Upendra: ಏಪ್ರಿಲ್ 1ಕ್ಕೆ ‘ಹೋಮ್ ಮಿನಿಸ್ಟರ್’ ಆಗಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ!

‘ಹೋಮ್ ಮಿನಿಸ್ಟರ್’ ಸಿನಿಮಾ ಬಿಡುಗಡೆಗೂ ಮುನ್ನ ಜಿಬ್ರಾನ್ ಸಂಗೀತ ನೀಡಿರುವ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.

Written by - YASHODHA POOJARI | Edited by - Puttaraj K Alur | Last Updated : Mar 22, 2022, 04:44 PM IST
  • ಏಪ್ರಿಲ್ 1ಕ್ಕೆ ‘ಹೋಮ್ ಮಿನಿಸ್ಟರ್’ ಆಗಿ ಮಿಂಚಲಿರುವ ಉಪೇಂದ್ರ
  • ಗಣ್ಯರ ಉಪಸ್ಥಿತಿಯಲ್ಲಿ ‘ಹೋಮ್ ಮಿನಿಸ್ಟರ್’ ಹಾಡುಗಳ ಬಿಡುಗಡೆ
  • ಕೊರೊನಾ ಪೂರ್ವದಲ್ಲಿ ಆರಂಭವಾದ ಚಿತ್ರದ ಬಗ್ಗೆ ಮಾತನಾಡಿದ ಉಪ್ಪಿ
Upendra: ಏಪ್ರಿಲ್ 1ಕ್ಕೆ ‘ಹೋಮ್ ಮಿನಿಸ್ಟರ್’ ಆಗಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ! title=
‘ಹೋಮ್ ಮಿನಿಸ್ಟರ್’ ಆಗಿ ಮಿಂಚಲಿರುವ ಉಪೇಂದ್ರ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ(​Real Star Upendra) ನಾಯಕರಾಗಿ ನಟಿಸಿರುವ ‘ಹೋಮ್ ಮಿನಿಸ್ಟರ್’(Home Minister) ಚಿತ್ರ ಇದೇ ಏಪ್ರಿಲ್ 1ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಿನಿಮಾ ಬಿಡುಗಡೆಗೂ ಮುನ್ನ ಜಿಬ್ರಾನ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂದ್ ಆಡಿಯೋ ಮೂಲಕ ಈ ಹಾಡುಗಳು ಬಿಡುಗಡೆಯಾಗಿವೆ.

ಸಚಿವ ಮುನಿರತ್ನ(Munirathna), ಗೋಲ್ಡನ್‌ ಸ್ಟಾರ್ ಗಣೇಶ್, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿರಂಜನ್ ಸುಧೀಂದ್ರ, ಪ್ರಿಯಾಂಕ ಉಪೇಂದ್ರ ಹಾಗೂ ಸಾಯಿ ಗೋಲ್ಡ್ ‌ಪ್ಯಾಲೆಸ್ ನ ಶರವಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.

ಇದನ್ನೂ ಓದಿ: Mysore University Convocation: ಪಾರ್ವತಮ್ಮ & ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ 2 ಚಿನ್ನದ ಪದಕ ಘೋಷಣೆ

‘ಕೊರೊನಾ ಪೂರ್ವದಲ್ಲಿ ನಮ್ಮ ಚಿತ್ರ(Kannada Movie) ಆರಂಭವಾಯಿತು. ಚಿತ್ರದ ಕಥೆ ಕೇಳಿದಾಗ ನನಗೆ ಒಂದು ಕಡೆ ಇಷ್ಟವಾದರೆ, ಮತ್ತೊಂದು ಕಡೆಯಿಂದ ಭಯ. ಜನ ಈ ಕಥೆಯನ್ನು ಯಾವ ರೀತಿ ತೆಗೆದುಕೊಳ್ಳುತ್ತಾರೋ? ಅನ್ನೂ ಪ್ರಶ್ನೆ ಮೂಡಿತ್ತು. ಕೊನೆಗೆ ನಿರ್ಮಾಪಕ ಪೂರ್ಣಚಂದ್ರ ನಾಯ್ಡು ಅವರು, ಈ ಸಿನಿಮಾ ಮಾಡೋಣ ಸರ್… ಎಲ್ಲರಿಗೂ ಹಿಡಿಸುತ್ತದೆ ಎಂದು ಭರವಸೆ ನೀಡಿದರು. ಇದೇ ಏಪ್ರಿಲ್ 1ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಜನ ಮೆಚ್ಚಿಕೊಳ್ಳುತ್ತಾರೆಂಬ ನಿರೀಕ್ಷೆಯಿದೆ. ನನ್ನೊಂದಿಗೆ ನಟಿಸಿರುವ ವೇದಿಕ, ತಾನ್ಯ ಹೋಪ್(Tanya Hope)ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನಮ್ಮ ಕರೆಗೆ ಓಗೊಟ್ಟು ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ’ವೆಂದು ಉಪೇಂದ್ರ ಹೇಳಿದರು.

ಚಿತ್ರದಲ್ಲಿ ನಟಿಸಿರುವ ವೇದಿಕ, ತಾನ್ಯ ಹೋಪ್, ಚಾಂದಿನಿ, ವಿನಯ್ ಚಂಡೂರ್, ಸಂಭಾಷಣೆ ಬರೆದಿರುವ ಧರ್ಮೇಂದ್ರ, ನಿರ್ಮಾಪಕರಾದ ಪೂರ್ಣಚಂದ್ರ ನಾಯ್ಡು, ಶ್ರೀಕಾಂತ್ ವೀರಮಾಚನೇನಿ ಹಾಗೂ ಚಿತ್ರವನ್ನು ಬಿಡುಗಡೆ ಮಾಡುತ್ತಿರುವ ಬೆಂಗಳೂರಿನ ಕುಮಾರ್ ಫಿಲಂಸ್ ನ ಕುಮಾರ್ ‘ಹೋಮ್ ಮಿನಿಸ್ಟರ್’(Home Minister)ಕುರಿತು ಮಾತನಾಡಿದರು.

ಇದನ್ನೂ ಓದಿ: KGF2 vs Beast: ಬಾಕ್ಸಾಫೀಸ್ ಕಾಳಗ.. 'ಕೆಜಿಎಫ್ 2' ಚಿತ್ರಕ್ಕೆ ಸವಾಲೆಸೆಯಲು ಸಜ್ಜಾದ 'ಬೀಸ್ಟ್'!

ಸುಜಯ್ ಕೆ ಶ್ರೀಹರಿ(Sujay K Srihari)ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ವೇದಿಕ, ತಾನ್ಯ ಹೋಪ್, ಚಾಂದಿನಿ, ಸುಮನ್ ರಂಗನಾಥ್, ಸಾಧುಕೋಕಿಲ, ಶ್ರೀನಿವಾಸ ಮೂರ್ತಿ, ಸುಧಾ ಬೆಳವಾಡಿ, ತಿಲಕ್, ಅವಿನಾಶ್, ಮಾಳವಿಕ ಅವಿನಾಶ್, ಲಾಸ್ಯ ಮುಂತಾದವರಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News