ಟಾಲಿವುಡ್‌ನಲ್ಲಿ ಸಂಕ್ರಾಂತಿ ಸಮರ: 'ಗುಂಟೂರು ಖಾರಂ' Vs 'ಸೈಂಧವ'!

Tollywood Sankranthi War: ಟಾಲಿವುಡ್‌ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಮಹೇಶ್ ಬಾಬು ಅಭಿನಯದ 'ಗುಂಟೂರು ಖಾರಂ' ಜೊತೆ ವಿಕ್ಟರಿ ವೆಂಕಟೇಶ್ ಅಭಿನಯದ 'ಸೈಂಧವ'ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಯಾವ ಚಿತ್ರವನ್ನು ಇಷ್ಟಪಡಲಿದ್ದಾರೆ ಎಂದು ಚರ್ಚೆ ಶುರುವಾಗಿದೆ.  

Written by - Zee Kannada News Desk | Last Updated : Jan 4, 2024, 10:19 AM IST
  • ಪ್ರತಿ ವರ್ಷ ದಂತೆ ಈ ಬಾರಿಯು ಸಂಕ್ರಾಂತಿಗೆ ಸಿನಿಮಾ ರಿಲೀಸ್ ಮಾಡುವುದಕ್ಕೆ ದೊಡ್ಡ ದೊಡ್ಡ ಚಿತ್ರಗಳು ಸಿದ್ಧತೆಗಳನ್ನು ಮಾಡಿಕೊಂಡಿದೆ.
  • 'ಗುಂಟೂರು ಖಾರಂ' ಸಿನಿಮಾ ಜನವರಿ 12 ರಂದು ರಿಲೀಸ್ ಆಗುತ್ತಿದ್ದರೆ, ಇನ್ನೊಂದೆಡೆ 'ಸೈಂಧವ'ಜನವರಿ 13 ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ.
  • ಕೆಲವು ದಿನಗಳ ಹಿಂದಷ್ಟೇ ಪ್ರಭಾಸ್ ನಟನೆಯ 'ಸಲಾರ್' ಹಾಗೂ ಶಾರುಖ್ ಖಾನ್ ನಟನೆಯ 'ಡಂಕಿ' ಸಿನಿಮಾಗಳೂ ಒಂದು ದಿನದ ಗ್ಯಾಪ್‌ನಲ್ಲಿ ರಿಲೀಸ್ ಆಗಿದ್ದವು.
ಟಾಲಿವುಡ್‌ನಲ್ಲಿ ಸಂಕ್ರಾಂತಿ ಸಮರ: 'ಗುಂಟೂರು ಖಾರಂ' Vs 'ಸೈಂಧವ'! title=

Guntur Kaaram Vs  Saindhav: ಹೊಸ ವರ್ಷ ಆರಂಭವಾಗಿದ್ದು, ಸಿನಿಮಾ ಮಂದಿ ಹೊಸ ವರ್ಷದ ಸಂಭ್ರಮದಲ್ಲಿಯೇ ಇದ್ದಾರೆ. ಸಂಕ್ರಾಂತಿ ಹಬ್ಬದಂದು ತೆಲುಗು ಚಿತ್ರಗಳು ಮುಖಾಮುಖಿ ಆಗೋದು ಹೊಸದೇನು ಅಲ್ಲದಿದ್ದರೂ, ಪ್ರತಿ ವರ್ಷ ದಂತೆ ಈ ಬಾರಿಯು ಸಂಕ್ರಾಂತಿಗೆ ಸಿನಿಮಾ ರಿಲೀಸ್ ಮಾಡುವುದಕ್ಕೆ ದೊಡ್ಡ ದೊಡ್ಡ ಚಿತ್ರಗಳು ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವರ್ಷ  ಮಹೇಶ್ ಬಾಬು ನಟನೆಯ 'ಗುಂಟೂರು ಖಾರಂ' ಹಾಗೂ ವೆಂಕಟೇಶ ಸಿನಿಮಾ 'ಸೈಂಧವ' ಬಾಕ್ಸಾಫೀಸ್‌ನಲ್ಲಿ ಸೆಣೆಸಾಡಲಿವೆ. 

ಪ್ರಿನ್ಸ್‌ ಮಹೇಶ್‌ ಬಾಬು ಅಭಿನಯದ 'ಗುಂಟೂರು ಖಾರಂ' ಸಿನಿಮಾ ಜನವರಿ 12 ರಂದು ರಿಲೀಸ್ ಆಗುತ್ತಿದ್ದರೆ, ಇನ್ನೊಂದೆಡೆ ವಿಕ್ಟರಿ ವೆಂಕಟೇಶ್ ನಟಿಸಿರುವ 'ಸೈಂಧವ' ಚಿತ್ರ ಒಂದು ದಿನ ತಡವಾಗಿ ಅಂದರೆ, ಜನವರಿ 13 ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಈ ಕ್ಲ್ಯಾಶ್ ಬಗ್ಗೆ ವಿಕ್ಟರಿ ವೆಂಕಟೇಶ್‌, "ನಾನು ಇಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕೆಲವೊಮ್ಮೆ ಇಂತಹ ಸಂದರ್ಭಗಳು ಎದುರಾಗುತ್ತವೆ. ಇಂತಹ ಸಂದರ್ಭಗಳು ನಿಜಕ್ಕೂ ದುರದೃಷ್ಟಕರ. ಆದರೆ, ಕೆಲವೊಮ್ಮೆ ಪ್ರೇಕ್ಷಕರು ತುಂಬಾ ಸ್ಮಾರ್ಟ್ ಆಗಿ ಯೋಚನೆ ಮಾಡುತ್ತಾರೆ. ತಮಗೆ ಯಾವುದು ಇಷ್ಟವೋ ಅಂತಹ ಸಿನಿಮಾಗಳನ್ನು ಮಾತ್ರ ನೋಡುತ್ತಾರೆ. ಎಲ್ಲ ಸಿನಿಮಾಗಳನ್ನೂ ನೋಡುತ್ತಾರೆ ಅಂತ ಅನಿಸುತ್ತೆ. ನಾವು ಧನಾತ್ಮಕವಾಗಿ ಯೋಚಿಸಬೇಕು." ಎಂದು  ಪ್ರತಿಕ್ರಿಯೆ ನೀಡಿದ್ದಾರೆ. 

ಇದನ್ನೂ ಓದಿ: 'ಮಾರ್ಟಿನ್' ರಿಲೀಸ್‌ಗೂ ಮುನ್ನವೇ 'ಕೆಡಿ' ತೆರೆ ಮೇಲೆ ಬರಲಿದೆಯಾ? ಫ್ಯಾನ್ಸ್‌ ಡೌಟ್‌!

ವೆಂಕಟೇಶ್ ನಟಿಸಿರುವ 'ಸೈಂಧವ' ಸಿನಿಮಾವನ್ನು ಶೈಲೇಶ್ ಕೋಲಾನ ನಿರ್ದೇಶನ ಮಾಡಿದ್ದು, ಈ ಚಿತ್ರದಲ್ಲಿ ವೆಂಕಟೇಶ್ ಜೊತೆ ನಟಿ ಶ್ರದ್ಧಾ ಶ್ರೀನಾಥ್ ನಾಯಕಿಯಾಗಿ ನಟಿಸಿದ್ದಾರೆ. ಇವರೊಂದಿಗೆ ಮುಖೇಶ್ ರಿಷಿ, ನವಾಜುದ್ದೀನ್ ಸಿದ್ದಿಕಿ ಹಾಗೂ ಆರ್ಯ ಖಳನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. 'ಸೈಂಧವ' ಸಿನಿಮಾದಲ್ಲಿ ಶ್ರದ್ಧಾ ಶ್ರೀನಾಥ್ ಜೊತೆ ರುಹಾನಿ ಶರ್ಮಾ ಮತ್ತು ಆಂಡ್ರಿಯಾ ಅವರಂತಹ ನಾಯಕಿಯರು ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 

ಇನ್ನೊಂದು ಕಡೆ ಸೂಪರ್ ಸ್ಟಾರ್ ಮಹೇಶ್ ಬಾಬು ನಟಿಸಿರುವ 'ಗುಂಟೂರು ಖಾರಂ' ಸಿನಿಮಾ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಹಲವು ವರ್ಷಗಳ ಬಳಿಕ ಮಹೇಶ್ ಬಾಬುಗೆ ತ್ರಿವಿಕ್ರಮ್ ನಿರ್ದೇಶನ ಮಾಡಿದ್ದಾರೆ. ಗುಂಟೂರು ಖಾರಂನಲ್ಲಿ ಶ್ರೀಲೀಲಾ, ಎಸ್ ಎಸ್ ತಮನ್ ಮ್ಯೂಸಿಕ್  ಹೈಲೈಟ್ ಆಗಿದೆ. ಹೀಗಾಗಿ ಎರಡು ಸಿನಿಮಾಗಳಲ್ಲಿ ಯಾವುದನ್ನು ಇಷ್ಟ ಪಡುತ್ತಾರೆ ಅನ್ನೋದೇ ಸದ್ಯ ಕುತೂಹಲಕಾರಿಯಾಗಿದೆ. ಕೆಲವು ದಿನಗಳ ಹಿಂದಷ್ಟೇ ಪ್ರಭಾಸ್ ನಟನೆಯ 'ಸಲಾರ್' ಹಾಗೂ ಶಾರುಖ್ ಖಾನ್ ನಟನೆಯ 'ಡಂಕಿ' ಸಿನಿಮಾಗಳೂ ಒಂದು ದಿನದ ಗ್ಯಾಪ್‌ನಲ್ಲಿ ರಿಲೀಸ್ ಆಗಿದ್ದು, ಬಾಕ್ಸಾಫೀಸ್‌ನಲ್ಲಿ ಮೇಲೆ ದೊಡ್ಡ ಪರಿಣಾಮವನ್ನೇ ಬೀರಿದ್ದವು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News