Bhairathi Ranagal: ʻಭೈರತಿ ರಣಗಲ್‌ʼ ಚಿತ್ರದಲ್ಲಿ ಶ್ರೀಮುರುಳಿ: ಏನಂದ್ರು ರೋರಿಂಗ್‌ ಸ್ಟಾರ್!

Srimurali In Bhairathi Ranagal: ಸ್ಯಾಂಡಲ್‌ವುಡ್‌ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಭೈರತಿ ರಣಗಲ್‌ ಸಿನಿಮಾದಲ್ಲಿ ನಟಿಸುತ್ತಾರಾ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ನಟ ಶ್ರೀಮುರಳಿ ಹೇಳಿದ್ದೇನು? ಇಲ್ಲಿದೆ ಫುಲ್‌ ಮಾಹಿತಿ.  

Written by - Zee Kannada News Desk | Last Updated : Mar 13, 2024, 03:07 PM IST
  • ಭೈರತಿ ರಣಗಲ್ ಸಿನಿಮಾ ಇದೇ ಆಗಸ್ಟ್‌ 15 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ. ಇದು ಮಫ್ತಿ ಚಿತ್ರದ ಪ್ರೀಕ್ವೇಲ್‌ ಆಗಿದೆ.
  • ಶ್ರೀಮುರಳಿ ಚಿತ್ರದುರ್ಗಕ್ಕೆ ಕಾರ್ಯಕ್ರಮವೊಂದಕ್ಕಾಗಿ ಭೇಟಿ ನೀಡಿದಾಗ ‘ಬಘೀರ’ ಚಿತ್ರ ಸೇರಿದಂತೆ ಕೆಲವು ವಿಚಾರಗಳ ಬಗ್ಗೆ ಹಂಚಿಕೊಂಡರು.
  • ‘ಭೈರತಿ ರಣಗಲ್’ ಚಿತ್ರಕ್ಕೆ ಮಫ್ತಿ ನಿರ್ದೇಶಕ ನರ್ತನ್‌ ಅವರೇ ಆಕ್ಷನ್‌ ಕಟ್‌ ಹೇಳುತ್ತಿದ್ದು, ಇನ್ನೂ ಈ ಸಿನಿಮಾದ ನಿರ್ಮಾಣವನ್ನು ಸ್ವತಃ ಶಿವರಾಜ್‌ಕುಮಾರ್‌ ಮಾಡುತ್ತಿದ್ದಾರೆ.
Bhairathi Ranagal: ʻಭೈರತಿ ರಣಗಲ್‌ʼ ಚಿತ್ರದಲ್ಲಿ ಶ್ರೀಮುರುಳಿ: ಏನಂದ್ರು ರೋರಿಂಗ್‌ ಸ್ಟಾರ್! title=

Srimurali Clarifies About Bhairathi Ranagal: ಚಂದನವನದ ನಟ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್ ಅಭಿನಯದ ಭೈರತಿ ರಣಗಲ್ ಸಿನಿಮಾದ ಚಿತ್ರೀಕರಣ ಈಗಾಗಲೇ 70% ಮುಗಿದಿದೆ. ಹಲವು ದಿನಗಳ ಹಿಂದೆ ಸಿನಿತಂಡ ಸುದ್ದಿಗೋಷ್ಠಿಯೊಂದು ನಡೆಸಿ ಚಿತ್ರದ ರಿಲೀಸ್‌ ಡೇಟ್‌ ಕೂಡ ಅನೌನ್ಸ್‌ ಮಾಡಿದೆ. ಈ ಸಿನಿಮಾ ಇದೇ ಆಗಸ್ಟ್‌ 15 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ. ಇದು ಮಫ್ತಿ ಚಿತ್ರದ ಪ್ರೀಕ್ವೇಲ್‌ ಆಗಿದೆ. 

ಇತ್ತೀಚೆಗಷ್ಟೇ ನಟ ಶ್ರೀಮುರಳಿ ಮಫ್ತಿ ಪ್ರೀಕ್ವೇಲ್ ‘ಭೈರತಿ ರಣಗಲ್’ ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಶ್ರೀಮುರಳಿ ಚಿತ್ರದುರ್ಗಕ್ಕೆ ಕಾರ್ಯಕ್ರಮವೊಂದಕ್ಕಾಗಿ ಭೇಟಿ ನೀಡಿದಾಗ ‘ಬಘೀರ’ ಚಿತ್ರ ಸೇರಿದಂತೆ ಕೆಲವು ವಿಚಾರಗಳ ಬಗ್ಗೆ ಹಂಚಿಕೊಂಡರು. ಆ ವೇಳೆ ಶ್ರೀ ಮುರಳಿ "ಭೈರತಿ ರಣಗಲ್ ಚಿತ್ರದಲ್ಲಿ ನಾನು ನಟನೆ ಮಾಡ್ತಿಲ್ಲ. ಅದು ಶಿವಣ್ಣ ಮಾಮನ ಮೂವಿ ಮಾತ್ರ ಅದ್ರಲ್ಲಿ ನಾನಿಲ್ಲ. `ಮಫ್ತಿ’ ಚಿತ್ರದ ಪ್ರೀಕ್ವೆಲ್ ಕಥೆ ಅದಾಗಿದೆ, ಅದ್ರಲ್ಲಿ ನಾನಿಲ್ಲ" ಎಂದು ಕ್ಲ್ಯಾರಿಟಿ ನೀಡಿದ್ದರು

ಇದನ್ನೂ ಓದಿ: ಶಿವಣ್ಣ ಪುತ್ರಿ ನಿರ್ಮಾಣದ ಚೊಚ್ಚಲ ಚಿತ್ರ ಬಿಡುಗಡೆಗೆ ರೆಡಿ.. ಬೆಳಕಿನ ಹಬ್ಬಕ್ಕೆ ಫೈರ್ ಫ್ಲೈ ದರ್ಶನ!

ಮತ್ತೆ ನಟ ಶ್ರೀಮುರಳಿ ‘ಭೈರತಿ ರಣಗಲ್’ ಸೀಕ್ವೆಲ್ ಬಗ್ಗೆ ಪ್ರಶ್ನಿಸಿದಕ್ಕೆ ನೋ ಕಾಮೆಂಟ್ಸ್ ಎಂದು ಹೇಳುವುದರ ಜೊತೆಗೆ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸುವುದರ ಮೂಲಕ  ವಿಶ್ ಮಾಡಿದ್ದಾರೆ. ಮಫ್ತಿ ಸಿನಿಮಾದಲ್ಲಿ ನಟ ಶ್ರೀಮುರಳಿ ಪೋಲೀಸ್‌ ಅಧಿಕಾರಿಯಾಗಿ ನಟಿಸಿದ್ದರು. ಆದರೆ ಇದು ಆ ಚಿತ್ರದ ಪ್ರೀಕ್ವೆಲ್‌ ಆಗಿರುವ ಕಾರಣ ಇದರಲ್ಲಿ ನಟ ಶ್ರೀಮುರಳಿ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗಿದೆ.

‘ಭೈರತಿ ರಣಗಲ್’ ಚಿತ್ರಕ್ಕೆ ಮಫ್ತಿ ನಿರ್ದೇಶಕ ನರ್ತನ್‌ ಅವರೇ ಆಕ್ಷನ್‌ ಕಟ್‌ ಹೇಳುತ್ತಿದ್ದು, ಇನ್ನೂ ಈ ಸಿನಿಮಾದ ನಿರ್ಮಾಣವನ್ನು ಸ್ವತಃ ಶಿವರಾಜ್‌ಕುಮಾರ್‌ ಮಾಡುತ್ತಿದ್ದಾರೆ.ಈ ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ರುಕ್ಮಿಣಿ ವಸಂತ್ , ರಾಹುಲ್ ಬೋಸ್, ಅವಿನಾಶ್, ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. ನವೀನ್ ಕುಮಾರ್ ಚಿತ್ರದ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದು ಹಾಗೂ ಮ್ಯೂಸಿಕ್‌ ಡೈರೆಕ್ಟರ್‌ ರವಿ ಬಸ್ರೂರು  ಸಂಗೀತ ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News