ಮತದಾರರ ಪಟ್ಟಿ ಪರಿಷ್ಕರಣೆ ʼಕಾಂತಾರʼದ ಗುಳಿಗ-ಪಂಜುರ್ಲಿಯ ದಂತಕತೆ ಅಲ್ಲ

ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು "ಕೆಜಿಎಫ್" ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, "ಕಾಂತಾರ" ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ವಿಪಕ್ಷ ನಾಯಕ ಬಿಜೆಪಿ ವಿರುದ್ಧ ಗುಡುಗಿದ್ದಾರೆ. 

Written by - Krishna N K | Last Updated : Nov 18, 2022, 06:05 PM IST
  • ಮತದಾರರ ಪಟ್ಟಿ ಪರಿಷ್ಕರಣೆ ʼಕಾಂತಾರʼದ ಗುಳಿಗ-ಪಂಜುರ್ಲಿಯ ದಂತಕತೆ ಅಲ್ಲ
  • ಫೇಸ್‌ಬುಕ್‌ ಖಾತೆಯಲ್ಲಿ ಸುದೀರ್ಘ ಬರಹ ಬರೆದಿರುವ ಸಿದ್ದರಾಮಯ್ಯ
  • ಆಪರೇಷನ್ ವೋಟರ್ ಹಗರಣ ಕುರಿತು ಗುಡುಗಿದ ವಿಪಕ್ಷ ನಾಯಕ ಕಾಂತಾರ, ಕೆಜಿಎಫ್‌ ಬಗ್ಗೆ ಹೇಳಿದ್ದಕ್ಕೂ ಕಾರಣ ಇದೆ
ಮತದಾರರ ಪಟ್ಟಿ ಪರಿಷ್ಕರಣೆ ʼಕಾಂತಾರʼದ ಗುಳಿಗ-ಪಂಜುರ್ಲಿಯ ದಂತಕತೆ ಅಲ್ಲ title=

ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು "ಕೆಜಿಎಫ್" ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, "ಕಾಂತಾರ" ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ವಿಪಕ್ಷ ನಾಯಕ ಬಿಜೆಪಿ ವಿರುದ್ಧ ಗುಡುಗಿದ್ದಾರೆ. 

ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸುದೀರ್ಘ ಬರಹ ಬರೆದಿರುವ ಸಿದ್ದರಾಮಯ್ಯ ಅವರು, ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿಗಳು, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.  ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ.  

ಇದನ್ನೂ ಓದಿ: ಮೊಬೈಲ್‌ನಿಂದ ದೇಹದ ಮುಖ್ಯ ಭಾಗವನ್ನು ಮುಚ್ಚಿಕೊಂಡ ಉರ್ಫಿ : ವಿಡಿಯೋ ನೋಡಿ..!

ಮುಖ್ಯಮಂತ್ರಿಗಳು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ?  
ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು?  ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ. 

ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ?  ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ?  

ಇದನ್ನೂ ಓದಿ: ತೆರೆಮೇಲೆ ಅಜಾತಶತ್ರು ಜೀವನ ಕಥೆ : ಅಟಲ್‌ ಜೀ ಪಾತ್ರದಲ್ಲಿ ಪಂಕಜ್‌ ತ್ರಿಪಾಠಿ..!

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ? ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು "ಕೆಜಿಎಫ್" ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, "ಕಾಂತಾರ" ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 

ಇಲ್ಲಿ ಸಿನಿಮಾದ ಹೆಸರು ಏಕೆ ಬಂತು..?

ಹೌದು.. ರಾಜಕೀಯ ವಿಚಾರದಲ್ಲಿ ಸಿದ್ದರಾಮಯ್ಯ ʼಕಾಂತಾರʼ ಮತ್ತು ʼಕೆಜಿಎಫ್ʼ ಸಿನಿಮಾದ ಹೆಸರನ್ನು ಪ್ರಸ್ತಾಪಿಸಲು ಒಂದು ಬಲವಾದ ಕಾರಣ ಇದೆ. ಅದೇನು ಅಂದ್ರೆ ಈ ಎರಡೂ ಸಿನಿಮಾಗಳನ್ನು ಹೊಂಬಾಳೆ ಸಂಸ್ಥೆಯ ನಿರ್ಮಾಣ ಮಾಡಿದೆ. ಹೊಂಬಾಳೆ ಸಂಸ್ಥೆಯ ಮಾಲೀಕ ವಿಜಯ್ ಕಿರಗಂದೂರ್ ಅವರು ಸಚಿವ ಅಶ್ವತ್ಥ್‌ನಾರಾಯಣ್ ಅವರ ಹತ್ತಿರದ ಸಂಬಂಧಿ ಎಂಬುವುದು ಎಲ್ಲರಿಗೂ ತಿಳಿದ ವಿಚಾರ. ಇನ್ನು ಸಿದ್ದರಾಮಯ್ಯ ಅವರು ಮತದಾರರ ಪಟ್ಟಿ ಹಗರಣದಲ್ಲಿ ಅಶ್ವತ್ಥ್‌ನಾರಾಯಣ್ ಹಾಗೂ ವಿಜಯ್ ಕಿರಗಂದೂರ್ ಅವರ ಕೈವಾಡ ಇದೆ ಅಂತ ಪರೋಕ್ಷವಾಗಿ ಗುಡುಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News