Prabhas Donates: ರಾಮ ಮಂದಿರಕ್ಕೆ ನಟ ಪ್ರಭಾಸ್‌ 50 ಕೋಟಿ ರೂ. ದೇಣಿಗೆ ಕೊಟ್ರಾ..? ಈ ಸುದ್ದಿಯ ಸತ್ಯಾಂಶ ಇಲ್ಲಿದೆ

Prabhas Ram Mandir donation : ಇದೇ ತಿಂಗಳು 22 ರಂದು ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೆ ನಟ ಪ್ರಭಾಸ್‌ ರಾಮಮಂದಿರಕ್ಕೆ 50 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ವರದಿಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೆ, ದೇಗುಲ ಉದ್ಘಾಟನೆಯ ದಿನದ ಊಟದ ಖರ್ಚನ್ನು ಸಹ ವಹಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ಪಷ್ಟತೆ ಇಲ್ಲಿದೆ ನೋಡಿ..

Written by - Krishna N K | Last Updated : Jan 19, 2024, 05:23 PM IST
  • ಇದೇ ತಿಂಗಳು 22 ರಂದು ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಯಾಗಲಿದೆ.
  • ರಾಮಮಂದಿರಕ್ಕೆ ನಟ ಪ್ರಭಾಸ್‌ 50 ಕೋಟಿ ರೂ. ದೇಣಿಗೆ.
  • ಉದ್ಘಾಟನಾ ದಿನವಾದ ಜನವರಿ 22 ರಂದು ಸಂಪೂರ್ಣ ಆಹಾರದ ವೆಚ್ಚ.
Prabhas Donates: ರಾಮ ಮಂದಿರಕ್ಕೆ ನಟ ಪ್ರಭಾಸ್‌ 50 ಕೋಟಿ ರೂ. ದೇಣಿಗೆ ಕೊಟ್ರಾ..? ಈ ಸುದ್ದಿಯ ಸತ್ಯಾಂಶ ಇಲ್ಲಿದೆ title=

Prabhas Ram Mandir food : ಅಯೋಧ್ಯೆಯ ರಾಮಮಂದಿರಕ್ಕೆ ನಟ ಪ್ರಭಾಸ್‌ 50 ಕೋಟಿ ರೂ. ದೇಣಿಗೆ ನೀಡಿದ್ದಾಗಿ ವರದಿಯಾಗಿದೆ. ಇದಲ್ಲದೆ, ಉದ್ಘಾಟನಾ ದಿನವಾದ ಜನವರಿ 22 ರಂದು ಸಂಪೂರ್ಣ ಆಹಾರದ ವೆಚ್ಚವನ್ನು ನೋಡಿಕೊಳ್ಳಲು ಮುಂದೆ ಬಂದಿದ್ದಾರೆ ಎಂದು ಹೇಳಲಾಗಿದೆ. ಇದರ ಹಿಂದಿನ ಸತ್ಯ ಇಲ್ಲಿದೆ ನೋಡಿ..

ಪ್ರಭಾಸ್ ಇತ್ತೀಚೆಗಷ್ಟೇ ಬಿಡುಗಡೆಯಾದ 'ಸಾಲಾರ್: ಭಾಗ 1- ಕದನ ವಿರಾಮ' ಚಿತ್ರದ ಯಶಸ್ಸಿನಲ್ಲಿದ್ದಾರೆ. ಡಿಸೆಂಬರ್ 22 ರಂದು ಚಿತ್ರಮಂದಿರಲ್ಲಿ ಬಿಡುಗಡೆಯಾದ ಈ ಸಿನಿಮಾ ಡಾರ್ಲಿಂಗ್‌ಗೆ ಕಮ್‌ಬ್ಯಾಕ್‌ ನೀಡಿತ್ತು. ಈ ಸಿನಿಮಾಗೆ ಕೆಜಿಎಫ್‌ ಖ್ಯಾತಿಯ ಪ್ರಶಾಂತ್‌ ನೀಲ್‌ ಆಕ್ಷನ್‌ ಕಟ್‌ ಹೇಳಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ಮತ್ತು ಸಲ್ಮಾನ್ ಸಿನಿಮಾಗಳಿಗಿಂತ ಹೆಚ್ಚು ಕಲೆಕ್ಷನ್ ಮಾಡುವ ಭಾರತದ ಟಾಪ್ ಹೀರೋಯಿನ್ ಈಕೆ!

ಇನ್ನು ಕಳೆದ ಕೆಲವು ದಿನಗಳಿಂದ ಅಯೋಧ್ಯೆಯ ರಾಮಮಂದಿರಕ್ಕೆ ಪ್ರಭಾಸ್ 50 ಕೋಟಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ, ಕಾರ್ಯಕ್ರಮವೊಂದರಲ್ಲಿ ಆಂಧ್ರ ಪ್ರದೇಶದ ಶಾಸಕ ಚಿರ್ಲಾ ಜಗ್ಗಿರೆಡ್ಡಿ ಪ್ರಭಾಸ್ ರಾಮ ಮಂದಿರ ಉದ್ಘಾಟನೆಯ ದಿನದಂದು ಆಹಾರದ ವೆಚ್ಚವನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ಪ್ರಭಾಸ್ ತಂಡದ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದು, ಮೂಲಗಳ ಪ್ರಕಾರ ಇದು ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ. ಅಲ್ಲದೆ, ರಾಮಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರಭಾಸ್‌ಗೆ ಆಹ್ವಾನ ನೀಡಿದ್ದಾರೋ ಇಲ್ಲವೋ ಇನ್ನೂ ಗೊತ್ತಿಲ್ಲ. ಆದ್ರೆ ದೇಣಿಗೆ ನೀಡಿದ್ದು, ಮಾತ್ರ ಗಾಳಿ ಸುದ್ದಿ ಎನ್ನಲಾಗಿದೆ.

ಇದನ್ನೂ ಓದಿ:BBK 10: ಫಿನಾಲೆಗೆ ದಿನಗಣನೆ ಬೆನ್ನಲ್ಲೇ ವಿನ್ನರ್ ಹೆಸರು ರಿವೀಲ್! ಹೈ ಸ್ಪೀಡ್’ನಲ್ಲಿ ಜನಪ್ರಿಯತೆ ಹೆಚ್ಚಿಸಿಕೊಂಡ ಈ ಸ್ಪರ್ಧಿಗೆ ‘ಬಿಗ್ ಬಾಸ್’ ವಿಜೇತ ಪಟ್ಟ!

ನಿರ್ದೇಶಕ ಪ್ರಶಾಂತ್ ನೀಲ್ ಅವರ 'ಸಾಲಾರ್: ಭಾಗ 1 - ಕದನ ವಿರಾಮ' ದೊಂದಿಗೆ ಪ್ರಭಾಸ್ ಬ್ಲಾಕ್ಬಸ್ಟರ್ ಹಿಟ್ ಗಳಿಸಿದರು. ಪ್ರಸ್ತುತ ಡಾರ್ಲಿಂಗ್‌, ನಿರ್ದೇಶಕ ಮಾರುತಿ ಅವರ 'ದಿ ರಾಜಾ ಸಾಬ್' ಚಿತ್ರದ ಚಿತ್ರೀಕರಣದಲ್ಲಿದ್ದಾರೆ, ಇದು ಅವರ ಮುಂಬರುವ ಚಿತ್ರವಾಗಿದೆ. ಇದರ ಬಳಿಕ 'ಸಾಲಾರ್: ಭಾಗ 2' ಮತ್ತು ಸಂದೀಪ್ ರೆಡ್ಡಿ ವಂಗ ಅವರ 'ಸ್ಪಿರಿಟ್' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News