Rishab Shetty : ಸ್ಯಾಂಡಲ್‌ವುಡ್‌ ದಿ ಡಿವೈನ್‌ ಸ್ಟಾರ್‌ ನಟ ರಿಷಬ್ ಶೆಟ್ಟಿ ಅವರಿಗೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಟ, ಅವಕಾಶಕ್ಕಾಗಿ ಧನ್ಯವಾದ ಎಂದಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ.


COMMERCIAL BREAK
SCROLL TO CONTINUE READING

ಹೌದು.. 2022 ರಲ್ಲಿ 'ಕಾಂತಾರ' ಬಿಡುಗಡೆಯಾದ ಕಾಂತಾರ ಸಿನಿಮಾದ ಮೂಲಕ ರಿಷಬ್‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕಾಂತಾರ ಚಿತ್ರವು ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು, ಅಲ್ಲದೆ, ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ದಾಖಲೆ ನಿರ್ಮಿಸಿತ್ತು.


ಇದನ್ನೂ ಓದಿ:ಇದ್ದಕ್ಕಿದ್ದಂತೆ ತಲೆ ಬೋಳಿಸಿಕೊಂಡ ಖ್ಯಾತ ನಟಿ.! ಫ್ಯಾನ್ಸ್‌ ಮುಖದಲ್ಲಿ ಆತಂಕ


ರಿಷಬ್ ಶೆಟ್ಟಿ ಅವರು ಹೆಚ್ಚಾಗಿ ಧಾರ್ಮಿಕ ಸಭೆ, ಸಮಾರಂಭಗಳಲ್ಲಿ ಭಾಗಿಯಾಗುತ್ತಾರೆ. ಇದೇ ವೇಳೆ ಜನವರಿ 22 ರಂದು ಶ್ರೀರಾಮಮಂದಿರ ಪ್ರತಿಷ್ಠಾನೆ ಹಿನ್ನಲೆ, ಅಯೋಧ್ಯೆಯಲ್ಲಿ ನಡೆಯಲಿರುವ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ರಿಷಬ್ ಶೆಟ್ಟಿ ಅವರಿಗೆ ಆಹ್ವಾನ ನೀಡಲಾಗಿದೆ.


ನಟಿ ಸಮಂತಾ- ನಾಗಜೈತನ್ಯ ಡಿವೋರ್ಸ್‌ಗೆ ಅಲ್ಲು ಅರ್ಜುನ್‌ ಈ ಸಿನಿಮಾ ಕಾರಣ.! ಏಕೆ ಗೊತ್ತಾ..?


ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನಾದಿನದ ಸಂಭ್ರಮಗಳು ನಡೆಯುತ್ತಿವೆ. ಈಗಾಗಲೇ ಪ್ರಭಾಸ್, ರಜನಿಕಾಂತ್, ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ, ಆಲಿಯಾ ಭಟ್-ರಣಬೀರ್ ಕಪೂರ್ ಮತ್ತು ರಾಮ್ ಚರಣ್ ಸೇರಿದಂತೆ ಅನೇಕ ನಟ ನಟಿಯರಿಗೆ ಆಹ್ವಾನ ನೀಡಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.