ದರ್ಶನ್ ಮೇಲೆ ಚಪ್ಪಲಿ ಎಸೆತ: ‘ಇದು ಚಿತ್ರರಂಗಕ್ಕೆ ಕಪ್ಪು ಚುಕ್ಕೆ’ ಎಂದ ಸಂಸದೆ ಸುಮಲತಾ

ಹಿರಿಯ ನಟಿ ಸುಮಲತಾ ಅಂಬರೀಶ್ ಕೂಡ ಡಿ ಬಾಸ್ ದರ್ಶನ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ದರ್ಶನ್ ಮೇಲೆ ನಡೆದಿರುವ ಹಲ್ಲೆ ಯಾವುದೇ ನಿಜವಾದ ಅಭಿಮಾನಿ ಮಾಡದ ಕೃತ್ಯ. ಇದರಿಂದ ದರ್ಶನ್ ವರ್ಚಸ್ಸು, ಖ್ಯಾತಿಗೆ ಯಾವುದೇ ಕುತ್ತು ತರಲು ಸಾಧ್ಯವಿಲ್ಲ’ವೆಂದು ಹೇಳಿದ್ದಾರೆ.

Written by - Puttaraj K Alur | Last Updated : Dec 20, 2022, 11:12 AM IST
  • ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದಿರುವ ಘಟನೆಗೆ ಖಂಡನೆ
  • ಚಿತ್ರರಂಗಕ್ಕೆ ಕಪ್ಪು ಚುಕ್ಕಿ ಇಟ್ಟ ಈ ಘಟನೆ ಎಸಗಿದವರ ಸಣ್ಣತನ, ಹೇಡಿತನ ಬಹಿರಂಗ
  • ಇದರಿಂದ ದರ್ಶನ್ ವರ್ಚಸ್ಸು, ಖ್ಯಾತಿಗೆ ಯಾವುದೇ ಕುತ್ತು ತರಲು ಸಾಧ್ಯವಿಲ್ಲವೆಂದ ನಟಿ ಸುಮಲತಾ
ದರ್ಶನ್ ಮೇಲೆ ಚಪ್ಪಲಿ ಎಸೆತ: ‘ಇದು ಚಿತ್ರರಂಗಕ್ಕೆ ಕಪ್ಪು ಚುಕ್ಕೆ’ ಎಂದ ಸಂಸದೆ ಸುಮಲತಾ    title=
‘ಡಿ ಬಾಸ್’ಗೆ ಹಿರಿಯ ನಟಿ ಸುಮಲತಾ ಬೆಂಬಲ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದಿರುವ ಘಟನೆಯನ್ನು ಹಿರಿಯ ನಟಿ, ಸಂಸದೆ ಸುಮಲತಾ ಅಂಬರೀಶ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಇದು ಚಿತ್ರರಂಗಕ್ಕೆ ಕಪ್ಪು ಚುಕ್ಕೆ’ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ.

‘ಕ್ರಾಂತಿ' ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮದ ವೇಳೆ ನಟ ದರ್ಶನ್ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದಿರುವ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಚಿತ್ರರಂಗದ ನಟ-ನಟಿಯರು, ಲಕ್ಷಾಂತರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Yash: 1 ಗಂಟೆ ನಿಂತು 700 ಫ್ಯಾನ್ಸ್‌ ಜೊತೆ ಸೆಲ್ಫಿ! 'Real Super Star' ಎಂದ ನೆಟ್ಟಿಜನ್‌

ಹಿರಿಯ ನಟಿ ಸುಮಲತಾ ಅಂಬರೀಶ್ ಕೂಡ ಡಿ ಬಾಸ್ ದರ್ಶನ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ದರ್ಶನ್ ಮೇಲೆ ನಡೆದಿರುವ ಹಲ್ಲೆ ಯಾವುದೇ ನಿಜವಾದ ಅಭಿಮಾನಿ ಮಾಡದ ಕೃತ್ಯ. ಇದರಿಂದ ದರ್ಶನ್ ವರ್ಚಸ್ಸು, ಖ್ಯಾತಿಗೆ ಯಾವುದೇ ಕುತ್ತು ತರಲು ಸಾಧ್ಯವಿಲ್ಲ. ಚಿತ್ರರಂಗಕ್ಕೆ ಕಪ್ಪು ಚುಕ್ಕಿ ಇಟ್ಟ ಈ ಘಟನೆ ಎಸಗಿದವರ ಸಣ್ಣತನ, ಹೇಡಿತನ ಮಾತ್ರ ಬಹಿರಂಗವಾಗಿದೆ. ಇಡೀ ಚಿತ್ರರಂಗ ಕೃತ್ಯ ಖಂಡಿಸಿ ದರ್ಶನ್ ಬೆಂಬಲಕ್ಕೆ ನಿಂತಿದ್ದೇವೆ’ ಅಂತಾ ಸುಮಲತಾ ಅವರು ಟ್ವೀಟ್ ಮಾಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ, ಅಭಿಷೇಕ್ ಅಂಬರೀಶ್ ಜೊತೆ ದರ್ಶನ್ ಒಟ್ಟಿಗೆ ಇರುವ ಫೋಟೋಗಳನ್ನು ಹಂಚಿಕೊಂಡಿರುವ ಸುಮಲತಾ ಅವರು, ನಾವೆಲ್ಲರೂ ಒಂದೇ ಅಂತಾ ಹೇಳಿದ್ದಾರೆ.  

ಇದನ್ನೂ ಓದಿ: Bigg Boss : ಪುತ್ರಿ ಆಸ್ಪತ್ರೆಗೆ ದಾಖಲು.. ಬಿಗ್‌ಬಾಸ್‌ ಮನೆಯಿಂದ ಹೊರ ನಡೆದ ಅರುಣ್‌ ಸಾಗರ್‌

ದರ್ಶನ್ ಮೇಲೆ ಚಪ್ಪಲಿ ಎಸೆದಿರುವ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಡಿಬಾಸ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ‘We Stand with Dboss’ ಅನ್ನೋ ಅಭಿಯಾನ ಪ್ರಾರಂಭಿಸಿದ್ದಾರೆ. ಇದಲ್ಲದೆ #WeStandWithDboss ಹ್ಯಾಷ್‌ಟ್ಯಾಗ್ ಸದ್ಯ ಟ್ರೆಂಡ್ ಆಗುತ್ತಿದೆ. ಹಿರಿಯ ನಟರಾದ ಶಿವರಾಜಕುಮಾರ್, ಜಗ್ಗೇಶ್, ಕಿಚ್ಚ ಸುದೀಪ್, ಶ್ರೀಮುರಳಿ, ವಸಿಷ್ಠ ಸಿಂಹ, ನಟಿಯರಾದ ನಿಶ್ವಿಕಾ ನಾಯ್ಡು, ಅಮೂಲ್ಯ ಸೇರಿದಂತೆ ಅನೇಕರು ಘಟನೆಯನ್ನು ಖಂಡಿಸಿದ್ದು, ಡಿ ಬಾಸ್‍ಗೆ ಬೆಂಬಲ ಸೂಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News