ಸೋಷಿಯಲ್‌ ಮೀಡಿಯಾದಲ್ಲಿ 'ತೂತು ಮಡಿಕೆ' ಟೈಟಲ್ ಟ್ರ್ಯಾಕ್ ಹವಾ..!

ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಸಿನಿಮಾಗಳ ಪೈಕಿ 'ತೂತು ಮಡಿಕೆ' ಕೂಡ ಒಂದು.'ತೂತು ಮಡಿಕೆ' ತಂಡ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಆದಷ್ಟು ಬೇಗ ರಿಲೀಸ್‌ ಮಾಡಲು ಸಿದ್ಧತೆ ನಡೆಸಿದೆ. ಈ ನಡುವೆ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿ ಹವಾ ಎಬ್ಬಿಸಿರುವ 'ತೂತು ಮಡಿಕೆ' ಟೀಂ, ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದೆ.

Written by - Malathesha M | Edited by - Manjunath N | Last Updated : Jun 2, 2022, 01:16 AM IST
  • ತೂತು ಮಡಿಕೆ' ತಂಡದಲ್ಲಿ ಸಾಕಷ್ಟು ಪ್ರತಿಭಾನ್ವಿತರೇ ಇದ್ದು, ಮೋಷನ್ ಪೋಸ್ಟರ್ ಜೊತೆಗೆ ಯಾಮಾರಿದೆ ಹೃದಯ ಹಾಡಿನ ಮೂಲಕ ನಿರೀಕ್ಷೆಯ ಭಾರವನ್ನ ಮತ್ತಷ್ಟು ಹೆಚ್ಚಿಸಿದೆ ಸಿನಿಮಾ.
  • ಸ್ಯಾಂಡಲ್‌ವುಡ್‌ನಲ್ಲಿ ಕೊರೊನಾ ಕಂಟಕದ ಬಳಿಕ ಸಾಲು ಸಾಲು ಸಿನಿಮಾಗಳು ರಿಲೀಸ್‌ ಆಗುತ್ತಿದ್ದು, ಇದೀಗ 'ತೂತು ಮಡಿಕೆ' ಕೂಡ ಅದೇ ಸಾಲಿಗೆ ಸೇರುತ್ತಿದೆ.
ಸೋಷಿಯಲ್‌ ಮೀಡಿಯಾದಲ್ಲಿ 'ತೂತು ಮಡಿಕೆ' ಟೈಟಲ್ ಟ್ರ್ಯಾಕ್ ಹವಾ..! title=

ನವದೆಹಲಿ: ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಸಿನಿಮಾಗಳ ಪೈಕಿ 'ತೂತು ಮಡಿಕೆ' ಕೂಡ ಒಂದು.'ತೂತು ಮಡಿಕೆ' ತಂಡ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಆದಷ್ಟು ಬೇಗ ರಿಲೀಸ್‌ ಮಾಡಲು ಸಿದ್ಧತೆ ನಡೆಸಿದೆ. ಈ ನಡುವೆ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿ ಹವಾ ಎಬ್ಬಿಸಿರುವ 'ತೂತು ಮಡಿಕೆ' ಟೀಂ, ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದೆ.

'ತೂತು ಮಡಿಕೆ' ತಂಡದಲ್ಲಿ ಸಾಕಷ್ಟು ಪ್ರತಿಭಾನ್ವಿತರೇ ಇದ್ದು,  ಮೋಷನ್ ಪೋಸ್ಟರ್ ಜೊತೆಗೆ ಯಾಮಾರಿದೆ ಹೃದಯ ಹಾಡಿನ ಮೂಲಕ ನಿರೀಕ್ಷೆಯ ಭಾರವನ್ನ ಮತ್ತಷ್ಟು ಹೆಚ್ಚಿಸಿದೆ ಸಿನಿಮಾ. ಸ್ಯಾಂಡಲ್‌ವುಡ್‌ನಲ್ಲಿ ಕೊರೊನಾ ಕಂಟಕದ ಬಳಿಕ ಸಾಲು ಸಾಲು ಸಿನಿಮಾಗಳು ರಿಲೀಸ್‌ ಆಗುತ್ತಿದ್ದು, ಇದೀಗ 'ತೂತು ಮಡಿಕೆ' ಕೂಡ ಅದೇ ಸಾಲಿಗೆ ಸೇರುತ್ತಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ: ನ್ಯಾ.ಕೆ.ಭಕ್ತವತ್ಸಲ ಆಯೋಗಕ್ಕೆ ಅಹವಾಲು ಸಲ್ಲಿಸಲು ಸೂಚನೆ

ಸಾಂಗ್‌ ಹವಾ..!

ಉತ್ಸಾಹಿ ತಂಡ ಹೊಸ ಬಗೆಯ ಸಿನಿಮಾವನ್ನ ಕನ್ನಡಿಗರ ಎದುರು ತರಲು ಸಿದ್ಧತೆ ನಡೆಸಿದೆ. ನಿತಿನ್ ನಾರಾಯಣ್ ಕ್ಯಾಚಿ-ಮ್ಯಾಚಿ ಸಾಹಿತ್ಯವಿರುವ 'ತೂತು ಮಡಿಕೆ' ಹಾಡಿಗೆ, ಚೇತನ್ ನಾಯ್ಕ್ ಧ್ವನಿಯಾಗಿದ್ದು, ಸ್ವಾಮಿನಾಥನ್ ಆರ್.ಕೆ.ಸಂಗೀತದ ಕಂಪು ಹಾಡಿನ ಇಂಪನ್ನು ಹೆಚ್ಚಿಸಿದೆ. ಈ ಹಿಂದೆ ರಿಲೀಸ್ ಆಗಿದ್ದ ಯಾಮಾರಿದೆ ಹೃದಯ ಹಾಡಿನ ಚಿತ್ರೀಕರಣ ನಡೆದ ಜಾಗದಲ್ಲೇ ಟೈಟಲ್ ಟ್ರ್ಯಾಕ್ ಕೂಡ ಶೂಟ್ ಆಗಿದ್ದು, ಸ್ಥಳೀಯರನ್ನು ಬಳಸಿಕೊಂಡು ಮೋಹನ್ ಮಾಸ್ಟರ್ ಹಾಡಿಗೆ ಕೊರಿಯೋಗ್ರಾಫಿ ಮಾಡಿದ್ದಾರೆ.

ಅಂದಹಾಗೆ ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು  ಮೂಕವಿಸ್ಮಿತ, ಸಿಲಿಕಾನ್ ಸಿಟಿ, ಕಿಸ್ ಸಿನಿಮಾಗಳಲ್ಲಿ ಸಪೋರ್ಟಿಂಗ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದ ಚಂದ್ರ ಕೀರ್ತಿ 'ತೂತು ಮಡಿಕೆ' ಸಿನಿಮಾದಲ್ಲಿ ನಾಯಕನಾಗಿ ಮಿಂಚಿದ್ದು, ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ನಾಯಕಿಯಾಗಿ ಪಾವನಾ ಗೌಡ ನಾಯಕಿ ನಟಿಸಿದ್ದು, ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾಬಳಗ ಸಿನಿಮಾದಲ್ಲಿದೆ.

ಇದಿಷ್ಟೇ ಅಲ್ಲದೆ ಕಾಮಿಡಿ ಥ್ರಿಲ್ಲರ್ ಸಸ್ಪೆನ್ಸ್ ಕಥಾಹೂರಣದ 'ತೂತು ಮಡಿಕೆ' ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ನಡಿ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದು, ನವೀನ್ ಛಾಯಾಗ್ರಾಹಣ, ಉಜ್ವಲ್ ಸಂಕಲನ ಸಿನಿಮಾಕ್ಕಿದ್ದು, ಸದ್ಯ 2 ಸಾಂಗ್ ರಿಲೀಸ್ ಮಾಡಿರುವ ಚಿತ್ರತಂಡ ಶೀರ್ಷದಲ್ಲೇ ಟ್ರೇಲರ್ ಬಿಡುಗಡೆ ಮಾಡಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News