Karnataka CM: ʼಜೋಡೆತ್ತುʼ ಸರ್ಕಾರಕ್ಕೆ ಶುಭ ಕೋರಿದ ಸಲಗ..! ಛಲ ಬಿಡದ ತ್ರಿವಿಕ್ರಮನಂತೆ ಕೆಲಸ ನಿರ್ವಹಿಸಿ ಎಂದ ವಿಜಿ..

Siddaramaiah Swearing Ceremony: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ದುನಿಯಾ ವಿಜಯ್‌, ವಿಭಿನ್ನವಾಗಿ ತಮ್ಮ ಮನದಾಳದ ಮಾತುಗಳನ್ನು ಸಿದ್ದು, ಹಾಗೂ ಡಿಕೆಶಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. 

Written by - Zee Kannada News Desk | Last Updated : May 20, 2023, 10:51 AM IST
  • ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕಾರ
  • ಪ್ರಮಾಣ ವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ & ಡಿಕೆಶಿಗೆ ಶುಭ ಹಾರೈಸಿದ ದುನಿಯಾ ವಿಜಯ್‌
  • ಕಾರ್ಯಕ್ರಮಕ್ಕೆ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳ ನಾಯಕರ ಆಗಮನ
Karnataka CM: ʼಜೋಡೆತ್ತುʼ ಸರ್ಕಾರಕ್ಕೆ ಶುಭ ಕೋರಿದ ಸಲಗ..! ಛಲ ಬಿಡದ ತ್ರಿವಿಕ್ರಮನಂತೆ ಕೆಲಸ ನಿರ್ವಹಿಸಿ ಎಂದ ವಿಜಿ.. title=

ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 2ನೇ ಬಾರಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ರಾಜ್ಯ ನಾಯಕರು ಮಾತ್ರವಲ್ಲದೇ ಸಿನಿ ಗಣ್ಯರು  ಶುಭ ಕೋರಿದ್ದಾರೆ. ಈ ನಿಟ್ಟಿನಲ್ಲಿ ದುನಿಯಾ ವಿಜಯ್‌, ವಿಭಿನ್ನವಾಗಿ ತಮ್ಮ ಮನದಾಳದ ಮಾತುಗಳನ್ನು ಸಿದ್ದು, ಹಾಗೂ ಡಿಕೆಶಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. 

ರಾಜಕೀಯ ಜೀವನ ಆರಂಭಿಸಿದ ದಿನದಿಂದಲೂ ಛಲ ಬಿಡದ ತ್ರಿವಿಕ್ರಮನಂತೆ ಜನ ಸೇವೆ ಮಾಡುತ್ತಿರುವ ಸಾದ ಸೀದ ವ್ಯಕ್ತಿತ್ವದ ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ಶುಭಾಶಯಗಳು. 

ಇದನ್ನೂ ಓದಿ: Ram Charan-Upasana: 8 ತಿಂಗಳ ಗರ್ಭಿಣಿಯಾಗಿರುವ ರಾಮ್ ಚರಣ್ ಪತ್ನಿ ಉಪಾಸನಾ, ಅಂದು ತನಗೆ ಮಗು ಬೇಡ ಎಂದಿದ್ಯಾಕೆ ? 

ಎಷ್ಟೇ ಕಷ್ಟ ಬಂದರೂ ಬಂಡೆಯಂತೆ ನಿಂತು ಹೋರಾಡುವ ಡಿ ಕೆ ಶಿವಕುಮಾರ್ ಅವರಿಗೂ ಸಹ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ಅಭಿನಂದನೆಗಳು.  ಇಬ್ಬರೂ ರಾಜ್ಯವನ್ನು ಅಭಿವೃದ್ಧಿಯತ್ತ‌ ಕರೆದುಕೊಂಡು ಹೋಗಿ ಬಡ ಬಗ್ಗರ, ದೀನ ದಲಿತರ ಉದ್ಧಾರಕ್ಕಾಗಿ ಶ್ರಮಿಸುತ್ತೀರ ಎಂಬ ನಂಬಿಕೆ ನನ್ನಂತಹ ಕೋಟ್ಯಾಂತರ ಮಂದಿಗಿದೆ. ಅದನ್ನೂ ಈಡೇರಿಸಿ ಎಂದು  ವಿಜಯ್ ಕುಮಾರ್ ಬರೆದು ಕೊಂಡಿದ್ದಾರೆ. ಸದ್ಯ ಈ ಪೋಷ್ಟರ್‌ ಎಲ್ಲೆಡೆ ವೈರಲ್‌ ಆಗುತ್ತಿದೆ. 

ಇನ್ನುಳಿದಂತೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳ ನಾಯಕರು ಆಗಮಿಸುತ್ತಿದ್ದಾರೆ.  ಅದರ ಜೊತೆಗೆ ಇತ್ತೀಚಿಗೆ ನೂತನ ಶಾಸಕರಾಗಿ ಚುನಾಯಿತರಾದ ದರ್ಶನ್‌ ಪುಟ್ಟಣ್ಣಯ್ಯ ಅವರು ರೈಲಿನಲ್ಲಿ ಪ್ರಯಾಣಿಸಿ ಸಿದ್ದರಾಮಯ್ಯ ಪದಗ್ರಹಣ ಸಮಾರಂಭಕ್ಕೆ ಬಂದ ವಿಡಿಯೋ ಒಂದು ವೈರಲ್‌ ಆಗಿದೆ.

ಇದನ್ನೂ ಓದಿ:  Radha Kalyan Actress: ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ ʼರಾಧಾ ಕಲ್ಯಾಣʼ ನಟಿ ರಾಧಿಕಾ : ಇಲ್ಲಿವೆ ನೋಡಿ ಫೋಟೊಸ್‌

ಈಗಾಗಲೇ ಮೈಸೂರಿನಿಂದ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಜೊತೆಗೆ ಕುಟುಂಬಸ್ಥರ ಆಗಮಿಸಿದ್ದು, ಶಿವಾನಂದ ವೃತ್ತದ ಸಿದ್ದು ಸರ್ಕಾರಿ ನಿವಾಸದಲ್ಲಿ ಉಳಿದುಕೊಂಡಿದ್ದಾರೆ. ಅಲ್ಲದೆ ನೂರಾರು ಬೆಂಬಲಿಗರು ಅವರ ನಿವಾಸದ ಬಳಿ ಜಮಾಯಿಸಿದ್ದಾರೆ. ಮುಂಜಾನೆಯಿಂದಲೇ ಸಿದ್ದುಗಾಗಿ ಕಾಯುತ್ತಿದ್ದಾರೆ. ಶುಭಾಶಯ ತಿಳಿಸಲು ಹೂ ಬೊಕ್ಕೆ ಹಿಡಿದು ನಿಂತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

 

 

 

Trending News