Salman Khan: ಖ್ಯಾತ ಬಾಲಿವುಡ್ ನಟನಿಗೆ ಮತ್ತೆ ಜೀವ ಬೆದರಿಕೆ..! ಪೊಲೀಸ್ ಭದ್ರತಾ ಪರಿಶೀಲನೆ

Salman Khan's death threat : ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೈಲು ಪಾಲಾದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ಬೆದರಿಕೆ ಬಂದಿದ್ದು... ಮುಂಬೈ ಪೊಲೀಸರು ಮಂಗಳವಾರ ಸಲ್ಮಾನ್ ಖಾನ್‌ ಅವರ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ...  

Written by - Savita M B | Last Updated : Nov 29, 2023, 11:19 AM IST
  • ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಜೈಲಿನಲ್ಲಿದ್ದಾರೆ.
  • ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೇಸ್‌ಬುಕ್ ಪೋಸ್ಟ್
  • ಮತ್ತೊಮ್ಮೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ
Salman Khan: ಖ್ಯಾತ ಬಾಲಿವುಡ್ ನಟನಿಗೆ ಮತ್ತೆ ಜೀವ ಬೆದರಿಕೆ..! ಪೊಲೀಸ್ ಭದ್ರತಾ ಪರಿಶೀಲನೆ  title=

Salman Khan: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೈಲು ಪಾಲಾದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.. ಅವರ ಖಾತೆಯ ಮೂಲಕ ಬಾಲಿವುಡ್ ನಟನಿಗೆ ಫೇಸ್‌ಬುಕ್‌ನಲ್ಲಿ ಬೆದರಿಕೆ ಬಂದ ನಂತರ ಮುಂಬೈ ಪೊಲೀಸರು ಮಂಗಳವಾರ ಸಲ್ಮಾನ್ ಖಾನ್‌ಗೆ ಭದ್ರತೆಯನ್ನು ಪರಿಶೀಲಿಸಿದ್ದಾರೆ. 

ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆ ನಡೆಸುತ್ತಿರುವ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಜೈಲಿನಲ್ಲಿದ್ದಾರೆ. ಪಂಜಾಬಿ ಗಾಯಕ ಗಿಪ್ಪಿ ಗ್ರೇವಾಲ್ ಅವರ ವ್ಯಾಂಕೋವರ್ ನಿವಾಸದ ಮೇಲೆ ಇತ್ತೀಚೆಗೆ ನಡೆದ ದಾಳಿಯ ಬಗ್ಗೆ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೇಸ್‌ಬುಕ್ ಪೋಸ್ಟ್ ನಲ್ಲಿ ಸಲ್ಮಾನ್ ಖಾನ್ ಅವರಿಗೆ ಎಚ್ಚರಿಕೆ ನೀಡಿದ್ದರು..

ಇದೀಗ ಮತ್ತೆ "ನಿಮಗೆ ಬೇಕಾದ ಯಾವುದೇ ದೇಶಕ್ಕೆ ಪಲಾಯನ ಮಾಡಿ, ಆದರೆ ನೆನಪಿಡಿ, ಸಾವಿಗೆ ವೀಸಾ ಅಗತ್ಯವಿಲ್ಲ" ಎಂದು ಲಾರೆನ್ಸ್ ಎಚ್ಚರಿಸಿದ್ದಾರೆ. ಬೆದರಿಕೆಯ ಬಗ್ಗೆ ತಿಳಿದ ಮುಂಬೈ ಪೊಲೀಸರು ತಕ್ಷಣ ಸಲ್ಮಾನ್ ಖಾನ್ ಅವರ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ...

ಇದನ್ನೂ ಓದಿ-41 ನೇ ವಸಂತಕ್ಕೆ ಕಾಲಿಟ್ಟ ಮೋಹಕತಾರೆ..! ಅಭಿಮಾನಿಗಳಿಗೆ ಸ್ಪೆಷ್ಟಲ್ ಗಿಫ್ಟ್ ನೀಡ್ತಾರಾ ರಮ್ಯಾ?

ಈ ವರ್ಷದ ಮಾರ್ಚ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ ಇ-ಮೇಲ್ ಬಂದಿದ್ದು, ಅವರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಈ ಹಿಂದೆಯೂ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು.

ಇದನ್ನೂ ಓದಿ-BBK 10: ಬಿಗ್‌ಬಾಸ್‌ ಮನೆಯಿಂದ ಹೊರನಡೆದ ತನಿಷಾ: ಏನಾಗಿತ್ತು ದೊಡ್ಮನೆಯ ಬೆಂಕಿಗೆ?

ಯುಕೆಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಯೊಬ್ಬ ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ. ಇದರ ಪರಿಣಾಮವಾಗಿ ಮುಂಬೈ ಪೊಲೀಸರು ವಿದ್ಯಾರ್ಥಿಯ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದಾರೆ. ಸಲ್ಮಾನ್ ಖಾನ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬಹಳ ದಿನಗಳಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. 

ಈ ಹಿನ್ನೆಲೆಯಲ್ಲಿ ಸಲ್ಮಾನ್ ಇತ್ತೀಚೆಗೆ ಬುಲೆಟ್ ಪ್ರೂಫ್ ಎಸ್ ಯುವಿ ಖರೀದಿಸಿದ್ದರು. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಂದರ್ಶನವೊಂದರಲ್ಲಿ ಸಲ್ಮಾನ್ ಖಾನ್‌ನನ್ನು ಕೊಲ್ಲುವುದು ತನ್ನ ಜೀವನದ ಗುರಿ... ಕೃಷ್ಣಮೃಗವನ್ನು ಕೊಂದ ಸಲ್ಲು ಲಾರೆನ್ಸ್ ಅವರ ಸಮುದಾಯಕ್ಕೆ ಕ್ಷಮೆಯಾಚಿಸಿದಾಗ ಮಾತ್ರ ಇದು ಕೊನೆಗೊಳ್ಳುತ್ತದೆ ಎಂದು ಹೇಳಿದ್ದರು..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News