ಅತ್ತಿಗೆಯ ಸಾವಿನ ನೋವಿನಲ್ಲೂ, ಅಭಿಮಾನಿಗಳಿಗೋಸ್ಕರ ಬರ್ತ್‌ಡೇ ಸೆಲೆಬ್ರೇಟ್‌ ಮಾಡಲು ನಿರ್ಧರಿಸಿದ ನಟ ಶ್ರೀಮುರಳಿ!

Srimurali: ಚಂದನವನದ ನಟ ಶ್ರೀಮುರಳಿಗೆ ತಮ್ಮ ಅತ್ತಿಗೆಯ ಸಾವಿನ ನೋವಿನಲ್ಲ, ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹಾಗಾದ್ರೆ ಈ ನಟ ಈ ರೀತಿ ನಿರ್ಧಾರ ಮಾಡಿರುವುದಾದರು ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.  

Written by - Zee Kannada News Desk | Last Updated : Dec 16, 2023, 04:27 PM IST
  • ನಟ ಶ್ರೀಮುರಳಿಗೆ ದೊಡ್ಡ ಅಭಿಮಾನಿ ಬಳಗ ಇದ್ದು, ಡಿಸೆಂಬರ್ 17ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
  • ನಟ ಶ್ರೀಮುರಳಿ ಈ ಬಾರಿ ಅತ್ತಿಗೆಯ ಸಾವಿನ ನೋವು ಸದ್ಯಕ್ಕೆ ಮರೆ ಆಗುವಂಥದ್ದಲ್ಲವಾಗಿದ್ದು, ಬಹುಶಃ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದೇ ನಂಬಲಾಗಿತ್ತು.
  • ಶ್ರೀಮುರಳಿ ವಿಡಿಯೋವೊಂದನ್ನು ಸೋಷಿಯಲ್‌ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ತಮ್ಮ ಮನದಾಳದ ಮಾತುಗಳನ್ನಾಡಿ, ಅತ್ತಿಗೆಯ ಕಳೆದುಕೊಂಡ ನೋವಿನ ಮಧ್ಯೆಯೂ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದಕ್ಕೆ ಕಾರಣವನ್ನೂ ನೀಡಿದ್ದಾರೆ.
ಅತ್ತಿಗೆಯ ಸಾವಿನ ನೋವಿನಲ್ಲೂ, ಅಭಿಮಾನಿಗಳಿಗೋಸ್ಕರ ಬರ್ತ್‌ಡೇ ಸೆಲೆಬ್ರೇಟ್‌ ಮಾಡಲು ನಿರ್ಧರಿಸಿದ ನಟ ಶ್ರೀಮುರಳಿ! title=

Srimurali Birthday Celebration: ಸ್ಯಾಂಡಲ್‌ವುಡ್‌ ರೋರಿಂಗ್ ಸ್ಟಾರ್ ನಟ ಶ್ರೀಮುರಳಿಗೆ ದೊಡ್ಡ ಅಭಿಮಾನಿ ಬಳಗ ಇದ್ದು, ಡಿಸೆಂಬರ್ 17ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟ ಶ್ರೀ ಮುರಳಿ ಕುಟುಂಬದಲ್ಲಿ ಸಾಕಷ್ಟು ನೋವುಗಳು ಇದ್ದರೂ ಅದನ್ನು ಬದಿಗಿಟ್ಟು, ಈ ವರ್ಷ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ, ಶ್ರೀಮುರಳಿ  ಸಹೋದರ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರು ಅಕಾಲಿಕ ಮರಣ ಹೊಂದಿದರು. 

ನಟ ಶ್ರೀಮುರಳಿ ಈ ಬಾರಿ ಅತ್ತಿಗೆಯ ಸಾವಿನ  ನೋವು ಸದ್ಯಕ್ಕೆ ಮರೆ ಆಗುವಂಥದ್ದಲ್ಲವಾಗಿದ್ದು, ಬಹುಶಃ  ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದೇ ನಂಬಲಾಗಿತ್ತು.ಆದರೆ, ಅಭಿಮಾನಿಗಳ ಒತ್ತಾಯಕ್ಕೆ ಮಣಿದು, ಈ ನಟ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಮತ್ತು ಅಭಿಮಾನಿಗಳನ್ನು ಅಂದು ಭೇಟಿ ಕೂಡ ಮಾಡಲಿದ್ದಾರೆ. ಶ್ರೀಮುರಳಿ ವಿಡಿಯೋವೊಂದನ್ನು ಸೋಷಿಯಲ್‌ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ತಮ್ಮ ಮನದಾಳದ ಮಾತುಗಳನ್ನಾಡಿ, ಅತ್ತಿಗೆಯ ಕಳೆದುಕೊಂಡ ನೋವಿನ ಮಧ್ಯೆಯೂ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದಕ್ಕೆ ಕಾರಣವನ್ನೂ ನೀಡಿದ್ದಾರೆ.

 
 
 
 

 
 
 
 
 
 
 
 
 
 
 

A post shared by SriiMurali (@sriimurali)

ಇದನ್ನು ಓದಿ: Saanya Iyer: ಬಾತ್‌ ಟಬ್‌ನಲ್ಲಿ ಪುಟ್ಟಗೌರಿಯ ಗ್ಲಾಮರಸ್ ಫೋಟೋಶೂಟ್!

ವಿಡಿಯೋದಲ್ಲಿ ಶ್ರೀಮುರಳಿ, "ಎಲ್ಲರಿಗೂ ನಮಸ್ಕಾರ. ಇಷ್ಟು ವರ್ಷದ ಹುಟ್ಟುಹಬ್ಬಕ್ಕೆ ಸೇರಲು ಆಗಿರಲಿಲ್ಲ. ಯಾಕೆ ಎಂಬುದು ನಿಮಗೂ ಗೊತ್ತು. ಈ ಬಾರಿಯೂ ಸೇರುವ ಪರಿಸ್ಥಿತಿ ಇರಲಿಲ್ಲ. ಆದ್ರೂ, ಅಭಿಮಾನಿಗಳ ಒತ್ತಾಯದ ಮೇರೆಗೆ , ನೀವು ಕೊಡ್ತಿರೋ ಪ್ರೀತಿ, ಏನ್‌ ಹೇಳಬೇಕು ಅಂತ ಗೊತ್ತಾಗ್ತಿಲ್ಲ. ನಿಮ್ಮ ಆಜ್ಞೆಯಂತೆಯೇ ನಡೀಬೇಕು. ಹಾಗಾಗಿ ಈ ವರ್ಷ ನಿಮ್ಮನ್ನೆಲ್ಲ ಭೇಟಿ ಮಾಡೋಕೆ ನನಗೊಂದು ಅವಕಾಶ ಸಿಕ್ಕಿದೆ. ಇದೇ ಡಿಸೆಂಬರ್‌ 17 ರಂದು, ವಸಂತ ನಗರದ ದೇವರಾಜ್‌ ಅರಸ್‌ ಭವನ್‌, ಮಿಲರ್ಸ್‌ ರೋಡ್‌, ಅಂಬೇಡ್ಕರ್‌ ಭವನ್‌ ಹಿಂದಿರುವ ಜಾಗದಲ್ಲಿ ಬೆಳಗ್ಗೆ 10:30 ನಂತರ ನಾನು ನಿಮಗೆ ಸಿಗ್ತಿನಿ" ಎಂದು ಹೇಳಿದ್ದಾರೆ.

ಶ್ರೀಮುರಳಿ ಫ್ಯಾನ್ಸ್‌ಗೆ “ಯಾರ್ಯಾರು ನೋಡಬೇಕು, ಮೀಟ್‌ ಮಾಡಬೇಕೋ, ಜೊತೆಗೆ ಸೇರೋಣ. ಮತ್ತೊಂದು ಮನವಿ. ಯಾರೂ ಹಾರ ತುರಾಯಿ, ಮತ್ತೊಂದು ಮಗದೊಂದು ಗಿಫ್ಟ್‌ ತರಬೇಡಿ. ಹಣ ಖರ್ಚು ಮಾಡಬೇಡಿ. ಅದು ನಿಮ್ಮ ದುಡಿಮೆ. ಇದಕ್ಕೆಲ್ಲ ಖರ್ಷು ಮಾಡಬೇಡಿ. ಮನಸ್ಸಿದ್ದರೆ, ಅನಾಥಾಶ್ರಮಕ್ಕೆ ನೀಡಿ, ದಾನ ಧರ್ಮ ಮಾಡಿ. ಖಾಲಿ ಕೈಯಲ್ಲಿ ಬನ್ನಿ. ಮನಸ್ಸು ಬಿಚ್ಚಿ ಮಾತನಾಡೋಣ. ನಿಮಗಾಗಿ, ನಿಮ್ಮನ್ನು ಭೇಟಿ ಮಾಡುವ ಉದ್ದೇಶಕ್ಕೆ ಮಾತ್ರ ಈ ಭೇಟಿ. ಬನ್ನಿ ಸಿಗೋಣ, ಜೈ ಹಿಂದ್‌’ ಎಂದು ವಿಡಿಯೋ ಮೆಸೇಜ್‌ನಲ್ಲಿ ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News