Raj B. Shetty: ಹಿಸ್ಟರಿ ಕ್ರಿಯೇಟ್ ಮಾಡಲಿರುವ ‘ಟೋಬಿ’ ಸಿನಿಮಾದ ಟ್ರೈಲರ್ ಇಂದು ರಿಲೀಸ್!

Toby Kannada Movie trailer: ಕುರುಚಲು ಗಡ್ಡ, ಮೂಗಿನಲ್ಲಿ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ ಹೀಗೆ ರಾ ಲುಕ್‍ನಲ್ಲಿ ಕಾಣಿಸಿಕೊಂಡಿರೋ ರಾಜ್ ಬಿ ಶೆಟ್ಟಿಯ ನರ್ತನ ಹೇಗಿರಬಹುದು ಅನ್ನೋ ಕುತೂಹಲ ಸಹಜವಾಗಿ ಮೂಡಿದೆ.

Written by - YASHODHA POOJARI | Edited by - Puttaraj K Alur | Last Updated : Aug 4, 2023, 02:24 PM IST
  • ರಾಜ್ ಬಿ ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ
  • ಭಾರೀ ನಿರೀಕ್ಷೆ ಮೂಡಿಸಿರುವ ‘ಟೋಬಿ’ ಸಿನಿಮಾ ಟ್ರೈಲರ್ ಇಂದು ಬಿಡುಗಡೆಯಾಗಲಿದೆ
  • ರಾ ಲುಕ್‍ನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿರುವ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ
Raj B. Shetty: ಹಿಸ್ಟರಿ ಕ್ರಿಯೇಟ್ ಮಾಡಲಿರುವ ‘ಟೋಬಿ’ ಸಿನಿಮಾದ ಟ್ರೈಲರ್ ಇಂದು ರಿಲೀಸ್!   title=
‘ಟೋಬಿ’ ಟ್ರೈಲರ್ ಇಂದು ಬಿಡುಗಡೆ

ಬೆಂಗಳೂರು: ರಾಜ್ ಬಿ ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ. ನಿಮಗೆಲ್ಲ ಗೊತ್ತಿರೋ ಹಾಗೇ ಈ ಸಿನಿಮಾ ಇದೇ ತಿಂಗಳ 25ಕ್ಕೆ ರಿಲೀಸ್ ಆಗುತ್ತಿದೆ. ಚಿತ್ರತಂಡ ಕೂಡ ಪ್ರಮೋಷನ್‍ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದೆ. ರಾಜ್ ಬಿ ಶೆಟ್ಟಿ ನಟನೆಯಲ್ಲಿ ರಾಕ್ಷಸ ಅನ್ನೋದು ಪ್ರತಿಯೊಬ್ಬರಿಗೂ ಗೊತ್ತು. ಮಲ್ಟಿ ಟ್ಯಾಲೆಂಟ್ ಇರೋ ರಾಜ್ ಬಿ ಶೆಟ್ಟಿಗೆ ‘ಟೋಬಿ’ ಸಿನಿಮಾ ದೊಡ್ಡ ಹಿಟ್ ಕೊಡುತ್ತೆ ಅನ್ನೋದು ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಮ್ಯಾಟರ್.

ಕುರುಚಲು ಗಡ್ಡ, ಮೂಗಿನಲ್ಲಿ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ ಹೀಗೆ ರಾ ಲುಕ್‍ನಲ್ಲಿ ಕಾಣಿಸಿಕೊಂಡಿರೋ ರಾಜ್ ಬಿ ಶೆಟ್ಟಿಯ ನರ್ತನ ಹೇಗಿರಬಹುದು ಅನ್ನೋ ಕುತೂಹಲ ಸಹಜವಾಗಿ ಎಲ್ಲರಲ್ಲೂ ಮೂಡಿದೆ. ವಿಭಿನ್ನ ಪೋಸ್ಟರ್ ನೋಡಿದ ಪ್ರತಿಯೊಬ್ಬರೂ ಟ್ರೈಲರ್ ನೋಡಲು ಕಾತುರದಿಂದ ಕಾಯುತ್ತಿದ್ದರು. ಫೈನಲಿ ಇಂದು(ಆಗಸ್ಟ್ 4) ಟ್ರೈಲರ್ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ಸಿನಿರಸಿಕರ ಮನಗೆದ್ದ "ಕೌಸಲ್ಯ ಸುಪ್ರಜಾ ರಾಮ"

ಕನ್ನಡದ ಕಥೆಗಾರ ಮತ್ತು ಬರಹಗಾರ ಟಿ.ಕೆ.ದಯಾನಂದ್ ‘ಟೋಬಿ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ‘ನಾನು ಕಾರವಾರದಲ್ಲಿ ಕಂಡ ಒಬ್ಬ ವಿಲಕ್ಷಣ ವ್ಯಕ್ತಿತ್ವದ ವ್ಯಕ್ತಿಯ ಕಥೆಯಿದು. ನೀವೊಬ್ಬರನ್ನು ನೋಡಿದಾಗ ಅವರು ಇಂತಹವರು ಅಂತಾ ಹೇಳಬಹುದು. ಆದರೆ ಈ ವ್ಯಕ್ತಿಯನ್ನು ಆ ರೀತಿ ಹೇಳಲಾಗದು. ನಾನು ಆತನ ಕುರಿತು ಕಥೆ ಬರೆದಿದ್ದೇನೆ. ಅದು ಈಗ ‘ಟೋಬಿ’ ಚಿತ್ರವಾಗಿದೆ ಎಂದು ಟಿ.ಕೆ.ದಯಾನಂದ್ ತಿಳಿಸಿದ್ದಾರೆ. ಅದೇನೇ ಇರಲಿ ‘ಟೋಬಿ’ ಸಿನಿಮಾ ಕನ್ನಡ ಇಂಡಸ್ಟ್ರಿಯನ್ನು ಇನ್ನೊಂದು ಲೆವೆಲ್ಲಿಗೆ ಪಕ್ಕಾ ಕೊಂಡೋಗುತ್ತೆ ಅಂತಾ ಫ್ಯಾನ್ಸ್ ಕೂಡ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲಂಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋಸ್ ಮತ್ತು ಸ್ಮೂತ್ ಸೈಲರ್ಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಈ ಚಿತ್ರದಲ್ಲಿ ರಾಜ್‍ ಬಿ ಶೆಟ್ಟಿಯೊಂದಿಗೆ ನಟಿಯರಾದ ಸಂಯುಕ್ತಾ ಹೊರನಾಡು, ಚೈತ್ರಾ ಆಚಾರ್ ಮುಂತಾದವರು ನಟಿಸಿದ್ದಾರೆ.   

ಇದನ್ನೂ ಓದಿ: ತೋತಾಪುರಿ ಒಂದು ತಿಂದಾಯ್ತು...! ಎರಡನೇ ತೋತಾಪುರಿ ಸವಿಯಲು ನೀವು ರೆಡಿನಾ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News