Kasturi Mahal: ಮೇ 13ಕ್ಕೆ ಶಾನ್ವಿ ಶ್ರೀವಾಸ್ತವ್ ಅಭಿನಯದ ‘ಕಸ್ತೂರಿ ಮಹಲ್’ ತೆರೆಗೆ

‘ಕಸ್ತೂರಿ ಮಹಲ್’ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರವಾಗಿದೆ.

Written by - YASHODHA POOJARI | Edited by - Puttaraj K Alur | Last Updated : Mar 28, 2022, 07:45 PM IST
  • ನಟಿ ಶಾನ್ವಿ ಶ್ರೀವಾತ್ಸವ್ ಅಭಿನಯದ ‘ಕಸ್ತೂರಿ ಮಹಲ್’ ಮೇ 13ರಂದು ಬಿಡುಗಡೆ
  • ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ
  • ಇದು ವಿಭಿನ್ನ ಹಾರರ್ ಸಿನಿಮಾ ಎಂದು ತಿಳಿಸಿದ ‘ಕಸ್ತೂರಿ ಮಹಲ್’ ಚಿತ್ರತಂಡ
Kasturi Mahal: ಮೇ 13ಕ್ಕೆ ಶಾನ್ವಿ ಶ್ರೀವಾಸ್ತವ್ ಅಭಿನಯದ ‘ಕಸ್ತೂರಿ ಮಹಲ್’ ತೆರೆಗೆ   title=
ಮೇ 13ರಂದು ‘ಕಸ್ತೂರಿ ಮಹಲ್’ ಬಿಡುಗಡೆ

ಬೆಂಗಳೂರು: ಬಹುಭಾಷಾ ನಟಿ ಶಾನ್ವಿ ಶ್ರೀವಾತ್ಸವ್(Shanvi Srivastava) ಅಭಿನಯದ ‘ಕಸ್ತೂರಿ ಮಹಲ್’(Kasthuri Mahal) ಮೇ 13 ರಂದು ಬಿಡುಗಡೆಯಾಗಲಿದೆ. ಇದು ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರವಾಗಿದೆ.

ಸಿನಿಮಾ ಬಿಡುಗಡೆ ದಿನಾಂಕ ತಿಳಿಸಲು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಹಾರರ್ ಚಿತ್ರ(Horror film)ಗಳು ಬಂದಿವೆಯಾದರೂ ಇದು ವಿಭಿನ್ನವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ‘ಚಿತ್ರೀಕರಣವಾದ ಕೊಟ್ಟಿಗೆಹಾರದ ಪರಿಸರವಂತೂ ಅದ್ಭುತ. ಉತ್ತಮ ಪಾತ್ರ ನೀಡಿರುವ ದಿನೇಶ್ ಬಾಬು ಅವರ ನಿರ್ದೇಶನದ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಎರಡೂವರೆ ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರುತ್ತಿದೆ. ನೋಡಿ ಹರಸಿ’ ಎಂದು ನಟಿ ಶಾನ್ವಿ ಶ್ರೀವಾತ್ಸವ್(Shanvi Srivastava) ಹೇಳಿದರು.

ಇದನ್ನೂ ಓದಿ: Taledanda: 'ತಲೆದಂಡ' ಸಿನಿಮಾಗೆ ಶುಭ ಹಾರೈಸಿದ ಮಲಯಾಳಂ 'ಸೂಪರ್ ಸ್ಟಾರ್' ಮಮ್ಮುಟ್ಟಿ

ಮೊದಲಿಗೆ ನಿರ್ದೇಶನದಲ್ಲಿ 50 ಚಿತ್ರಗಳನ್ನು ಪೂರೈಸಿರುವ ದಿನೇಶ್ ಬಾಬು(Dinesh Babu) ಅವರನ್ನು ಅಭಿನಂದಿಸಿತ್ತೇನೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾರರ್ ಚಿತ್ರಗಳು ಬಂದಿವೆ. ಪ್ರೇಕ್ಷಕರ ಮನ ಗೆದ್ದಿದೆ. ಆದರೆ ಇದು ವಿಭಿನ್ನ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ರಂಗಾಯಣ ರಘು ತಿಳಿಸಿದರು.

ಇದೊಂದು ಉತ್ತಮ ಚಿತ್ರ. ನನ್ನದು ಒಳ್ಳೆಯ ಪಾತ್ರ. ಕೊಟ್ಟಿಗೆ ಹಾರದ ನಮ್ಮ ಪೂರ್ವಜರ ಮನೆಯಲ್ಲಿ(200 ವರ್ಷಗಳಷ್ಟು ಹಳೆಯ ಮನೆ) ಚಿತ್ರೀಕರಣವಾಗಿದ್ದು ನಿಜಕ್ಕೂ ಸಂತೋಷ. ಅವಕಾಶ ನೀಡಿದ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಅಭಿನಂದನೆ ಎಂದು ನಾಯಕ ಸ್ಕಂದ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Sanjay Dutt : ಅಪ್ಪು ಮನೆಗೆ ಮನೆಗೆ ಭೇಟಿ ಕೊಟ್ಟ ಬಾಲಿವುಡ್ ನಟ ಸಂಜಯ್ ದತ್!

ದಿನೇಶ್ ಬಾಬು ಅವರ ಹತ್ತಿರ ಹಾರರ್ ಸಿನಿಮಾ(Horror film) ಮಾಡೋಣ ಅಂತಾ ಹೇಳಿದ್ದೆ. ಉತ್ತಮ ಕಥೆ ಸಿದ್ಧಮಾಡಿಕೊಂಡು ಸಿನಿಮಾ ಶುರು ಮಾಡಿದರು. ಇದೇ ಮೇ 13ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ’ ಎಂದು ನಿರ್ಮಾಪಕ ರವೀಶ್ ಮನವಿ ಮಾಡಿಕೊಂಡರು.   

ಚಿತ್ರದಲ್ಲಿ ಅಭಿನಯಿಸಿರುವ ಶೃತಿ ಪ್ರಕಾಶ್, ವತ್ಸಲಾ ಮೋಹನ್, ಕಾಶಿಮಾ, ನೀನಾಸಂ ಅಶ್ವಥ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಿನ್ನೆಲೆ ಸಂಗೀತ ನೀಡಿರುವ ರಮೇಶ್ ಕೃಷ್ಣ ಇದೇ ವೇಳೆ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News