ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಶೂಟರ್‌ಗಳು ಅರೆಸ್ಟ್‌

Salman Khan Home Firing Case: ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂದಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ತಂಡ ತಡರಾತ್ರಿ ಇಬ್ಬರು ಶಂಕಿತರನ್ನು ಗುಜರಾತ್‌ನ ಭುಜ್ ಜಿಲ್ಲೆಯಲ್ಲಿ ಅರೆಸ್ಟ್‌ ಮಾಡಿದ್ದಾರೆ.

Written by - Chetana Devarmani | Last Updated : Apr 16, 2024, 08:27 AM IST
  • ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಪ್ರಕರಣ
  • ಇಬ್ಬರು ಶಂಕಿತರನ್ನು ಅರೆಸ್ಟ್‌ ಮಾಡಿದ ಮುಂಬೈ ಪೊಲೀಸರು
  • ಗುಜರಾತ್‌ನ ಭುಜ್‌ನಲ್ಲಿ ಸೆರೆ ಸಿಕ್ಕ ಇಬ್ಬರು ಶೂಟರ್‌ ಗಳು
ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಶೂಟರ್‌ಗಳು ಅರೆಸ್ಟ್‌ title=

ಮುಂಬೈ: ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಶೂಟರ್‌ಗಳನ್ನು ಗುಜರಾತ್‌ನ ಭುಜ್‌ನಲ್ಲಿ ಸೆರೆ ಹಿಡಿಯಲಾಗಿದೆ. ಮುಂಬೈ ಕ್ರೈಂ ಬ್ರಾಂಚ್ ತಂಡ ತಡರಾತ್ರಿ ಇಬ್ಬರು ಶಂಕಿತರನ್ನು ಗುಜರಾತ್‌ನ ಭುಜ್ ಜಿಲ್ಲೆಯಲ್ಲಿ ಅರೆಸ್ಟ್‌ ಮಾಡಿದ್ದಾರೆ. ಬಂಧಿತ ವ್ಯಕ್ತಿಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪೊಲೀಸರು ಶೀಘ್ರದಲ್ಲೇ ಬಹಿರಂಗಪಡಿಸಲಿದ್ದಾರೆ. 

ಆರೋಪಿಗಳನ್ನು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಮಸಿಹಿ ಮೂಲದ ವಿಕ್ಕಿ ಸಾಹಬ್ ಗುಪ್ತಾ (24) ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ (21) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಭಾನುವಾರ ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಘಟನೆಯಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳನ್ನು ಗುಜರಾತ್‌ನ ಭುಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rekha Life Story: ನಟಿ ರೇಖಾ ಮೊದಲ ಪತಿ ಈ ಸ್ಟಾರ್‌ ನಟ.. ಎರಡನೇ ಗಂಡ ಯಾರು ಗೊತ್ತಾ! 

ಏಪ್ರಿಲ್‌ 14 ರಂದು ಮುಂಜಾನೆ 5 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್‌ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿರಲಿಲ್ಲ. 

ಗುಂಡಿನ ದಾಳಿ ಬಳಿಕ ಆರೋಪಿಗಳು ತಮ್ಮ ಬೈಕ್ ಅನ್ನು ಚರ್ಚ್ ಬಳಿ ಬಿಟ್ಟು, ಸ್ವಲ್ಪ ದೂರ ನಡೆದು ಬಾಂದ್ರಾ ರೈಲು ನಿಲ್ದಾಣಕ್ಕೆ ಆಟೋರಿಕ್ಷಾ ಮೂಕ ತೆರಳಿದ್ದರು ಎಂದು ಅಧಿಕಾರಿಗಳು ಪತ್ತೆ ಹಚ್ಚಿದ್ದರು. ನಂತರ ಅವರು ಸಾಂತಾಕ್ರೂಜ್ ನಿಲ್ದಾಣಕ್ಕೆ ರೈಲನ್ನು ಹತ್ತಿದರು ಮತ್ತು ಮುಂದೆ ಹೋಗಲು ಮತ್ತೊಂದು ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದರು. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ವಾಂಟೆಡ್ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವಾರು ಬಾರಿ ಬೆದರಿಕೆ ಹಾಕಿದ್ದರು. ಮೂಲಗಳ ಪ್ರಕಾರ, ನಟನನ್ನು ಕೊಲ್ಲಲು ಬಿಷ್ಣೋಯ್ ಮತ್ತು ಬ್ರಾರ್ ತಮ್ಮ ಶೂಟರ್‌ಗಳನ್ನು ಮುಂಬೈಗೆ ಕಳುಹಿಸಿದ್ದರು ಎನ್ನಲಾಗಿದೆ. 1998 ರ ಕೃಷ್ಣಮೃಗ ಬೇಟೆಯ ಘಟನೆಯಿಂದಾಗಿ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡಿದೆ. ಕೃಷ್ಣಮೃಗವನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ 'ಭಾಯಿಜಾನ್'.. ಆತಂಕದಲ್ಲಿ ಫ್ಯಾನ್ಸ್ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News