Sathyam Movie Teaser: ನಟಿ ರಂಜನಿ ರಾಘವನ್‌ ಅಭಿನಯದ  ʼಸತ್ಯಂʼ ಚಿತ್ರ ಇದೀಗ ಬಿಡುಗಡೆಯ ಹಂತಕ್ಕೆ ತಲುಪಿದ್ದು, ಆಧ್ಯಾತ್ಮಕ ಚಿಂತಕರಾದ ಜಂಬುನಾಥ್ ಸ್ವಾಮಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.  ಶ್ರೀ ಮಾತಾ ಕ್ರಿಯೇಶನ್ಸ್ ಮೂಲಕ ಮಾಂತೇಶ್ ವಿಕೆ. ಈ ಚಿತ್ರವನ್ನು ನಿರ್ಮಿಸಿದ್ದು,  ತಮ್ಮ ಬ್ಯಾನರ್ ಮೂಲಕ ಸದಭಿರುಚಿಯ  ಚಿತ್ರವನ್ನು ನೀಡುವುದು ನಮ್ಮ ಉದ್ದೇಶ, ಅಶೋಕ್ ಕಡಬ ಅವರು ಈ ಕಥೆ ತಂದಾಗ ವಿಶೇಷ ಅನಿಸಿತು. ಎರಡು ಕಾಲಘಟ್ಟಗಳಲ್ಲಿ ನಡೆಯೋ ಕಥೆಯಿದು ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಜಮೀನ್ದಾರ್ ಕುಟುಂಬದ ಎಳೆಯೊಂದಿಗೆ ಪ್ರಸ್ತುತ ಬದುಕಿನ ಕಥೆಯೂ ಬೆಸೆದುಕೊಂಡು, ತಾತ ಮೊಮ್ಮಗನ ಕಥೆ ತುಂಬಾ ವಿಶೇಷವಾಗಿದೆ. ತಾತನಾಗಿ ಹಿರಿಯ ನಟ ಸುಮನ್ ಹಾಗೂ ಮೊಮ್ಮಗನಾಗಿ ಸಂತೋಷ್ ಅಭಿನಯಿಸಿದ್ದು, ನಾಯಕಿಯಾಗಿ ರಂಜಿನಿ ರಾಘವನ್  ಉತ್ತಮ ಅಭಿನಯ  ನೀಡಿದ್ದಾರೆ.  ಇದೊಂದು ಫ್ಯಾಮಿಲಿ ಕಂಟೆಂಟ್ , ಥ್ರಿಲ್ಲರ್ ಚಿತ್ರವಾಗಿದ್ದ, ಸಿನಿಮಾದ ವಿತರಣೆ ಹಕ್ಕನ್ನು ನಿರ್ಮಾಪಕ ಕೆ.ಎ. ಸುರೇಶ್ ವಹಿಸಿಕೊಂಡಿದ್ದಾರೆ. ಸದ್ಯದಲ್ಲೆ  ಟ್ರೈಲರ್ , ಹಾಡುಗಳು ಬಿಡುಗಡೆ ಮಾಡಿ, ಡಿಸೆಂಬರ್ ವೇಳೆಗೆ ತೆರೆಗೆ ತರುವ  ಪ್ಲಾನ್ ಮಾಡಿದ್ದಾರೆ.


ಇದನ್ನು ಓದಿ: ನಾವಿಬ್ಬರೂ ಬಹಳ ವರ್ಷದಿಂದ ......ಈ ನಟನ ಜೊತೆಗಿನ ಸಂಬಂಧದ ಬಗ್ಗೆ ಸತ್ಯ ಬಾಯಿ ಬಿಟ್ಟ ಅನನ್ಯ ಪಾಂಡೆ !


ಟೀಸರ್‌ ಲಾಂಚ್‌ ಇವೆಂಟ್‌ನಲ್ಲಿ, ನಿರ್ದೇಶಕ ಅಶೋಕ್ ಕಡಬ ಮಾತನಾಡುತ್ತಾ ಇದೊಂದು ಫ್ಯಾಮಿಲಿ ಎಂಟೈನರ್.  ಪಂಜುರ್ಲಿ ದೈವ ಆರಾಧಿಸುವ ರಾಜಮನೆತನದ ಕುಟುಂಬದಲ್ಲಿ ಒಂದು ಕಳಂಕ ನಡೆದಿರುತ್ತದೆ ಅದರಿಂದ  ಸಾವು ನೋವುಗಳು ಆಗಿದ್ದು, ಅದರಲ್ಲಿ ಒಂದು ವಂಶದ ಕುಡಿ ಸುಮಾರು 40 ವರ್ಷದ ನಂತರ ಭೂತ ಕೋಲದ ಪೂಜೆಗೆಂದು ಆ ಊರಿಗೆ ಬಂದಾಗ ನಡೆಯುವ ಕಥೆಯಿದು. ಮೂರು ಶೇಡ್ ಗಳು ಇರುವ ಈ ಚಿತ್ರಕ್ಕೆ ದೊಡ್ಡ ಮಟ್ಟದ ಸೆಟ್ ಗಳನ್ನು ಹಾಕಿದ್ದೆವು. 


ನಿರ್ದೇಶಕ ಅಶೋಕ್‌ ಕಡಬ ಮಾತನಾಡುತ್ತಾ "2019ರಲ್ಲೇ ನಾವೀ ಕಥೆ ಮಾಡಿದ್ದೆವು, ಕಾಂತಾರ ಬರುವ ಮುಂಚೆಯೇ ಈ ಸಬ್ಜೆಕ್ಟ್ ರೆಡಿ ಇತ್ತು. ಈ ಚಿತ್ರದ ಟೀಸರ್ ನಲ್ಲಿ ಕಾಣುವ ಹುಲಿ ಉಗುರು  ಒರಿಜಿನಲ್ ಅಲ್ಲ. ಕಾಸ್ಟ್ಯೂಮರ್ ಕೊಟ್ಟಿರುವ ಡುಪ್ಲಿಕೇಟ್ ಉಗುರು ಎಂದರು. ಹಾರರ್, ಸಸ್ಪೆನ್ಸ್ , ಲವ್ ಕಂಟೆಂಟ್  ಒಳಗೊಂಡ ಚಿತ್ರವನ್ನು ಕನ್ನಡ,  ತೆಲುಗು ಭಾಷೆಯಲ್ಲಿ ಮಾಡಿದ್ದೇವೆ.  ರವಿ ಬಸ್ರೂರು  ಸಂಗೀತ  ಅದ್ಭುತವಾಗಿ ಮ್ಯೂಸಿಕ್ ಮಾಡಿದ್ದಾರೆ.  ಸಿನಿಟೆಕ್ ಸೂರಿ ಕ್ಯಾಮೆರಾ ವರ್ಕ್  ಚಿತ್ರಕ್ಕಿದೆ. ಕೆ. ವಿ. ರಾಜು  ಒಂದಿಷ್ಟು ಚಿತ್ರಕಥೆ, ಸಂಭಾಷಣೆ  ಬರೆದಿದ್ದು, ಅದನ್ನು  ಕಿನ್ನಲ್ ರಾಜ್  ಪೂರ್ಣಗೊಳಿಸಿ, ಒಂದು ಹಾಡನ್ನೂ ಬರೆದಿದ್ದಾರೆ" ಎಂದು ಮಾಹಿತಿ ನೀಡಿದರು.


ಇದನ್ನು ಓದಿ: ವಿನೋದ್‌ ಪ್ರಭಾಕರ್‌ ಅಭಿನಯದ ಬಹುನಿರೀಕ್ಷಿತ ಚಿತ್ರ: ʼನೆಲ್ಸನ್‌ಗೆ ನಾಯಕಿ ಯಾರು ಗೊತ್ತೇ?


ಚಿತ್ರದ ನಾಯಕ  ಸಂತೋಷ್ ಬಾಲರಾಜ್ ಮಾತನಾಡುತ್ತ ನಾನು ಈ ಹಿಂದೆ ಮಾಡಿದ  ಕೆಂಪ, ಕರಿಯ-2,  ಗಣಪ ಸಿನಿಮಾಗಳೇ ಒಂದಾದರೆ, ಇದು ಆ ಮೂರಕ್ಕಿಂತ ಡಿಫ್ರೆಂಟ್ ಆಗಿ ಮೂಡಿ ಬಂದಿರುವ ಚಿತ್ರ. ನನ್ನ ಪಾತ್ರದ ಹೆಸರು ಸತ್ಯ, ನನ್ನ ತಂದೆ ಬದುಕಿದ್ದರೆ  ತುಂಬಾ ಇಷ್ಟಪಡುತ್ತಿದ್ದರು. ಆರಂಭದಲ್ಲಿ ಈ ಕಥೆಯನ್ನು ಒಪ್ಪಿ ಇದೊಂದು  ಉತ್ತಮ ಚಿತ್ರವಾಗಿ ಮೂಡಿಬರುತ್ತೆ ಅಂದಿದ್ದರು.  ನನಗೆ ದರ್ಶನ್ ಅವರ ಸಪೋರ್ಟ್ ಕೂಡ ತುಂಬಾ ಇದೆ. ಬಹಳ ಗ್ಯಾಪ್ ಆಗಿತ್ತು, ಇನ್ನಷ್ಟು ವಿಭಿನ್ನ ಚಿತ್ರಗಳ ಮೂಲಕ ನಿಮ್ಮ ಮುಂದೆ ಬರುತ್ತೇನೆ ಎಂದರು.


ಸಿನಿಮಾದ ನಾಯಕಿ ರಂಜಿನಿ ರಾಘವನ್ ಮಾತನಾಡುತ್ತ ಸತ್ಯಂ ಟೀಸರ್ ಗಾಗಿ ನಾನು ತುಂಬಾ ಕಾದಿದ್ದೆ. ಅಚಾನಕ್ಕಾಗಿ ನಾನೀ ಚಿತ್ರತಂಡಕ್ಕೆ  ಸೇರ್ಪಡೆಯಾದೆ.  ನನ್ನ ಪಾತ್ರ ಚಿತ್ರದ ಕಥೆಗೆ ಟರ್ನಿಂಗ್ ಪಾಯಿಂಟ್ ಆಗಿದ್ದು , ಕಥೆಯ ಜೊತೆಗೇ ಸಾಗುತ್ತೆ. ಸಂತೋಷ್ ಅವರ ಸಪೋರ್ಟ್ ಚೆನ್ನಾಗಿತ್ತು, ಚಿತ್ರದ ಹಾಡುಗಳು ಚೆನ್ನಾಗಿ ಬಂದಿದೆ ಎಂದರು. ನಂತರ ಸಾಹಿತಿ ಹಾಗೂ ಸಂಭಾಷಣೆಕಾರ ಕಿನ್ನಲ್ ರಾಜ್ , ಛಾಯಾಗ್ರಹಕ ಸಿನಿಟೆಕ್ ಸೂರಿ, ಮೊದಲ ಬಾರಿಗೆ ಬೇರೆ ಬ್ಯಾನರ್ ಚಿತ್ರವನ್ನು ವಿತರಣೆ ಮಾಡುತ್ತಿರುವ  ಕೆ.ಎ.ಸುರೇಶ್ ಚಿತ್ರದ ಕುರಿತಂತೆ ಮಾತನಾಡಿದರು.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.