದರ್ಶನ ಪಡೆದಿದ್ದಾರೆ
Puneeth RajKumar: ಅಪ್ಪು ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ title=
ಅಪ್ಪು ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅರೆಸ್ಟ್

Puneeth RajKumar: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ನಮ್ಮೊಂದಿಗಿಲ್ಲ ಎಂಬುದನ್ನು ಯಾರಿಗೂ ಸಹ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲರ ನೆಚ್ಚಿನ ಅಪ್ಪು ಇನ್ನು ನೆನಪು ಮಾತ್ರ. ಇಂದಿಗೂ ಕನ್ನಡ ನಾಡಿನ ಪ್ರತಿ ಮನೆಯಲ್ಲೂ ಅಗಲಿದ ಯುವರತ್ನನಿಗಾಗಿ ಕಂಬನಿ ಮಿಡಿಯುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Raj Kumar) ಅವರ ಪವರ್ ಎಷ್ಟರ ಮಟ್ಟಿಗಿತ್ತು ಎಂಬುದಕ್ಕೆ ಕರೋನಾವೈರಸ್ ಮಹಾಮಾರಿಯನ್ನು ಲೆಕ್ಕಿಸದೇ ಸಾಗರೋಪಾದಿಯಲ್ಲಿ ಬಂದು ಅವರ ಅಂತಿಮ ದರ್ಶನ ಪಡೆದ ಜನ ಸಾಗರವೇ ಸಾಕ್ಷಿ. ಸುಮಾರು 25 ಲಕ್ಷ ಮಂದಿ ಅಗಲಿದ 'ಅಪ್ಪು' ಅವರ ಅಂತಿಮ ದರ್ಶನ ಪಡೆದಿದ್ದಾರೆ. ಆದರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಅವರ ಬಗ್ಗೆ ಕಿಡಿಗೇಡಿಯೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದನು. ಆತನ ಕೃತ್ಯಕ್ಕೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಜೊತೆಗೆ ಆ ಕಿಡಿಗೇಡಿಯನ್ನು ಕೂಡಲೇ ಬಂಧಿಸುವಂತೆ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಿತ್ವಿಕ್ಸ್ ಎಂಬ ಕಿಡಿಗೇಡಿಯನ್ನು ಬಂದಿಸಿರುವ ಬೆಂಗಳೂರು ಸೈಬರ್ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೇ ಸ್ವತಃ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಅಪ್ಪು ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿ:
ವಾಸ್ತವವಾಗಿ, ಪುನೀತ್ ರಾಜ್ ಕುಮಾರ್ ಅವರ ನಿಧನದ (Puneeth Raj Kumar Death) ಸುದ್ದಿ ಕೇಳುತ್ತಿದ್ದಂತೆ ಇಡೀ ಕರುನಾಡೇ ಒಂದು ರೀತಿಯಲ್ಲಿ ಸ್ಥಬ್ದವಾಗಿತ್ತು. ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂದರ್ಭದಲ್ಲಿ ಡಾ. ರಾಜ್ ಕುಮಾರ್ ನಿಧನದ ನಂತರ ಸಂಭವಿಸಿದ್ದ ಕಹಿ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಯನ್ನು ತಪ್ಪಿಸುವ ಉದ್ದೇಶದಿಂದ  ಬೆಂಗಳೂರಿನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿತ್ತು. ಆದರೆ ಇದನ್ನು ಸಹಿಸದ ಕೆಲವು ಕಿಡಿಗೇಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅಗೌರವ ತೋರುವಂತಹ ಅವಹೇಳನಕಾರಿ ಹೇಳಿಕೆಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದರು. 

ಇದನ್ನೂ ಓದಿ- Puneeth Rajkumar: ನಟ ಪುನೀತ್ ರಾಜ್ ಕುಮಾರ್ ಕಣ್ಣು ನಾಲ್ವರಿಗೆ ಅಳವಡಿಕೆ

ಸಾಮಾಜಿಕ ಮಾಧ್ಯಮ (Social Media) ಬಳಕೆದಾರ ರಿತ್ವಿಕ್ಸ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿಯ ಪೋಸ್ಟ್ ಮಾಡಿದ್ದನು. ಅದರಲ್ಲಿ ಬಿಯರ್ ಬಾಟಲಿನ ಚಿತ್ರ ಒಂದನ್ನು ಶೇರ್ ಮಾಡುತ್ತಾ, ಪುನೀತ್ ರಾಜ್ ಕುಮಾರ್ ಅವರ ಬಗ್ಗೆ ತುಂಬಾ ಅಶ್ಲೀಲ ಪದಗಳನ್ನು ಬಳಸಿದ್ದನು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದ ಅಭಿಮಾನಿಗಳು, ಈ ಕಿಡಿಗೇಡಿಯನ್ನು ಕೂಡಲೇ ಬಂಧಿಸಿ. ಅವನು ನಮ್ಮ ಕೈಗೆ ಸಿಕ್ಕರೆ ಆತನನ್ನು ಸುಮ್ಮನೇ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಅವರು ಕೂಡ, ಈ ಅವಹೇಳನಕಾರಿ ಪೋಸ್ಟ್ ಬಗ್ಗೆ ತೀವ್ರ ಅಸಾಮಾಧಾನ ವ್ಯಕ್ತಪಡಿಸಿದ್ದು, 'ಕೇವಲ ಮದ್ಯಕ್ಕಾಗಿ ಪುನೀತ್ ಬಗ್ಗೆ ಇಂತಹ ವರ್ತನೆಯೇ? ಜನರಲ್ಲಿ ಮನುಷ್ಯತ್ವವೇ ಉಳಿದಿಲ್ಲವೇ? ಎಂದು ಬೇಸರ ವ್ಯಕ್ತಪಡಿಸಿದ್ದರು. 

ಇದನ್ನೂ ಓದಿ- Puneeth Rajkumar: ಪುನೀತ್, ಚಿರು ಸೇರಿದಂತೆ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನಗಲಿದ ನಟರು

ಇದೀಗ ಬೆಂಗಳೂರು ಸೈಬರ್ ಪೊಲೀಸರು ಆ ಕಿಡಿಗೇಡಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದ ಮೂಲಕ ಇದಕ್ಕೆ ಪ್ರತಿಕ್ರಿಯಿಸಿರುವ ಅಪ್ಪು ಅಭಿಮಾನಿಯೊಬ್ಬರು, ಈತ ಪೊಲೀಸರ ಕೈಗೆ ಸಿಕ್ಕಿ ತನ್ನ ಪ್ರಾಣ ಉಳಿಸಿಕೊಂಡಿದ್ದಾನೆ. ನಮ್ಮ ಕೈಯಲ್ಲಿ ಸಿಕ್ಕಿದ್ದಿದ್ದರೆ ಸರಿಯಾಗಿ ಪಾಠ ಕಲಿಸುತ್ತಿದ್ದೆವು ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News