ಉಜ್ಜೈನಿ: ಬಾಲಿವುಡ್‌ ಸ್ಟಾರ್‌ ದಂಪತಿ ರಣಬೀರ್‌ ಕಪೂರ್‌ ಮತ್ತು ಆಲಿಯಾ ಭಟ್‌ಗೆ ಪ್ರಸಿದ್ಧ ಮಹಾಕಾಲ್‌ ದೇಗುಲ ಪ್ರವೇಶ ನಿರಾಕರಿಸಲಾಗಿದೆ.


COMMERCIAL BREAK
SCROLL TO CONTINUE READING

ಬ್ರಹ್ಮಾಸ್ತ್ರ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ರಣಬೀರ್‌ ಕಪೂರ್‌ ಮತ್ತು ಆಲಿಯಾ ಭಟ್‌ ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ನಿರ್ಧರಿಸಿದ್ದರು. ಆದ್ರೆ, ಸಂದರ್ಶನವೊಂದರಲ್ಲಿ ಗೋಮಾಂಸ ತಿನ್ನಲು ಇಷ್ಟ ಎಂದು ರಣಬೀರ್‌ ಹೇಳಿಕೆ ನೀಡಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅರೋಪಿಸಿ ಬಜರಂಗದಳ ಕಾರ್ಯಕರ್ತರು ದೇಗುಲ ಪ್ರವೇಶಕ್ಕೆ ದಂಪತಿಗೆ ತಡೆ ಒಡ್ಡಿದ್ದಾರೆ. ಹಾಗೂ ರಣಬೀರ್ ಮತ್ತು ಆಲಿಯಾ ಸ್ಥಳಕ್ಕೆ ಬರುತ್ತಿದ್ದಂತೆ ‘ಜೈ ಶ್ರೀರಾಮ್‘ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: Actress Tabu : ಮಗು ಬೇಕಂದ್ರೆ ಮದುವೆ ಆಗ್ಬೇಕು ಅಂತೇನಿಲ್ಲ - ನಟಿ ತಬು


ಇದರಿಂದಾಗಿ ರಣಬೀರ್‌ ಕಪೂರ್‌ ಜೊತೆ ಬಂದಿದ್ದ ಅಯಾನ್ ಮುಖರ್ಜಿ ಒಬ್ಬರೆ ದೇವರ ದರ್ಶನ ಪಡೆಯುವಂತಾಯಿತು. ಸದ್ಯ ಅಯಾನ್ ಮುಖರ್ಜಿ ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.