ಆದಿತ್ಯ ಬರ್ತ್ ಡೇ ಗೆ ಬಿಡುಗಡೆಯಾಯಿತು ‘ಟೆರರ್’ ಚಿತ್ರದ ಟೀಸರ್

ನಟ ಆದಿತ್ಯ ಅಭಿನಯದ ‘ಟೆರರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ ಬಿಡುಗಡೆ ಮಾಡಿದೆ‌.  ನಿರ್ದೇಶಕ - ನಿರ್ಮಾಪಕ ಆರ್. ಚಂದ್ರು ‘ಟೆರರ್’ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು. 

Written by - YASHODHA POOJARI | Edited by - Manjunath N | Last Updated : May 5, 2023, 09:42 PM IST
  • "ಟೆರರ್'’ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ.
  • ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ.
  • ಟೀಸರ್ ನಲ್ಲಿಯೇ ‘ಟೆರರ್’ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಆರ್ ಚಂದ್ರು ಹಾರೈಸಿದರು.
ಆದಿತ್ಯ ಬರ್ತ್ ಡೇ ಗೆ ಬಿಡುಗಡೆಯಾಯಿತು ‘ಟೆರರ್’ ಚಿತ್ರದ ಟೀಸರ್  title=

ಬೆಂಗಳೂರು: ನಟ ಆದಿತ್ಯ ಅಭಿನಯದ ‘ಟೆರರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ ಬಿಡುಗಡೆ ಮಾಡಿದೆ‌.  ನಿರ್ದೇಶಕ - ನಿರ್ಮಾಪಕ ಆರ್. ಚಂದ್ರು ‘ಟೆರರ್’ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು. 

"ಟೆರರ್'’ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ‘ಟೆರರ್’ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಆರ್ ಚಂದ್ರು ಹಾರೈಸಿದರು.   

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ,  ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು.

ಇದನ್ನೂ ಓದಿ: "ನಾನು ಮಾತನಾಡುವಾಗ ಅವರು ಯಾರಿಗೂ ಎದ್ದುನಿಂತು ಮಾತನಾಡುವ ತಾಕತ್ತು ಅವರಿಗಿರಲಿಲ್ಲ"

ಈ ಕಥೆ ಕೇಳಿದ ಕೂಡಲೇ ನಿರ್ಮಾಪಕ ಸಿಲ್ಕ್ ಮಂಜು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಗುತ್ತಿದೆ.  ಸಿನಿಮಾದಲ್ಲಿ ಆದಿತ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ ಕೂಡ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕೋಟೆ ಪ್ರಭಾಕರ್, ಧರ್ಮ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ 30% ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ನಿರ್ದೇಶಕ ರಂಜನ್ ಶಿವರಾಮ್ ಗೌಡ ಹೇಳಿದರು.

ಕನ್ನಡ ಚಿತ್ರರಂಗಕ್ಕೆ "A" ಎಂಬ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ಅವರ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಂಜನ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಹುಟ್ಟುಹಬ್ಬಕ್ಕಾಗಿ ವಿಶೇಷ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಇಲ್ಲಿ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಾಯಕ ಆದಿತ್ಯ. 

ಇದನ್ನೂ ಓದಿ: Karnataka Election 2023: ಮತದಾನಕ್ಕೆ ಸಜ್ಜಾದ ಯುವಕರು

‘ಎ’ ಸಿನಿಮಾ ಬಿಡುಗಡೆಯಾಗಿ 25 ವರ್ಷ ಆದ ಮೇಲೆ ಮತ್ತೊಂದು ನಿರೀಕ್ಷಿತ ಸಿನಿಮಾ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಿಲ್ಕ್ ಮಂಜು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News