Renukaswamy Murder Case: 13 ವರ್ಷಗಳ ಬಳಿಕ ಮತ್ತೆ ಜೈಲು ಪಾಲಾದ ನಟ ದರ್ಶನ್!

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ವಿನಯ್‌, ಪ್ರದೋಶ್‌ ಮತ್ತು ಧನರಾಜ್‌ಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

Written by - Puttaraj K Alur | Last Updated : Jun 22, 2024, 04:53 PM IST
  • ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲುಪಾಲಾದ ನಟ ದರ್ಶನ್
  • 13 ವರ್ಷಗಳ ಬಳಿಕ ಮತ್ತೆ ಜೈಲು ಸೇರುವಂತಾದ ನಟ ದರ್ಶನ್‌
  • ನಟ ದರ್ಶನ್‌, ವಿನಯ್‌, ಪ್ರದೋಶ್‌ & ಧನರಾಜ್‌ಗೆ ನ್ಯಾಯಾಂಗ ಬಂಧನ
Renukaswamy Murder Case: 13 ವರ್ಷಗಳ ಬಳಿಕ ಮತ್ತೆ ಜೈಲು ಪಾಲಾದ ನಟ ದರ್ಶನ್! title=
ನಟ ದರ್ಶನ್‌ ಜೈಲುಪಾಲು!

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಪಾಲಾಗಿದ್ದಾರೆ. 13 ವರ್ಷಗಳ ಬಳಿಕ ನಟ ದರ್ಶನ್‌ ಮತ್ತೆ ಜೈಲು ಸೇರುವಂತಾಗಿದೆ.  ಇಂದು(ಜೂನ್‌ 22) ಪೊಲೀಸ್‌ ಕಸ್ಟಡಿ ಅಂತ್ಯವಾದ ಹಿನ್ನೆಲೆ ದರ್ಶನ್‌ ಅವರು 13 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಜುಲೈ 4ರವರೆಗೆ ನಟ ದರ್ಶನ್‌ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯವು ಶನಿವಾರ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ವಿನಯ್‌, ಪ್ರದೋಶ್‌ ಮತ್ತು ಧನರಾಜ್‌ಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ನಟ ದರ್ಶನ್‌ ಸೇರಿದಂತೆ ಇನ್ನುಳಿದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. 

ಇದನ್ನೂ ಓದಿ: Darshan case : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ಗೆ ಐಟಿ ಸಂಕಷ್ಟ..! ನೋಟಿಸ್ ನೀಡುವ ಸಾಧ್ಯತೆ.?

ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ A2 ಆರೋಪಿ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ‌ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ 2 ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಶನಿವಾರ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳದ ಕಾರಣ ದರ್ಶನ್ ಅಂಡ್‌ ಗ್ಯಾಂಗ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಇದೇ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಎರಡು ದಿನಗಳ ಹಿಂದಷ್ಟೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. 

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೂನ್ 11ರಂದು ನಟ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿತ್ತು. ಅಂದಿನಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಮೊದಲ ಬಾರಿ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಲಾಗಿತ್ತು. ಒಂದು ದಿನ ಮುಂಚಿತವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ 5 ದಿನಗಳ ಕಾಲ ಕಸ್ಟಡಿಗೆ ಕೇಳಲಾಗಿತ್ತು. ಇದರ ಬಳಿಕ ಮತ್ತೆ 2 ದಿನಗಳ ಕಾಲ ಕಸ್ಟಡಿಗೆ ಕೇಳಿ ಪಡೆಯಲಾಗಿತ್ತು. ಹೀಗಾಗಿ ಒಟ್ಟು 12 ದಿನಗಳ ಕಾಲ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದರು. ಇದೀಗ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ಇಂದೇ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತದೆ. ಜುಲೈ 4ರವರೆಗೆ ದರ್ಶನ್ ಅಂಡ್‌ ಗ್ಯಾಂಗ್‌ ಜೈಲು ಸೇರಬೇಕಾಗಿದೆ. 

ಇದನ್ನೂ ಓದಿ: ʼಚಿತ್ತಾರ ಸ್ಟಾರ್ ಅವಾರ್ಡ್ಸ್-2024ʼ : ನಟ ದರ್ಶನ್‌ಗೆ ʼಅತ್ಯುತ್ತಮ ನಟ ಪ್ರಶಸ್ತಿʼ..

ಬೇರೆ ಬೇರೆ ಜೈಲುಗಳಿಗೆ ವರ್ಗಾವಣೆಗೆ ಮನವಿ

ಆರೋಪಿಗಳಿಗೆ ನ್ಯಾಯಾಂಗ ಬಂಧನ ಕೋರಿ ಇಂದು ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಧೀಶ ಜಯಕುಮಾರ್ ಜಾಟ್ಲಾ ಅವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ವಿಚಾರಣೆಗೆ ಕರೆತರುವ ಮುನ್ನ ಪೊಲೀಸರು ಆರೋಪಿಗಳ ಸಂಪೂರ್ಣ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದರು. ನ್ಯಾಯಾಲಯಕ್ಕೆ ಬಂದ ಬಳಿಕವೂ ನ್ಯಾಯಾಧೀಶರು ಆರೋಪಿಗಳನ್ನುದ್ದೇಶಿಸಿ, ಪೊಲೀಸರಿಂದ ಏನಾದರೂ ಸಮಸ್ಯೆ ಆಗಿದೆಯೇ ಎಂದು ಕೇಳಿ ಮಾಹಿತಿ ಪಡೆದುಕೊಂಡರು. ಅಂತಿಮವಾಗಿ 4 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದರು.

ಇದೇ ಸಂದರ್ಭದಲ್ಲಿ ಪೊಲೀಸರ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನಕುಮಾರ್ ವಾದ ಮಂಡಿಸಿ, ʼಈ ಪ್ರಕರಣದ ಆರೋಪಿಗಳನ್ನು ಬೇರೆ-ಬೇರೆ ಜೈಲುಗಳಿಗೆ ವರ್ಗಾವಣೆ ಮಾಡುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಆರೋಪಿಗಳ ಪರ ವಕೀಲರಾದ ಪ್ರವೀಣ್ ತಿಮ್ಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರದ ಬಗ್ಗೆ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಲಾಯ್ತು. ದರ್ಶನ್ ಪರ ವಕೀಲ ಪ್ರವೀಣ್ ತಿಮ್ಮಯ್ಯ ವಾದ ಮಂಡಿಸಿದರು. ದರ್ಶನ್ ಪ್ರಕರಣದಲ್ಲಿ ಇನ್ಮುಂದೆ ಖ್ಯಾತ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆಂದು ತಿಳಿದುಬಂದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News