Renukaswamy Murder Case: ನಾಳೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ & ಗ್ಯಾಂಗ್‌ ಶಿಫ್ಟ್‌!?

Renukaswamy Murder Case: ರೇಣುಕಾಸ್ವಾಮಿ ಹತ್ಯೆ ವೇಳೆ ನಟ ದರ್ಶನ್‌ ಧರಿಸಿದ್ದ ದುಬಾರಿ ಬೆಲೆಯ ಪ್ಯಾಂಟ್‌, ಟಿ-ಶರ್ಟ್‌ ಮತ್ತು ಶೂವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದರ್ಶನ್‌ ಧರಿಸಿದ್ದ ನೀಲಿ ಬಣ್ಣದ ಜೀನ್ಸ್‌ ಪ್ಯಾಂಟ್‌ಗೆ 35 ಸಾವಿರ ರೂ. ಆದರೆ, ಶೂ ಬೆಲೆ 12 ಸಾವಿರ ರೂ. ಮತ್ತು 6,500 ರೂ. ಬೆಲೆಯ ಕಪ್ಪು ಬಣ್ಣದ ಟಿ-ಶರ್ಟ್‌ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 

Written by - Puttaraj K Alur | Last Updated : Jun 19, 2024, 11:45 PM IST
  • ನಾಳೆ ಕೋರ್ಟ್‌ಗೆ ಹಾಜರಾಗಲಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌
  • ನಾಳೆ ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ಅಂಡ್‌ ಗ್ಯಾಂಗ್‌ ಶಿಫ್ಟ್‌ ಸಾಧ್ಯತೆ
  • ಕೃತ್ಯದ ವೇಳೆ ದರ್ಶನ್‌ ಧರಿಸಿದ್ದ ದುಬಾರಿ ಬೆಲೆಯ ಬಟ್ಟೆಗಳು ವಶಕ್ಕೆ
Renukaswamy Murder Case: ನಾಳೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ & ಗ್ಯಾಂಗ್‌ ಶಿಫ್ಟ್‌!? title=
ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ಅಂಡ್‌ ಗ್ಯಾಂಗ್‌ ಶಿಫ್ಟ್‌?

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೋಲೆ ಕೇಸ್‌ನಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಜೂನ್‌ 11ರಿಂದ 9 ದಿನಗಳ ಕಾಲ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌ನ ಪೊಲೀಸ್‌ ಕಸ್ಟಡಿ ನಾಳೆ ಅಂದರೆ ಗುರುವಾರ(ಜೂನ್‌ 20) ಅಂತ್ಯವಾಗಲಿದೆ. ಹೀಗಾಗಿ ಮತ್ತೆ ಪೊಲೀಸ್‌ ಕಸ್ಟಡಿಗೆ ಕೇಳದಿರಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. 

ನಾಳೆ ದರ್ಶನ್‌ ಅಂಡ್‌ ಗ್ಯಾಂಗ್‌ನ ಪೊಲೀಸ್‌ ಕಸ್ಟಡಿ ಅವಧಿ ಮುಗಿಯುತ್ತಿರುವ ನಿಟ್ಟಿನಲ್ಲಿ ಪೊಲೀಸರು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಪೊಲೀಸರು ಮತ್ತೆ ತಮ್ಮ ವಶಕ್ಕೆ ಕೇಳುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆ ದರ್ಶನ್‌ ಅಂಡ್‌ ಗ್ಯಾಂಗ್‌ಅನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. 

ಇದನ್ನೂ ಓದಿ: ತನಿಖೆಯಲ್ಲಿ ರೋಚಕ ಟ್ವಿಸ್ಟ್ .. ಕೊಲೆ ಕೇಸ್‌ನಿಂದ ಬಚಾವಾಗಲು ಹಣ ನೀಡಿದ್ದಾರಾ ದರ್ಶನ್ & ʻಡಿʼ ಗ್ಯಾಂಗ್?!

ಒಂದು ವೇಳೆ ನಾಳೆ ಪರಪ್ಪನ ಅಗ್ರಹಾರಕ್ಕೆ ಹೋದರೆ ದರ್ಶನ್ ೨ನೇ ಬಾರಿಗೆ ಅಲ್ಲಿ ತಮ್ಮ ದಿನಗಳನ್ನು ಕಳೆಯಲಿದ್ದಾರೆ. ಈ ನಡುವೆ ರೇಣುಕಾಸ್ವಾಮಿ ಹತ್ಯೆ ವೇಳೆ ನಟ ದರ್ಶನ್‌ ಧರಿಸಿದ್ದ ದುಬಾರಿ ಬೆಲೆಯ ಪ್ಯಾಂಟ್‌, ಟಿ-ಶರ್ಟ್‌ ಮತ್ತು ಶೂವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದರ್ಶನ್‌ ಧರಿಸಿದ್ದ ನೀಲಿ ಬಣ್ಣದ ಜೀನ್ಸ್‌ ಪ್ಯಾಂಟ್‌ಗೆ 35 ಸಾವಿರ ರೂ. ಆದರೆ, ಶೂ ಬೆಲೆ 12 ಸಾವಿರ ರೂ. ಮತ್ತು 6,500 ರೂ. ಬೆಲೆಯ ಕಪ್ಪು ಬಣ್ಣದ ಟಿ-ಶರ್ಟ್‌ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 

ಕೃತ್ಯ ನಡೆದ ಬಳಿಕ ಈ ಬಟ್ಟೆಯನ್ನು ಆರ್.ಆರ್.ನಗರದ ನಿವಾಸದಲ್ಲಿ ಒಗೆದು ಒಣಗಿ ಹಾಕಲಾಗಿತ್ತು ಎನ್ನಲಾಗಿದೆ. ದರ್ಶನ್‌ ಮನೆಯಿಂದಲೇ ಈ ಬಟ್ಟೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಬಟ್ಟೆಗಳನ್ನು ವಿಧಿ ವಿಜ್ಞಾನ ವಿಭಾಗ(FSL)ಕ್ಕೆ ಹೆಚ್ಚಿನ ತನಿಖೆಗಾಗಿ ಕಳುಹಿಕೊಟ್ಟಿದ್ದು, ಬಟ್ಟೆ ಮೇಲಿರುವ ಕಲೆಗಳನ್ನು ಪತ್ತೆಹಚ್ಚಲಾಗುವುದು. ರಕ್ತದ ಕಲೆಗಳು ಅಥವಾ ಆ ವ್ಯಕ್ತಿಯ ಕೂದಲೋ ಇದ್ದರೆ ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ದರ್ಶನ್‌ ಬಟ್ಟೆಗಳನ್ನು ಇದೀಗ ಪರೀಕ್ಷೆಗೆ ಒಳಪಡಿಸಲಾಗಿದೆ. 

ಇದನ್ನೂ ಓದಿ: ದರ್ಶನ್ ಪತ್ನಿ ಇರುವ ಅಪಾರ್ಟ್ಮೆಂಟ್ ನಲ್ಲಿ ದಿನಕ್ಕೊಂದು ಸಮಸ್ಯೆ ಎದುರಾಗುತ್ತೆ : ಪ್ರಶಾಂತ ಸಂಬರಗಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News