ಚೆನ್ನೈ (ತಮಿಳುನಾಡು) : ತಮ್ಮ ವಿರುದ್ಧದ ದಶಕದಷ್ಟು ಹಳೆಯದಾದ ಎಫ್‌ಐಆರ್ ರದ್ದುಗೊಳಿಸುವಂತೆ ರಾಜಕಾರಣಿ, ನಟ, ನಿರ್ದೇಶಕ ಸೀಮನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆದಿದೆ. ನಟಿ ವಿಜಯಲಕ್ಷ್ಮಿ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. 


COMMERCIAL BREAK
SCROLL TO CONTINUE READING

ಸೀಮನ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವರದಿ ಸಲ್ಲಿಸಿದ್ದಾರೆ. ವರದಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎನ್.ಆನಂದ್ ವೆಂಕಟೇಶ್ ಅವರು ದೂರುದಾರರಾದ ವಿಜಯಲಕ್ಷ್ಮಿ ಅವರಿಗೆ ವಿವರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 29 ಕ್ಕೆ ಮುಂದೂಡಿದರು. 


ಇದನ್ನೂ ಓದಿ : ಬ್ಲ್ಯಾಕ್‌ ಗೌನ್‌ನಲ್ಲಿ ಶೃತಿ ಹಾಸನ್‌ : ಫೋಟೋಸ್‌ ವೈರಲ್‌ 


ಸೀಮನ್ ತಮ್ಮ ವಿರುದ್ಧದ ಎಲ್ಲಾ ಮುಂದಿನ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. 2011ರಲ್ಲಿ ನಟಿ ವಲಸರವಕ್ಕಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸೀಮನ್ ಸುಳ್ಳು ಮದುವೆ ಭರವಸೆ ನೀಡಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಆದರೆ 2012ರಲ್ಲಿ ನಟಿ ವಿಜಯಲಕ್ಷ್ಮಿ ತನ್ನ ದೂರನ್ನು ಹಿಂಪಡೆದಿದ್ದರು. ದೂರುದಾರರು ತಮ್ಮ ದೂರನ್ನು ಹಿಂಪಡೆದಿದ್ದರಿಂದ 10 ವರ್ಷಗಳ ಹಿಂದೆ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಸೀಮನ್ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 


ಇದನ್ನೂ ಓದಿ : ರಜನಿಕಾಂತ್‌ ನಟಿ ಅಮಲಾ ಪೌಲ್ ಮನೆಗೆ ನುಗ್ಗಿ ಧಮ್ಕಿ ಹಾಕಿದ್ದು ನಿಜವೇ!? 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.