ʼಕಾಂತಾರʼ ಪಂಜುರ್ಲಿ ದೈವವನ್ನು ಅವಹೇಳನ ಮಾಡಿದ ಸಾಂತಾಕ್ಲಾಸ್..! ವಿಡಿಯೋ ವೈರಲ್‌

ದಿ ಡಿವೈನ್‌ ಬ್ಲಾಕ್ಬಸ್ಟರ್‌ ಸಿನಿಮಾ ಕಾಂತಾರ ದೇಶಾದ್ಯಂತ ಸಿನಿ ರಸಿಕರಿಂದ ಅದ್ಬುತ ಪ್ರತಿಕ್ರಿಯೆ ಕನ್ನಡಿಗನ ಚಿತ್ರ. ಇತ್ತೀಚಿಗೆ ಕಾಂತಾರ ಸಿನಿಮಾದಲ್ಲಿ ತೋರಿಸಲಾದ ದೈವದ ಕುರಿತು ಅವಹೇಳನಕಾರಿ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗುತ್ತಿದೆ. ರಿಷಬ್‌ ಶೆಟ್ಟಿ ನಟನೆಯನ್ನು ಅನುಕರಣೆ ಮಾಡಿ ದೈವವನ್ನು ಅವಹೇಳನ ಮಾಡಲಾಗುತ್ತಿದೆ. ಇದೀಗ ಸಂತಾಕ್ಲಾಸ್‌ ವೇಷಧಾರಿ ಒಬ್ಬ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್‌ ಅನುಕರಣೆ ಮಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Written by - Krishna N K | Last Updated : Dec 30, 2022, 11:46 AM IST
  • ಕಾಂತಾರ ದೇಶಾದ್ಯಂತ ಸಿನಿ ರಸಿಕರಿಂದ ಅದ್ಬುತ ಪ್ರತಿಕ್ರಿಯೆ ಕನ್ನಡಿಗನ ಚಿತ್ರ
  • ಇತ್ತೀಚಿಗೆ ಕಾಂತಾರ ಸಿನಿಮಾದಲ್ಲಿ ತೋರಿಸಲಾದ ದೈವದ ಕುರಿತು ಅವಹೇಳನಕಾರಿ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗುತ್ತಿದೆ.
  • ಇದೀಗ ಸಂತಾಕ್ಲಾಸ್‌ ವೇಷಧಾರಿ ಒಬ್ಬ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್‌ ಅನುಕರಣೆ ಮಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.
ʼಕಾಂತಾರʼ ಪಂಜುರ್ಲಿ ದೈವವನ್ನು ಅವಹೇಳನ ಮಾಡಿದ ಸಾಂತಾಕ್ಲಾಸ್..! ವಿಡಿಯೋ ವೈರಲ್‌ title=

Kantara Imitation : ದಿ ಡಿವೈನ್‌ ಬ್ಲಾಕ್ಬಸ್ಟರ್‌ ಸಿನಿಮಾ ಕಾಂತಾರ ದೇಶಾದ್ಯಂತ ಸಿನಿ ರಸಿಕರಿಂದ ಅದ್ಬುತ ಪ್ರತಿಕ್ರಿಯೆ ಕನ್ನಡಿಗನ ಚಿತ್ರ. ಇತ್ತೀಚಿಗೆ ಕಾಂತಾರ ಸಿನಿಮಾದಲ್ಲಿ ತೋರಿಸಲಾದ ದೈವದ ಕುರಿತು ಅವಹೇಳನಕಾರಿ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗುತ್ತಿದೆ. ರಿಷಬ್‌ ಶೆಟ್ಟಿ ನಟನೆಯನ್ನು ಅನುಕರಣೆ ಮಾಡಿ ದೈವವನ್ನು ಅವಹೇಳನ ಮಾಡಲಾಗುತ್ತಿದೆ. ಇದೀಗ ಸಂತಾಕ್ಲಾಸ್‌ ವೇಷಧಾರಿ ಒಬ್ಬ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್‌ ಅನುಕರಣೆ ಮಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಹೊಂಬಾಳೆ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ ಕಾಂತಾರ ಸಿನಿಮಾ ನಿರ್ಮಾಣವಾಗಿದೆ. ಈ ಸಿನಿಮಾವನ್ನು ರಿಷಬ್‌ ಶೆಟ್ಟಿ ನಿರ್ದೇಶಿಸಿ ನಟಿಸಿದ್ದಾರೆ. 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಸಿನಿಮಾ ಇದುವರೆಗೂ ಸುಮಾರು 500 ಕೋಟಿ ರೂ. ಲಾಭ ಗಳಿಸಿದೆ. ಅಲ್ಲದೆ, ಭಾರತೀಯ ಚಿತ್ರರಂಗದಲ್ಲಿ ಕೆಲವೊಂದಿಷ್ಟು ಅಪರೂಪದ ದಾಖಲೆಗಳ ಸೃಷ್ಟಿಗೆ ಈ ಸಿನಿಮಾ ಕಾರಣವಾಗಿದೆ. ಇನ್ನು ಸಿನಿಮಾದಲ್ಲಿ ತೋರಿಸಲಾಗಿರುವ ಪರ್ಜುಲಿ, ಗುಳಿದ ದೈವಾರಾಧನೆಯ ದೃಶ್ಯಗಳನ್ನು ಅನುಕರಣೆ ಮಾಡಬೇಡಿ ಅಂತ ಚಿತ್ರತಂಡ ಹಾಗೂ ರಿಷಬ್‌ ಶೆಟ್ಟಿ ಕೇಳಿಕೊಂಡರೂ ಸಹ ಕೆಲ ಜನರು ಕಿವಿಗೆ ಹಾಕಿಕೊಳ್ಳುತ್ತಿಲ್ಲ.

ಇದನ್ನೂ ಓದಿ: BBK 9 : ಯಾರಾಗಬಹುದು ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್‌!?

ಇದೀಗ ಸಾಂತಾಕ್ಲಾಸ್ ವೇಷಧಾರಿಯೊಬ್ಬ ಕಾಂತಾರ ಸಿನಿಮಾದಲ್ಲಿ ಬರುವ ಕೊನೆಯ ದೃಶ್ಯವನ್ನು ಅನುಕರಣೆ ಮಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋವನ್ನು ಶಕುಂತಲ ಎಂಬುವವರು ತಮ್ಮ ಟ್ಟಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ಗರಂ ಆಗಿದ್ದಾರೆ. ಅಲ್ಲದೆ, ದೈವವನ್ನು ಅವಹೇಳನ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ʼಕಾಂತಾರʼ ಸಿನಿಮಾ ಪಂಜುರ್ಲಿ ದೈವ ಹಾಗೂ ಕರಾವಳಿಯ ಸಂಸ್ಕೃತಿ ಬಗ್ಗೆ ಇಡೀ ದೇಶಕ್ಕೆ ತಿಳಿದಿದೆ. ಸಿನಿಮಾ ನೋಡಿ ಭಾರತೀಯ ಸಿನಿರಂಗದ ದಿಗ್ಗಜರು ರಿಷಬ್‌ ಶೆಟ್ಟಿ ನಟನೆ ಮತ್ತು ನಿರ್ದೇಶನವನ್ನು ಹಾಡಿ ಹೊಗಳಿದ್ದಾರೆ. ರಜನಿಕಾಂತ್‌, ಕಮಲ್‌ ಹಾಸನ್‌, ಪ್ರಭಾಸ್‌, ರಾಣಾ ದಗ್ಗುಬಾಟಿ, ರಾಮ್‌ ಗೋಪಾಲ್‌ ವರ್ಮಾ, ಅನುಷ್ಕಾ ಶೆಟ್ಟಿ, ಹೃತಿಕ್‌ ರೋಷನ್‌, ವಿವೇಕ್‌ ರಂಜನ್‌ ಅಗ್ನಿಹೋತ್ರಿ, ಕಂಗನಾ ರಣಾವತ್‌, ಶಿಲ್ಪಾಶೆಟ್ಟಿ ಸೇರಿ ಅನೇಕ ಪರಭಾಷೆ ಸೆಲೆಬ್ರಿಟಿಗಳು ಕಾಂತಾರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News