ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಆರೋಪಿ ಆತ್ಮಹತ್ಯೆ ! ಪೋಲೀಸ್ ಲಾಕಪ್ ನಲ್ಲಿಯೇ ನೇಣಿಗೆ ಶರಣು

Salman Khan Firing Update:ಲಾಕಪ್‌ನಲ್ಲಿದ್ದ ಬೆಡ್ ಶೀಟ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಘಟನೆಯ ನಂತರ ಮುಂಬೈ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.

Written by - Ranjitha R K | Last Updated : May 1, 2024, 04:31 PM IST
  • ನಟ ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ
  • ಆರೋಪಿ ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿಯೇ ಆತ್ಮಹತ್ಯೆ
  • ಲಾಕಪ್‌ನಲ್ಲಿದ್ದ ಬೆಡ್ ಶೀಟ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಆರೋಪಿ ಆತ್ಮಹತ್ಯೆ ! ಪೋಲೀಸ್ ಲಾಕಪ್ ನಲ್ಲಿಯೇ ನೇಣಿಗೆ ಶರಣು  title=

Salman Khan Firing Update : ನಟ ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ನಡೆಸಿದ ಪ್ರಕರಣದ ಆರೋಪಿ ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿಯೇ  ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅನುಜ್ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಶದಲ್ಲಿದ್ದರು.ಲಾಕಪ್‌ನಲ್ಲಿದ್ದ ಬೆಡ್ ಶೀಟ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಘಟನೆಯ ನಂತರ ಮುಂಬೈ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.ಪೊಲೀಸ್ ಮೂಲಗಳ ಪ್ರಕಾರ ಆರೋಪಿ ಮರಣೋತ್ತರ ಪರೀಕ್ಷೆಯನ್ನು ಜೆಜೆ ಆಸ್ಪತ್ರೆಯಲ್ಲಿ ನಡೆಸಲಾಗುವುದು.

ಶೌಚಾಲಯದಲ್ಲಿ ನೇಣಿಗೆ ಶರಣು : 
ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಮುಂಬೈ ಕ್ರೈಂ ಬ್ರಾಂಚ್ ವಶದಲ್ಲಿದ್ದ ಅನುಜ್ ಥಾಪನ್, ಶೌಚಾಲಯದಲ್ಲಿ ಬೆಡ್‌ಶೀಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಅನುಜ್ ನನ್ನು ಮಧ್ಯಾಹ್ನ 12:30ಕ್ಕೆ ಜಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎನ್ನಲಾಗಿದೆ.

ಇದನ್ನೂ ಓದಿ : ಬಡ ಮಹಿಳೆ ಹಸಿದಾಗ, ಅವಳ ಬಾಯಿಗೆ ಆಹಾರ ಹಾಕಿ, ʼನಿಮ್ಮದನ್ನʼ ಅಲ್ಲ..! ಆ್ಯಂಕರ್ ರಶ್ಮಿ ಪೋಸ್ಟ್‌ ವೈರಲ್‌

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ :
ಅನುಜ್ ಥಾಪಸ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಲಾರೆನ್ಸ್ ಬಿಷ್ಣೋಯ್ ಸೂಚನೆಯ ಮೇರೆಗೆ ಅನುಜ್  ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಅವರಿಗೆ ಪಿಸ್ತೂಲ್ ಮತ್ತು 40 ಕಾಟ್ರಿಡ್ಜ್‌ಗಳನ್ನು ಪೂರೈಸಿದ್ದ. ನಂತರ ಈ ಇಬ್ಬರೂ ಏಪ್ರಿಲ್ 14 ರಂದು ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ 5 ಸುತ್ತು ಗುಂಡು ಹಾರಿಸಿದ್ದಾರೆ. ಇದಾದ ನಂತರ ಆ ಇಬ್ಬರೂ ಆರೋಪಿಗಳನ್ನು ಗುಜರಾತ್‌ನ ಸೂರತ್‌ನಿಂದ ಸೆರೆ ಹಿಡಿಯಲಾಯಿತು.

ಪಂಜಾಬ್‌ನಿಂದ ಕರೆ ತಂದಿದ್ದ ಪೊಲೀಸರು : 
ಅವರ ವಿಚಾರಣೆಯ ನಂತರ,ಸೋನು ಚಂದರ್ ಮತ್ತು ಅನುಜ್ ಥಾಪನ್ ಹೆಸರುಗಳು ಬೆಳಕಿಗೆ ಬಂದಿತ್ತು. ನಂತರ ಮುಂಬೈ ಪೊಲೀಸರು ಅನುಜ್  ನನ್ನು ಪಂಜಾಬ್‌ನಲ್ಲಿ ಬಂಧಿಸಿದ್ದರು. ಅಂದಿನಿಂದ ಇಬ್ಬರೂ ಆರೋಪಿಗಳು ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ವಶದಲ್ಲಿದ್ದರು. 

ಇದನ್ನೂ ಓದಿ :  'ಹೀರಾಮಂಡಿ - ದಿ ಡೈಮಂಡ್ ಬಜಾರ್' : ಸಂಜಯ್ ಲೀಲಾ ಬನ್ಸಾಲಿಯವರ ಹೊಸ ಸರಣಿ, ನೆಟ್‌ಫ್ಲಿಕ್ಸ್ ನಲ್ಲಿ ರಿಲೀಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News