ಬೆಂಗಳೂರು : ಆರೋನ್ ಕಾರ್ತಿಕ್ ನಿರ್ದೇಶನದ, ಶಿವಪೂರ್ಣ(ಲೋಕೇಶ್) ಹಾಗೂ ಮುತ್ತುರಾಜ್ ನಿರ್ಮಾ‌ಣ ಮಾಡುತ್ತಿರುವ, ಆರೋನ್ ಕಾರ್ತಿಕ್ ನಿರ್ದೇಶನದ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ಶಿವಾಜಿ ಬಹದ್ದೂರ್" ಚಿತ್ರದ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. 


COMMERCIAL BREAK
SCROLL TO CONTINUE READING

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ನಿರ್ದೇಶಕ ಹೆಚ್ ವಾಸು, ಸ್ವಸ್ತಿಕ್ ಶಂಕರ್, ನಟ ಷಣ್ಮುಖ ಗೋವಿಂದರಾಜು, ಗಾಯಕ ಆಲೂರು ನಾಗಪ್ಪ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಸೇರಿದಂತೆ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.


ಇದನ್ನೂ ಓದಿ: 'ಸಲಾರ್' ಟ್ರೇಲರ್‌ ಕನ್ನಡ ಭಾಷೆಯಲ್ಲಿ ರಿಲೀಸ್ ಆಗಲ್ಲ: ಹೊಂಬಾಳೆ ಸಂಸ್ಥೆಯ ಈ ನಿರ್ಧಾರಕ್ಕೆ ಕಾರಣವೇನು?


"ಶಿವಾಜಿ ಬಹದ್ದೂರ್" ಎಂದರೆ ಎರಡು ಪಾತ್ರಗಳ ಹೆಸರು ಎಂದು ಮಾತನಾಡಿದ ನಿರ್ದೇಶಕ ಆರೋನ್ ಕಾರ್ತಿಕ್, ನಮ್ಮ ಚಿತ್ರದಲ್ಲಿ ಶಿವಾಜಿ ಎಂಬುದು ಪ್ರಧಾನ ಮಂತ್ರಿ ಪಾತ್ರದ ಹೆಸರು. ಬಹದ್ದೂರ್ ಎಂದರೆ ಮುಖ್ಯಮಂತ್ರಿ ಪಾತ್ರದ ಹೆಸರು. ಶಿವಾಜಿ ಪಾತ್ರದ ಧ್ವನಿ ಮಾತ್ರ ಸಿನಿಮಾದಲ್ಲಿ ಕೇಳುತ್ತದೆ. ಬಹದ್ದೂರ್ ಅಂದರೆ ಮುಖ್ಯಮಂತ್ರಿ ಪಾತ್ರದಲ್ಲಿ ರಾಜ್ ಬಹದ್ದೂರ್ ನಟಿಸುತ್ತಿದ್ದಾರೆ. 


ಪ್ರಪಂಚಕ್ಕೆ ಮಾರಕವಾಗಿರುವ ಉಗ್ರವಾದ(ಭಯೋತ್ಪಾದನೆ) ತಡೆಗಟ್ಟಲು ಹೋರಾಡುವ ಉತ್ತಮ ಮುಖ್ಯಮಂತ್ರಿಯಾಗಿ ರಾಜ್ ಬಹದ್ದೂರ್ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ವಿಲನ್ ಪಾತ್ರದಲ್ಲಿ ಖ್ಯಾತ ನಟ ಅಮೀರ್ ಖಾನ್ ಸಹೋದರ ಫೈಸಲ್ ಖಾನ್ ನಟಿಸಲಿದ್ದಾರೆ. "ರಂಗಿನ ರಾಟೆ" ಖ್ಯಾತಿಯ ರಾಜೀವ್ ರಾಥೋಡ್, ಪಲ್ಲವಿ ಪ್ರಕಾಶ್, ಸುಶ್ಮಿತ, ಶೋಭ, ಗಣೇಶ್ ರಾವ್ ಮುಂತಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಸಂಗೀತ ನಿರ್ದೇಶನವನ್ನು ನಾನೇ ಮಾಡುತ್ತಿದ್ದೇನೆ ಎಂದು ತಿಳಿಸಿದರು.


ಇದನ್ನೂ ಓದಿ: BBK10: "ಇದು ನನ್ನ ಟೀಂಗೆ ಮಾಡಿದ ಮೋಸ ಒಂದೇ ಅಲ್ಲ, ನನಗೆ ನಾನೇ ಮಾಡಿಕೊಂಡ ಮೋಸ": ಮೈಕಲ್ ಅಜಯ್


ರಜನಿಕಾಂತ್ ಹಾಗೂ ತಮ್ಮ ಸ್ನೇಹದ ಕುರಿತು ಮಾಹಿತಿ ನೀಡಿದ ನಟ ರಾಜ್ ಬಹದ್ದೂರ್, ರಜನಿಕಾಂತ್ ಅವರಿಗೆ ನಾನು ಈ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ತಿಳಿಸಿದೆ. ತುಂಬಾ ಖುಷಿಪಟ್ಟರು. ಚಿತ್ರ ಸಿದ್ದವಾದ ಮೇಲೆ ಬಂದು ನೋಡುವುದಾಗಿಯೂ ಹೇಳಿದ್ದಾರೆ. ನಾನು ಈ ಹಿಂದೆ ರಜನಿ ಅವರ ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದೆ. 


ಮೈನ್ ಲೀಡ್ ನಲ್ಲಿ ನಟಿಸುತ್ತಿರುವ ಮೊದಲ ಚಿತ್ರವಿದು. ನಾನು ನಟಿಸುತ್ತಿರುವ ವಿಷಯ ತಿಳಿದು ಇಲ್ಲಿನ ರಜನಿಕಾಂತ್ ಅಭಿಮಾನಿಗಳು ತುಂಬಾ ಸಂತೋಷ ಪಟ್ಟಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಕಾಯುತ್ತಿರುವುದಾಗಿಯೂ ಹೇಳಿದ್ದಾರೆ. ರಜನಿಕಾಂತ್ ಅಭಿಮಾನಿಗಳು ಸಿನಿಮಾ ನೋಡಿದರೆ ಸಿನಿಮಾ ಗೆದ್ದ ಹಾಗೆ ಎಂದರು ನಟ ರಾಜ್ ಬಹದ್ದೂರ್.


ನಮ್ಮ ಮೊದಲ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕರಾದ ಶಿವಪೂರ್ಣ ಹಾಗೂ ಮುತ್ತುರಾಜ್. ಚಿತ್ರದಲ್ಲಿ ನಟಿಸುತ್ತಿರುವ ರಾಜೀವ್ ರಾಥೋಡ್, ಪಲ್ಲವಿ ಪ್ರಕಾಶ್, ಸುಶ್ಮಿತ, ಶೋಭ, ಗಣೇಶ್ ರಾವ್ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.