ನಟ ದರ್ಶನ್‌ಗೆ ಹಾಸಿಗೆ, ಹೊದಿಕೆ ಸೌಲಭ್ಯ ಸಮಸ್ಯೆ : ಹೈಕೋರ್ಟ್‌ ನಿರ್ದೇಶನದಂತೆ ಜೈಲಿಗೆ ಕಾನೂನು ಪ್ರಾಧಿಕಾರ ಭೇಟಿ

Darshan cell inspection : ಜೈಲಿನಲ್ಲಿ ನಟ ದರ್ಶನ್‌ಗೆ ಹಾಸಿಗೆ, ಹೊದಿಕೆ ಸೌಲಭ್ಯ ವಿಚಾರವಾಗಿ ನಿನ್ನೆ ಮಧ್ಯಾಹ್ನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವರದರಾಜು ತಂಡ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Written by - Krishna N K | Last Updated : Oct 15, 2025, 10:38 AM IST
    • ಕೋರ್ಟ್ ಆದೇಶದ ಮೇರೆಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ತಂಡ
    • ದರ್ಶನ್‌ಗೆ ಸವಲತ್ತುಗಳನ್ನ ನೀಡುತ್ತಿಲ್ಲ ಎಂದು ಮೂರು ಪ್ರತ್ಯೇಕ ಅರ್ಜಿಗಳನ್ನ ಸಲ್ಲಿಸಿದ್ದ ವಕೀಲರು.
    • ಜೈಲಿನ ಮ್ಯಾನ್ಯುಯಲ್ ಪಾಲೋ ಮಾಡಲಾಗಿದೆಯೆ.? ಉಲ್ಲಂಘನೆ ಮಾಡಿ ಸವಲತ್ತುಗಳನ್ನ ನಿರಾಕರಿಸಲಾಗಿದೆಯೇ?
ನಟ ದರ್ಶನ್‌ಗೆ ಹಾಸಿಗೆ, ಹೊದಿಕೆ ಸೌಲಭ್ಯ ಸಮಸ್ಯೆ : ಹೈಕೋರ್ಟ್‌ ನಿರ್ದೇಶನದಂತೆ ಜೈಲಿಗೆ ಕಾನೂನು ಪ್ರಾಧಿಕಾರ ಭೇಟಿ

ಬೆಂಗಳೂರು : ಕೋರ್ಟ್ ಆದೇಶದ ಮೇರೆಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ತಂಡ, ನಟ ದರ್ಶನ್ ಗೆ ನಿಯಮಾವಳಿ ಅನುಸಾರ ಸೌಲಭ್ಯ ನೀಡಲಾಗಿದೆಯೆ..? ಕೋರ್ಟ್ ಆದೇಶ ಹಾಗೂ ಜೈಲಿನ ಮ್ಯಾನ್ಯುಯಲ್ ಪಾಲನೆಯಾಗುತ್ತಿದೆಯೇ? ಸೇರಿದಂತೆ ನಟ ದರ್ಶನ್ ಇರುವ ಬ್ಯಾರಕ್ ನಲ್ಲಿ ಪರಿಶೀಲನೆ ನಡೆಸಲಾಯಿತು. 

Add Zee News as a Preferred Source

ದರ್ಶನ್‌ಗೆ ಸವಲತ್ತುಗಳನ್ನ ನೀಡುತ್ತಿಲ್ಲ ಎಂದು ಮೂರು ಪ್ರತ್ಯೇಕ ಅರ್ಜಿಗಳನ್ನ ಸಲ್ಲಿಸಿದ್ದ ವಕೀಲರು. ಅಲ್ಲದೆ, ಬಳಿಕ ಖುದ್ದು ನ್ಯಾಯಾಧೀಶರೆ ಜೈಲಿಗೆ ಭೇಟಿ ನೀಡಿ ಪರಿಶೀಲಿಸಲು ಮನವಿ ಮಾಡಿದ್ದರು. ದರ್ಶನ್ ಪರ ವಕೀಲರ ಅರ್ಜಿಗೆ ಅಧಿಕಾರಿಗಳ ಮೂಲಕ ಪರಿಶೀಲನೆಗೆ ನಿರ್ದೇಶ‌ನ ನೀಡಲಾಗಿತ್ತು. ಇದರ ಬೆನ್ನಲ್ಲೇ ಇಂದು ಜೈಲಿಗೆ ತೆರಳಿ ಖುದ್ದಾಗಿ ಪರಿಶೀಲನೆ ನಡೆಸಲಾಗಿತ್ತು.

ಇದನ್ನೂ ಓದಿ:ಖಾಸಗಿ ವಿಡಿಯೋ ಹಂಚಿಕೊಂಡ ಶಾರುಖ್‌ ಖಾನ್‌.. ಸೀಕ್ರೆಟ್‌ ಕೋಡ್‌ಗಾಗಿ ಅಭಿಮಾನಿಗಳ ಹುಡುಕಾಟ

ಜೈಲಿನ ಮ್ಯಾನ್ಯುಯಲ್ ಪಾಲೋ ಮಾಡಲಾಗಿದೆಯೆ.? ಉಲ್ಲಂಘನೆ ಮಾಡಿ ಸವಲತ್ತುಗಳನ್ನ ನಿರಾಕರಿಸಲಾಗಿದೆಯೇ ಅಂತಾ ಪರಿಶೀಲನೆ ಬಳಿಕ 18ರೊಳಗೆ ಕೋರ್ಟ್ ಗೆ ವರದಿ ಸಲ್ಲಿಕೆ ಮಾಡಬೇಕಿದೆ. ಹೀಗಾಗಿ ಕೋರ್ಟ್‌ಗೆ ವರದಿ ಸಲ್ಲಿಸಲು ಕಾನೂನು ಪ್ರಾಧಿಕಾರದ ಅಧಿಕಾರಿಗಳು ಸಜ್ಜಾಗಿದ್ದಾರೆ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News