ಕ್ರಾಂತಿ ಸಿನಿಮಾಗಿಂತ ಮುಂಚೆ ದರ್ಶನ್‌ ತಿಮ್ಮಪ್ಪನ ದರ್ಶನ ಪಡೆದಿದ್ದರು. ಆ ವೇಳೆ ದರ್ಶನ್ ಆತ್ಮೀಯರಾಗಿದ್ದ ಸಚ್ಚಿದಾನಂದ ಹಾಗೂ ಎಂಎಲ್‌ಎ ಸತೀಶ್ ರೆಡ್ಡಿ ಕೂಡ ಚಾಲೆಂಜಿಂಗ್‌ ಸ್ಟಾರ್‌ಗೆ ಜೊತೆಯಾಗಿದ್ದರು. 


COMMERCIAL BREAK
SCROLL TO CONTINUE READING

ಈಗ ಮತ್ತೆ ಚಾಲೆಂಜಿಂಗ್ ಸ್ಟಾರ್ ತಿರುಪತಿಯಲ್ಲಿ ಭೇಟಿ ಕೊಟ್ಟಿದ್ದಾರೆ. ಈ ಬಾರಿ ಕೂಡ ಆತ್ಮೀಯ ಗೆಳೆಯರಾಗಿರುವ ಸಚ್ಚಿದಾನಂದ ಜೊತೆಯಾಗಿದ್ದಾರೆ. ಇವರೊಂದಿಗೆ 'ಮೆಜೆಸ್ಟಿಕ್' ಸಿನಿಮಾದ ನಿರ್ಮಾಪಕ ಎಂ ಜಿ ರಾಮಮೂರ್ತಿ ಕೂಡ ಜೊತೆಯಾಗಿದ್ದರು. ಆ ಫೋಟೊಗಳನ್ನು ದರ್ಶನ್ ಅಭಿಮಾನಿಗಳು ಶೇರ್ ಮಾಡಿಕೊಂಡಿದ್ದು, ಇವು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. 




ಇದನ್ನೂ ಓದಿ-Womens Day 2023 : ಕ್ಯಾನ್ಸರ್ ಮಹಾಮಾರಿ ವಿರುದ್ದ ಹೋರಾಡಿ ಗೆದ್ದ ಸಾಹಸಿ ನಟಿ ; ಹಂಸ ನಂದಿನಿ 


ಚಾಲೆಂಜಿಂಗ್‌ ಸ್ಟಾರ್‌ ಬಹುನೀರಿಕ್ಷಿತ ಸಿನಿಮಾ ಕ್ರಾಂತಿ ಸಿನಿಮಾ ಬಿಡುಗಡೆಯಾಗಿ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ.  ಇದಲ್ಲದೇ ಡಿ ಬಾಸ್‌ ತರುಣ್ ಸುಧೀರ್ ನಿರ್ದೇಶಿಸುತ್ತಿರುವ ಈ ಸಿನಿಮಾಗೆ 'ಕಾಟೇರ' ಅನ್ನೋ ಟೈಟಲ್ ಫಿಕ್ಸ್ ಮಾಡಲಾಗಿದೆ. 'ಕಾಟೇರ' ಸಿನಿಮಾವನ್ನು ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಈ ಮಧ್ಯೆನೇ ದರ್ಶನ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಂದಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಜೊತೆ ಕನಸಿನ ರಾಣಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಹುಟ್ಟುಹಬ್ಬದಂದು ನಾಲ್ಕೈದು ಸಿನಿಮಾ ಅನೌನ್ಸ್ ಆಗಿವೆ. ಆ ಸಿನಿಮಾಗಳಿಗಾಗಿ ಇಡೀ ದರ್ಶನ್‌ ಅಭಿಮಾನಿ ಬಳಗವೇ ಕಾತುರದಿಂದ ಕಾಯುತ್ತಿದೆ.


ಇದನ್ನೂ ಓದಿ-Power Star Pawan : ವೇದಿಕೆ ಮೇಲಿದ್ದ ʼಪವರ್ ಸ್ಟಾರ್ ಪವನ್ʼ ಮೇಲೆ ದಾಳಿ..! ವಿಡಿಯೋ ವೈರಲ್‌ 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.