ಯುವ ಪ್ರತಿಭೆ ವಿನಯ್ ಹೊಸ‌ ಕನಸು 'ದಿ' ಸಿನಿಮಾದ ಮೊದಲ ಹಾಡು ಅನಾವರಣ...! 

ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ.ವಿಭಿನ್ನ ಬಗೆಯ ಕಥಾಹಂದರ ಸಿನಿಮಾ ಮೂಲಕ ಯುವ ಸಿನಿಮೋತ್ಸಾಹಿಗಳು ಪ್ರೇಕ್ಷಕರ ಎದುರು ಹಾಜರಾಗುತ್ತಿದೆ.ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾ

Written by - YASHODHA POOJARI | Edited by - Manjunath N | Last Updated : Jan 15, 2024, 04:56 PM IST
  • 'ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ 'ದಿ' ಚಿತ್ರವನ್ನು ನಿರ್ಮಾಣ ಮಾಡಿದೆ
  • ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ
  • ಆಲನ್ ಭರತ್ ಕ್ಯಾಮೆರಾ ವರ್ಕ್, ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ
 ಯುವ ಪ್ರತಿಭೆ ವಿನಯ್ ಹೊಸ‌ ಕನಸು 'ದಿ' ಸಿನಿಮಾದ ಮೊದಲ ಹಾಡು ಅನಾವರಣ...!  title=

ಬೆಂಗಳೂರು: ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ.ವಿಭಿನ್ನ ಬಗೆಯ ಕಥಾಹಂದರ ಸಿನಿಮಾ ಮೂಲಕ ಯುವ ಸಿನಿಮೋತ್ಸಾಹಿಗಳು ಪ್ರೇಕ್ಷಕರ ಎದುರು ಹಾಜರಾಗುತ್ತಿದೆ.ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾ

ಇದನ್ನೂ ಓದಿPhoto Gallery: ಪ್ರಧಾನಿ ಮೋದಿಯಿಂದ ದೇಶದ ಅತೀ ಉದ್ದದ ಅಟಲ್ ಸೇತುವೆ ಲೋಕಾರ್ಪಣೆ!

ದಿ ಸಿನಿಮಾ ಮೂಲಕ ವಿನಯ್ ನಾಯಕನಾಗಿ ಹಾಗೂ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಒಂದಷ್ಟು ವರ್ಷಗಳ ಅನುಭವವಿರುವ ಅವರೀಗ ದಿ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೆಜ್ಜೆ ಇಟ್ಟಿದ್ದಾರೆ. ಈ ಚಿತ್ರದ ನಾನು ಮೌನಿ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ.ಕವಿರಾಜ್ ಸಾಹಿತ್ಯದ ಈ ಹಾಡಿಗೆ ಸಾಯಿ ವಿಘ್ನೇಶ್ ಧ್ವನಿಯಾಗಿದ್ದು, ಯುಎಂ ಸ್ಟೀವನ್ ಸತೀಶ್ ಸಂಗೀತ ಒದಗಿಸಿದ್ದಾರೆ.ನಾನು ಮೌನಿ ಅಂತಾ ವಿನಯ್ ಹಾಗೂ ದಿಶಾ ರಮೇಶ್ ಹಾಡಿನಲ್ಲಿ ಮಿಂಚಿದ್ದಾರೆ.

ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ದಿ ಚಿತ್ರ ಡಾಲರ್ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ.ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. 

ಇದನ್ನೂ ಓದಿ: ದೆಹಲಿ ಪೊಲೀಸ್ ಅಪರಾಧ ವಿಭಾಗದ ಮೊದಲ ಮಹಿಳಾ ಮುಖ್ಯಸ್ಥೆ ಶಾಲಿನಿ ಸಿಂಗ್ ಯಾರು?

'ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ 'ದಿ' ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಆಲನ್ ಭರತ್ ಕ್ಯಾಮೆರಾ ವರ್ಕ್, ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ದಿ ಸಿನಿಮಾಗೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸಿಂಪಲ್ ಸುನಿ ಈ ಹಿಂದೆ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದ್ದರು. ಸದ್ಯ ಪ್ರಚಾರದ ಅಖಾಡಕ್ಕೆ ಧುಮುಕಿರುವ ಚಿತ್ರತಂಡ ಶೀಘ್ರದಲ್ಲೇ ದಿ ಸಿನಿಮಾವನ್ನು ತೆರೆಗೆ ತರಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News