ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ "ರುದ್ರ ಗರುಡ ಪುರಾಣ" ಚಿತ್ರತಂಡ 

 ಪುನೀತ್ ರಾಜಕುಮಾರ್‌ ನಿರ್ಮಾಣದ "ಕವಲುದಾರಿ" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕನಾಗಿ ನಟಿಸಿ ಕನ್ನಡಿಗರ ಮನ ಗೆದ್ದಿರುವ ಹಾಗೂ "ಶೈತಾನ್" ವೆಬ್ ಸಿರೀಸ್ ಮೂಲಕ ತೆಲುಗಿನಲ್ಲೂ ಮನೆಮಾತಾಗಿರುವ ನಟ ರಿಷಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.ಈ ಸಂದರ್ಭದಲ್ಲಿ ರಿಷಿ ನಾಯಕರಾಗಿ ನಟಿಸಿರುವ "ರುದ್ರ ಗರುಡ ಪುರಾಣ" ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಷಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ‌.

Written by - YASHODHA POOJARI | Edited by - Manjunath N | Last Updated : Jun 21, 2024, 04:35 PM IST
  • ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ
  • "ಡಿಯರ್ ವಿಕ್ರಮ್" ಚಿತ್ರ ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ
  • ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು
 ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ "ರುದ್ರ ಗರುಡ ಪುರಾಣ" ಚಿತ್ರತಂಡ  title=

ಬೆಂಗಳೂರು: ಪುನೀತ್ ರಾಜಕುಮಾರ್‌ ನಿರ್ಮಾಣದ "ಕವಲುದಾರಿ" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕನಾಗಿ ನಟಿಸಿ ಕನ್ನಡಿಗರ ಮನ ಗೆದ್ದಿರುವ ಹಾಗೂ "ಶೈತಾನ್" ವೆಬ್ ಸಿರೀಸ್ ಮೂಲಕ ತೆಲುಗಿನಲ್ಲೂ ಮನೆಮಾತಾಗಿರುವ ನಟ ರಿಷಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.ಈ ಸಂದರ್ಭದಲ್ಲಿ ರಿಷಿ ನಾಯಕರಾಗಿ ನಟಿಸಿರುವ "ರುದ್ರ ಗರುಡ ಪುರಾಣ" ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಷಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ‌.

 ಈಗಾಗಲೇ ಚಿತ್ರೀಕರಣ ಪೂರೈಸಿರುವ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.  

ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ(ತನಿಖಾಧಿಕಾರಿ) ಕಾಣಿಸಿಕೊಂಡಿದ್ದಾರೆ.ಇತ್ತೀಚೆಗಷ್ಟೇ ಈ ಚಿತ್ರದ ಫಸ್ಟ್ ಲುಕ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು.ಚಿತ್ರದ ಫಸ್ಟ್ ಲುಕ್ ಗೆ ರಿಷಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. 

ಇದನ್ನೂ ಓದಿ: Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!

 ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ."ಡಿಯರ್ ವಿಕ್ರಮ್" ಚಿತ್ರ ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರಿ, ಕೆ.ಎಸ್ ಶ್ರೀಧರ್, ಅಶ್ವಿನಿ ಗೌಡ,  ರಾಮ್ ಪವನ್, ವಂಶಿ, ಆಕರ್ಷ್, ಜೋಸೆಫ್, ಪ್ರಭಾಕರ್, ಗೌತಮ್ ಮೈಸೂರು, ಸ್ನೇಕ್ ಶ್ಯಾಮ್, ರಂಗನಾಥ್ ಭಾರದ್ವಾಜ್, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ರಿದ್ವಿ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು: ರಾಜ್ಯ ಸರ್ಕಾರದ ಮಹತ್ವದ ಸಭೆ

ಸದ್ಯದಲ್ಲೇ ಚಿತ್ರದ ಹಾಡುಗಳನ್ನು ಬಿಡುಗಡೆ ‌ಮಾಡುವ ಮೂಲಕ ಪ್ರಚಾರ ಕಾರ್ಯ ಪ್ರಾರಂಭಿಸುವುದಾಗಿ ತಿಳಿಸಿರುವ ನಿರ್ದೇಶಕರು ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎನ್ನುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News