ಬೆಂಗಳೂರು: ಭಾರತ ಚಿತ್ರರಂಗಕ್ಕೆ ‘ಕೆಜಿಎಫ್’ ಎಂಬ ಅತ್ಯುತ್ತಮ ಚಿತ್ರ ನೀಡಿರುವ ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರದ ಟ್ರೈಲರ್ ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯ ಶುಭದಿನದಂದು ಬಿಡುಗಡೆಯಾಗಲಿದೆ. 


COMMERCIAL BREAK
SCROLL TO CONTINUE READING

ಈಗಾಗಲೇ ಹಲವು ವಿಶೇಷಗಳಿಂದ ‘ಕಾಂತಾರ’ ಸಿನಿಮಾ ಮನೆಮಾತಾಗಿದೆ. ಇತ್ತೀಚಿಗೆ ಬಿಡುಗಡೆಯಾದ ಕರುನಾಡ ಸಂಸ್ಕ್ರತಿಯನ್ನು ಬಿಂಬಿಸುವ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ, ವಿಜಯಪ್ರಕಾಶ್, ಅನನ್ಯ ಭಟ್ ಹಾಡಿರುವ ‘ಸಿಂಗಾರ ಸಿರಿಯೆ’ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಂದೆ ಬಿಡುಗಡೆಯಾಗಲಿರುವ ಟ್ರೈಲರ್ ಹಾಗೂ ಚಿತ್ರಕ್ಕಾಗಿ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.


ಇದನ್ನೂ ಓದಿಬೆಳ್ಳಿ ತೆರೆಗೆಯ ಮೇಲೆ ಬರಲಿದೆ ವಿರಾಟ್ ಕೊಹ್ಲಿ ಜೀವನ ಕಥನ..! ಕೊಹ್ಲಿ ಪಾತ್ರದಲ್ಲಿ ಯಾರು ಗೊತ್ತಾ?


‘ಕಾಂತಾರ’ ಚಿತ್ರವು ಮಾನವ ಮತ್ತು ಪ್ರಕೃತಿ ಸಂಘರ್ಷದ ಕುರಿತ ಕಥೆಯಾಗಿದೆ. ಈ ಸಿನಿಮಾದಲ್ಲಿ ಕಂಬಳ ಕ್ರೀಡೆ ಹೈಲೈಟ್ ಆಗಿದೆ. ಬಹುತೇಕ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ಮತ್ತು ಅರವಿಂದ್ ಎಸ್ ಕಶ್ಯಪ್ ಅವರ ಛಾಯಾಗ್ರಹಣವಿದೆ. ಈ ಸಿನಿಮಾ ಸೆಪ್ಟಂಬರ್ 30ಕ್ಕೆ ದೇಶದಾದ್ಯಂತ ತೆರೆ ಕಾಣುತ್ತಿದೆ.


ಟ್ರೈಲರ್ ಬಿಡುಗಡೆ ಹಿನ್ನೆಲೆ ಟ್ವೀಟ್ ಮಾಡಿರುವ ಹೊಂಬಾಳೆ ಫಿಲಂಸ್ ಚಿತ್ರದ ಪೋಸ್ಟರ್ ಶೇರ್ ಮಾಡಿದ್ದು, ‘ಧೈರ್ಯ, ಧೈರ್ಯ ಬರುವುದು ನಿನ್ನೊಳಗಿನ ಕಿಚ್ಚಿನಿಂದ. ಆದರೆ, ನಿನ್ನೊಳಗಿನ ಕಿಚ್ಚು ನಿನ್ನನ್ನೇ ಸುಡದಿರಲಿ’ ಎಂದು ಕ್ಯಾಪ್ಶನ್ ಬರೆದುಕೊಂಡಿದೆ.


ಇದನ್ನೂ ಓದಿ: ಪ್ರೇಮ ಪುರಾಣದಲ್ಲಿ ಬಿದ್ದ ರಕ್ಕಮ್ಮ...! ಗಳಿಸಿದ್ದೆನೇನು ಗೊತ್ತೇ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.