Kiccha Sudeep : ಭಾರತೀಯ ಚಿತ್ರರಂಗದಲ್ಲಿ ಹೊಂಬಾಳೆ ಫಿಲ್ಮ್ಸ್‌ ಸಂಸ್ಥೆಯು ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ. ಕೆಜಿಎಫ್, ಕಾಂತಾರದಂತಹ ಸಿನಿಮಾಗಳ ಮೂಲಕ ಈ ದೇಶಾದ್ಯಂತ ಖ್ಯಾತಿ ಪಡೆದಿದೆ. ಪರಭಾಷೆಯ ಚಿತ್ರಗಳಿಗೆ ಸಹ ಹೊಂಬಾಳೆ ಫಿಲ್ಮ್ಸ್‌ ಬಂಡವಾಳ ಹೂಡಿದೆ. ಇದೀಗ ಕಿಚ್ಚ ಸುದೀಪ್ ಅವರ ಹೊಸ ಚಿತ್ರ ಕೂಡ ಇದೇ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಾ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಇದಕ್ಕೆ ಕಾರಣ ಒಂದೇ ಒಂದು ಫೋಟೋ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : "ಅವರ ಖಾಸಗಿ ಭಾಗಗಳಿಗೆ ರೇಟಿಂಗ್‌ ನೀಡಲು Bigg Boss ಮನೆಗೆ ಹೋಗಬೇಕಂತೆ ಈ ನಟಿ"


ಹೊಂಬಾಳೆ ಫಿಲ್ಮ್ಸ್‌ ಸಂಸ್ಥೆಯ ಕಾರ್ತಿಕ್ ಗೌಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಒಂದು ಫೋಟೋ ಕಿಚ್ಚನ ಅಭಿಮಾನಿಗಳ ತಲೆಯಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ‘ಹೊಸ ಆರಂಭಕ್ಕೆ ಕಿಚ್ಚ ಸುದೀಪ್ ಸರ್’ ಎಂದು ಈ ಫೋಟೋಗೆ ಕಾರ್ತಿಕ್‌ ಗೌಡ ಶೀರ್ಷಿಕೆ ನೀಡಿದ್ದಾರೆ.


 


ಅಕ್ಟೋಬರ್ 14 ರಿಂದ ಬಾಲಿವುಡ್ ನಲ್ಲೂ "ಕಾಂತಾರ"ದ ಹವಾ ಶುರು


ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ನಂತರ ಅವರು ನಟಿಸಲಿರುವ ಹೊಸ ಚಿತ್ರದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಅಪ್‌ಡೇಟ್ ಇಲ್ಲ. ಅದಕ್ಕೂ ಮುನ್ನ ಕಾರ್ತಿಕ್ ಗೌಡ ಜೊತೆ ಕಾಣಿಸಿಕೊಂಡಿರುವುದು ಸಿನಿ ಪ್ರಿಯರ ಅಚ್ಚರಿಗೆ ಕಾರಣವಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.