ವಿಜಯನಗರ : ಹೊಸಪೇಟೆಯಲ್ಲಿ ಇಂದು ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. 


COMMERCIAL BREAK
SCROLL TO CONTINUE READING

ಇಂದು ಸಂಜೆ ಹೊಸಪೇಟೆ ನಗರದ ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ದೊಡ್ಮನೆ ಹುಡ್ಗನ 7.04 ಅಡಿ ಎತ್ತರದ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಪುನೀತ್ ರಾಜ್‍ಕುಮಾರ್ ಪುತ್ಥಳಿಯನ್ನಆಂಧ್ರಪ್ರದೇಶದ ಗುಂಟೂರಿನ ತೆನಾಲಿಯಿಂದ ತರಿಸಲಾಗಿದೆ. 


[[{"fid":"242685","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ : "ಜವಾನ್" ಆಗಿ ಬರಲಿದ್ದಾರೆ ನಟ ಶಾರುಖ್ ಖಾನ್..!


ಈ ಕಾರ್ಯಕ್ರಮವನ್ನು ಹೊಸಪೇಟೆಯ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು  ಆಯೋಜನೆ ಮಾಡಿದ್ದಾರೆ. ಅಪ್ಪು ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ನಟ ಶ್ರೀಮುರುಳಿ, ಅಜಯ್ ರಾವ್, ನಿರ್ದೇಶಕರಾದ ಸಂತೋಷ್ ಆನಂದ್ ರಾಮ್, ಚೇತನ್, ಸಚಿವ ಆನಂದ್ ಸಿಂಗ್  ಅವರಿಗೆ ಸೇರಿದಂತೆ ಅನೇಕ ಗಣ್ಯರಿಂದ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ