Century Star Congratulates Megastar: ಇತ್ತೀಚೆಗಷ್ಟೇ ಮೆಗಾಸ್ಟಾರ್‌ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಒಟ್ಟಾಗಿ ಚಿರುಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈಗಾಗಲೇ ತೆಲಂಗಾಣ ಸರ್ಕಾರ ಚಿರಂಜೀವಿ ಸೇರಿದಂತೆ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದೆ. ಇತ್ತೀಚೆಗೆ ಕನ್ನಡದ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ಚಿರು ಅವರನ್ನು ವಿಶೇಷವಾಗಿ ಅಭಿನಂದಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪೂನಂ ಪಾಂಡೆಗೆ ಸಂಕಷ್ಟ.. 5 ವರ್ಷಗಳ ಜೈಲು ಶಿಕ್ಷೆ!? 


ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೇಂದ್ರವು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿದೆ. ಪದ್ಮವಿಭೂಷಣ ಪಡೆದಿರುವ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರು ಚಿರಂಜೀವಿ ಅವರ ಮನೆಗೆ ಭೇಟಿ ನೀಡಿ, ವಿಶೇಷವಾಗಿ ಅಭಿನಂದಿಸಿದ್ದಾರೆ. ಚಿರಂಜೀವಿ ಮನೆಗೆ ಬಂದ ಶಿವಣ್ಣ ಒಟ್ಟಿಗೆ ಊಟ ಮಾಡಿದರು. ಅದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.


ಚಿರಂಜೀವಿ ಪ್ರಸ್ತುತ ವಶಿಷ್ಠ ನಿರ್ದೇಶನದ 'ವಿಶ್ವಂಭರ' ಎಂಬ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸೋಷಿಯೋ ಫ್ಯಾಂಟಸಿ ಹಿನ್ನೆಲೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾ ಮುಂದಿನ ವರ್ಷ ಜನವರಿ 10ಕ್ಕೆ ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ಹರೀಶ್ ಶಂಕರ್ ನಿರ್ದೇಶನದಲ್ಲಿ ಚಿರು ಮಾಸ್ ಎಂಟರ್ ಟೈನರ್ ಸಿನಿಮಾ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಮತ್ತೊಂದೆಡೆ, ಜೈ ಹನುಮಾನ್ ಸಿನಿಮಾದಲ್ಲಿ ಹನುಮಾನ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.


ಇದನ್ನೂ ಓದಿ: ಪೂನಂ ಪಾಂಡೆ ವಿರುದ್ಧ ದೂರು ದಾಖಲು.. ಸಂಕಷ್ಟಕ್ಕೆ ಸಿಲುಕಿದ ನಟಿ! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.