)
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದೆ. ಹೈಕೋರ್ಟ್ನ ವಿವೇಚನೆಯ ಬಳಕೆ ಮತ್ತು ಪುರಾವೆಗಳನ್ನು ಪರಿಗಣಿಸುವಲ್ಲಿನ ವೈಫಲ್ಯವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಸರ್ಕಾರದ ವಾದ ದರ್ಶನ್ ಪರ ವಕೀಲರ ವಾದ ಆಲಿಸಿದ ನಂತರ 1 ವಾರ ದಲ್ಲಿ ಲಿಖಿತ ಸಾರಾಂಶ ಮೂರು ಪುಟದಲ್ಲಿ ಸಲ್ಲಿಸುವಂತೆ ಸೂಚಿಸಿ, ಸುಪ್ರೀಂ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಲ್ಲ. ಹೀಗಾಗಿ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿ ಎಂದು ಸರ್ಕಾರಿ ಪರ ವಕೀಲರಿಗೆ ನ್ಯಾಯಮೂರ್ತಿಗಳು ಸೂಚಿಸಿದರು. ಆಗ ಸಿದ್ದಾರ್ಥ್ ಲೂತ್ರಾ ಅವರು ಇದು ಭೀಕರ ಕೊಲೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ರದ್ದಾಗಬೇಕು ಎನ್ನುವುದು ನಮ್ಮ ವಾದ. ಅಪಾರ್ಟ್ ಮೆಂಟ್ ಬಳಿ ಡೆಡ್ ಬಾಡಿ ಸಿಕ್ಕಿದೆ’ ಎಂದು ಅವರು ವಾದಿಸಿದರು. ಸದ್ಯ ಏಳು ಆರೋಪಿಗಳ ಜಾಮೀನನ್ನು ಮಾತ್ರ ರದ್ದು ಮಾಡಬೇಕು ಎಂದು ಕೋರಿದರು.
ಇನ್ನು ದರ್ಶನ್ ಪರ ವಕೀಲರು ಹೈಕೋರ್ಟ್ ಯಾಕೆ ಜಾಮೀನು ನೀಡಿದೆ ಎಂಬ ವಿಚಾರ ಪ್ರಸ್ತಾಪ ಮಾಡಿದರು.. ಹಾಗೆ ಪ್ರಕರಣದ ಇಬ್ಬರು ಸಾಕ್ಷಿಗಳು ಪ್ರಬಲವಾಗಿಲ್ಲ, ಧ್ವಂಧ್ವ ಹೇಳಿಕೆಯಿಂದ ಕೂಡಿದೆ. ಎಫ್ ಎಸ್ ಎಲ್ ರಿಪೋರ್ಟ್ ಕೂಡ ದರ್ಶನ್ ಕೊಲೆಯಾ ಪಾತ್ರ ಬಗ್ಗೆ ಉಲ್ಲೇಖ ಮಾಡ್ತಿಲ್ಲಹೀಗಾಗಿ ಹೈಕೋರ್ಟ್ ಜಾಮೀನು ಆದೇಶ ನೀಡಿದೆ ಎಂದ್ರು.. ಈ ವೇಳೆ ನ್ಯಾಯಮೂರ್ತಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಲು ಹೀಗೂ ಆದೇಶ ಕೊಡಬಹುದೇ? ಎಲ್ಲಾ ಜಾಮೀನು ಪ್ರಕರಣದಲ್ಲಿ ಹೈಕೋರ್ಟ್ ಒಂದೇ ರೀತಿಯ ಆದೇಶ ನೀಡಿದೆ. ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿದೆಯೇ ಎಂಬುದು ಮುಖ್ಯ. ಘಟನೆ ನಡೆದಿರುವುದು ಸುಳ್ಳೇ? ,ಹೈಕೋರ್ಟ್ ಆದೇಶ ನೀಡಿರುವ ರೀತಿ ನಮಗೆ ನೋವುಂಟುಮಾಡಿದೆ. ಟ್ರಯಲ್ ಕೋರ್ಟ್ ಜಡ್ಜ್ ತಪ್ಪು ಮಾಡುತ್ತಾರೆಂದರೆ ನಂಬಬಹುದು. ಆದರೆ,ಹೈಕೋರ್ಟ್ ಜಡ್ಜ್ ನೀಡಿರುವ ಕಾರಣಗಳನ್ನು ಒಪ್ಪುವುದು ಹೇಗೆ’ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.
ಇನ್ನು ಪವಿತ್ರಾ ಗೌಡ ಪರ ವಕೀಲೆ ವಾದ ಮಂಡಿಸಲು ಮುಂದಾಗಿದ್ದು, ‘ಪವಿತ್ರಾ ಗೌಡ ಳಿಂದ ರೇಣುಕಾಸ್ವಾಮಿಗೆ ಒಂದೇ ಒಂದು ಗಾಯವೂ ಆಗಿಲ್ಲ. ಚಪ್ಪಲಿಯಿಂದ ಹೊಡೆದಿದ್ದಾರೆಂಬ ಒಂದು ಹೇಳಿಕೆ ಮಾತ್ರವಿದೆಎಂದು ವಾದಿಸಿದರು. ಇದಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅಸಮಾಧಾನ ಹೊರಹಾಕಿ ‘ಈ ಕೇಸ್ ಆಗಲು ನೀವೇ ಕಾರಣ ಅಲ್ಲವೇ?. ನೀವಿಲ್ಲದಿದ್ದರೆ A2 ದರ್ಶನ್ ಆಸಕ್ತಿ ಞವಹಿಸುತ್ತಿರಲಿಲ್ಲ. ಇಷ್ಟೆಲ್ಲಾ ಆಗಲು ನೀವೇ ಕಾರಣ ಅಲ್ಲವಾ’ ಎಂದು ನೇರವಾಗಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.
ಒಟ್ಟಾರೆಯಾಗಿ ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ನ ಪೀಠ ಹೇಳಿದ್ದು, ಇದು ಆರೋಪಿಗಳಿಗೆ ನುಂಗಲಾಗದ ಬಿಸಿ ತುಪ್ಪವಾಗಿ ಪರಿಣಮಿಸಿದೆ.. 1 ವಾರಗಳ ಬಳಿಕ ದಾಸ ಆ್ಯಂಡ್ ಗ್ಯಾಂಗ್ ಜೈಲು ಸೇರ್ತಾರ ಅನ್ನೋ ಕುತೂಹಲ ಕೂಡ ವ್ಯಕ್ತವಾಗ್ತಿದೆ.