ರಾಮಾಚಾರಿ 2.0 ಸಿನಿ ತಂಡಕ್ಕೆ ರಾಘಣ್ಣ ಸಾಥ್‌..! ಚಿತ್ರದ ಟ್ರೇಲರ್ ರಿಲೀಸ್‌

ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ತೇಜ್, ಆನಂತರ ಕನ್ನಡ, ತಮಿಳಿನ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಸದ್ಯ ತೇಜ್ ನಟಿಸಿರುವ "ರಾಮಾಚಾರಿ 2.0" ಚಿತ್ರದ ಟ್ರೇಲರ್ ಅನಾವರಣವಾಗಿದೆ. ರಾಘವೇಂದ್ರ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. 

Written by - YASHODHA POOJARI | Edited by - Krishna N K | Last Updated : Feb 28, 2023, 12:50 PM IST
  • ರಾಮಾಚಾರಿ 2.0 ಸಿನಿ ತಂಡಕ್ಕೆ ಡಾ ರಾಘವೇಂದ್ರ ರಾಜ್‌ಕುಮಾರ್‌ ಸಾಥ್‌.
  • ತೇಜ್ ನಟಿಸಿರುವ "ರಾಮಾಚಾರಿ 2.0" ಚಿತ್ರದ ಟ್ರೇಲರ್ ಅನಾವರಣವಾಗಿದೆ.
  • ರಾಘವೇಂದ್ರ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು.
ರಾಮಾಚಾರಿ 2.0 ಸಿನಿ ತಂಡಕ್ಕೆ ರಾಘಣ್ಣ ಸಾಥ್‌..! ಚಿತ್ರದ ಟ್ರೇಲರ್ ರಿಲೀಸ್‌ title=

Ramachari 2.0 trailer : ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ತೇಜ್, ಆನಂತರ ಕನ್ನಡ, ತಮಿಳಿನ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಸದ್ಯ ತೇಜ್ ನಟಿಸಿರುವ "ರಾಮಾಚಾರಿ 2.0" ಚಿತ್ರದ ಟ್ರೇಲರ್ ಅನಾವರಣವಾಗಿದೆ. ರಾಘವೇಂದ್ರ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. 

ಬಾಲನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ  ತೇಜ್ ಅವರು ಪ್ರವೀಣ್ ನಾಯಕ್ ನಿರ್ದೇಶನದ "ಮೀಸೆ ಚಿಗುರಿದಾಗ" ಚಿತ್ರದಲ್ಲಿ ಅಭಿನಯಿಸಿದ್ದರು.ಪಾರ್ವತಮ್ಮ ರಾಜಕುಮಾರ್, ಪುನೀತ್ ರಾಜಕುಮಾರ್ ಆ ಚಿತ್ರದಲ್ಲಿ ನಟಿಸಲು ಇವರಿಗೆ ಅವಕಾಶ ನೀಡಿದ್ದರು. ತಮಿಳಿನ‌ ಕೆಲವು ಚಿತ್ರಗಳಲ್ಲೂ ತೇಜ್ ಅವರು ನಟಿಸಿ ಸೈ ಅನಿಸಿಕೊಂಡಿದ್ದಾರೆ.
ಮೂರು ವರ್ಷಗಳ ಹಿಂದೆ "ರಿವೈಂಡ್"  ಅನ್ನೋ ಚಿತ್ರ‌ ಮಾಡಿದ್ದರು. "ನಾಗರಹಾವು" ಕಾಲದಿಂದಲೂ "ರಾಮಾಚಾರಿ" ಎಂಬ ಹೆಸರಿಗೆ ಅದರದೇ ಆದ ವಿಶೇಷ ಸ್ಥಾನ. ಸುಮಾರು ಜನ ಈ ಶೀರ್ಷಿಕೆಗೆ ಅರ್ಜಿ ಹಾಕಿದ್ದರು. ತೇಜ್ ಅವರಿಗೆ ಸಿಕ್ಕಿದ್ದು ನನ್ನ ಪುಣ್ಯ ಅಂತ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ʼಕಬ್ಜʼ ಚಿತ್ರದ ವಿಶೇಷ ವರದಿ, ಕಲರ್ ಫುಲ್ ಕವರ್‌ಪೇಜ್ ಮತ್ತು ಪೋಸ್ಟರ್ ರಿಲೀಸ್..!

"ರಾಮಾಚಾರಿ 2.0" ವಿಭಿನ್ನ ಕಥೆಯುಳ್ಳ ಸಿನಿಮಾ. ರಾಘವೇಂದ್ರ ರಾಜಕುಮಾರ್  ಅವರು ಇಲ್ಲಿ ನಾಯಕ ತೇಜ್ ಅವರ ತಂದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನನ್ನನ್ನು ಮಗ ಎಂದು ಕರೆಯುವ ರಾಘಣ್ಣ ಅವರು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು ಖುಷಿಯಾಗಿದೆ. ಏಪ್ರಿಲ್ 7ರಂದು ಚಿತ್ರ ಬಿಡುಗಡೆಯಾಗಲಿದೆ. ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ, ನಿರ್ಮಾಪಕ ಹಾಗೂ ನಾಯಕ ತೇಜ್.

ಇನ್ನೂ ರಾಘವೇಂದ್ರ ರಾಜ್ ಕುಮಾರ್ ಅವರು ಮಾತನಾಡಿ  ತೇಜ್ ಅವರು ನಂಗೆ ಕಥೆ ಹೇಳಿ, ನೀವು ಪಾತ್ರ ಮಾಡಬೇಕೆಂದರು. ನಾನು ನಿರ್ದೇಶಕರ ನಟ. ನಿರ್ದೇಶಕರು ಹೇಳಿದ ಹಾಗೆ ಕೇಳುತ್ತೇನೆ. ನಾನು ತೇಜ್ ಅವರ ತಂದೆಯಾಗಿ ಈ ಚಿತ್ರದಲ್ಲಿ ನಟಿಸಿದ್ದೇನೆ. ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ರಾಘವೇಂದ್ರ ರಾಜಕುಮಾರ್.

ಇದನ್ನೂ ಓದಿ: "ಆಗ ನನಗೆ 19 ವರ್ಷ.. ಆ ನಿರ್ಮಾಪಕ ಬಾತ್‌ರೂಮ್‌ಗೆ ಹಿಂಬಾಲಿಸಿದ್ರು.." ಮುಂದೆ?

ಚಿತ್ರದಲ್ಲಿ ನಟಿಸಿರುವ ಕೌಸ್ತುಭ, ಚಂದನ, ವಿಜಯ್ ಚೆಂಡೂರ್, ಮುನಿಕೃಷ್ಣ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರದ ಬಗ್ಗೆ ಮಾತನಾಡಿದರು. ಸ್ಪರ್ಶ ರೇಖ, ಸ್ವಾತಿ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಟೈಟಲ್ಲೇ ಡಿಫರೆಂಟ್ ಆಗಿರೋವಾಗ ಇನ್ನೂ ಸಿನಿಮಾ ಸ್ಟೋರಿ ಕೂಡ ಅಷ್ಟೇ ಥ್ರಿಲ್ ಕೊಡಬೋದು ಅಂತ ಇಡೀ ಗಾಂಧಿನಗರ ಮಾತನಾಡಿಕೊಳ್ಳುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News