ವರ್ತೂರ್‍ ಸಂತೋಷ್‌ಗೆ ಸಿಕ್ತು ಅಮ್ಮನ ಕೈತುತ್ತು!!

ದೀಪಾವಳಿ ಪ್ರಯುಕ್ತ ಬಿಗ್‌ಬಾಸ್ ಮನೆಯವರಿಗೆಲ್ಲ ಒಂದು ಭಾವುಕ ಸರ್ಪೈಸ್ ನೀಡಿದ್ದಾರೆ. ಮನೆಮಂದಿಗೆಲ್ಲರಿಗೂ ಅವರ ಮನೆಯಿಂದ ಅವರಿಗಿಷ್ಟವಾದ ತಿನಿಸನ್ನು ತರಿಸಿ ಕೊಡಲಾಗಿದೆ. ಬಾಕ್ಸ್‌ನಲ್ಲಿ ಬಂದ ತಮ್ಮಿಷ್ಟದ ತಿನಿಸನ್ನು ಮಾಡಿ ಕಳಿಸಿದ ಕುಟುಂಬದವರನ್ನು ನೆನಪಿಸಿಕೊಂಡು ಸ್ಪರ್ಧಿಗಳೆಲ್ಲ ಭಾವುಕರಾಗಿದ್ದಾರೆ.

Written by - Manjunath N | Last Updated : Nov 13, 2023, 06:40 PM IST
  • ವರ್ತೂರ್ ಸಂತೋಷ್‌ ಅವರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗುತ್ತೇನೆ ಎಂದು ನಿನ್ನೆಯಿಂದಲೂ ಹೇಳುತ್ತಿದ್ದಾರೆ
  • ನಿರ್ಧಾರವನ್ನು ಅವರಿಗೇ ಬಿಟ್ಟು ಕಿಚ್ಚ ಸುದೀಪ್‌, ವೀಕೆಂಡ್‌ ಎಪಿಸೋಡ್ ಮುಗಿಸಿದ್ದಾರೆ
  • ಇಂದು ಅವರನ್ನು ಮನೆಯವರೆಲ್ಲ ಕನ್ವಿನ್ಸ್ ಮಾಡುತ್ತಿದ್ದಾರೆ ಕೂಡ
ವರ್ತೂರ್‍ ಸಂತೋಷ್‌ಗೆ ಸಿಕ್ತು ಅಮ್ಮನ ಕೈತುತ್ತು!! title=

ಬೆಂಗಳೂರು: ದೀಪಾವಳಿ ಪ್ರಯುಕ್ತ ಬಿಗ್‌ಬಾಸ್ ಮನೆಯವರಿಗೆಲ್ಲ ಒಂದು ಭಾವುಕ ಸರ್ಪೈಸ್ ನೀಡಿದ್ದಾರೆ. ಮನೆಮಂದಿಗೆಲ್ಲರಿಗೂ ಅವರ ಮನೆಯಿಂದ ಅವರಿಗಿಷ್ಟವಾದ ತಿನಿಸನ್ನು ತರಿಸಿ ಕೊಡಲಾಗಿದೆ. ಬಾಕ್ಸ್‌ನಲ್ಲಿ ಬಂದ ತಮ್ಮಿಷ್ಟದ ತಿನಿಸನ್ನು ಮಾಡಿ ಕಳಿಸಿದ ಕುಟುಂಬದವರನ್ನು ನೆನಪಿಸಿಕೊಂಡು ಸ್ಪರ್ಧಿಗಳೆಲ್ಲ ಭಾವುಕರಾಗಿದ್ದಾರೆ.

ಎಲ್ಲರ ಮನೆಯಿಂದ ತಿಂಡಿ ಬಂದರೂ ಒಬ್ಬ ಸ್ಪರ್ಧಿಯ ಮನೆಯಿಂದ ಮಾತ್ರ ಬಾಕ್ಸ್ ಬಂದಿರಲಿಲ್ಲ. ಅದು ವರ್ತೂರ್‍ ಸಂತೋಷ್ ಮನೆಯಿಂದ. ಇದನ್ನು ನೋಡಿ ವರ್ತೂರ್ ಅವರು ದುಃಖದಿಂದ ಬಿಕ್ಕಿ ಬಿಕ್ಕಿ ಅಳುತ್ತಿದ್ದರು.ಆಗಲೇ ಇಡೀ ಮನೆಯವರೆಲ್ಲರೂ ದಂಗಾಗಿಬಿಡುವ ಆ ಘಟನೆ ನಡೆಯಿತು. ಈ ಘಟನೆ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸೆರೆಯಾಗಿದೆ.ತೆರೆದ ಬಿಗ್‌ಬಾಸ್ ಮನೆಯ ಬಾಗಿಲಿಂದ ವರ್ತೂರ್ ಸಂತೋಷ್ ಅವರ ಅಮ್ಮನೇ ಬುತ್ತಿ ಹಿಡಿದು ನಡೆದುಕೊಂಡು ಬರುತ್ತಿದ್ದರು! ಅವರ ಬಾಯಿಂದ ‘ಕಂದಾ’ ಅಂದಾಗಲಂತೂ ಸ್ಪರ್ಧಿಗಳೆಲ್ಲರಿಗೂ ತಮ್ಮ ಅಮ್ಮನೇ ಕರೆದ ಅನುಭವ.

ಇದನ್ನೂ ಓದಿ-ಪಿಎಫ್ ಚಂದಾದಾರರಿಗೊಂದು ಗುಡ್ ನ್ಯೂಸ್, ಖಾತೆಗೆ ಬಡ್ಡಿ ಬಂತು, ಮನೆಯಲ್ಲಿಯೇ ಕುಳಿತು ಈ ರೀತಿ ಪರಿಶೀಲಿಸಿ

ವರ್ತೂರ್ ಸಂತೋಷ್‌ ಅವರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗುತ್ತೇನೆ ಎಂದು ನಿನ್ನೆಯಿಂದಲೂ ಹೇಳುತ್ತಿದ್ದಾರೆ. ನಿರ್ಧಾರವನ್ನು ಅವರಿಗೇ ಬಿಟ್ಟು ಕಿಚ್ಚ ಸುದೀಪ್‌, ವೀಕೆಂಡ್‌ ಎಪಿಸೋಡ್ ಮುಗಿಸಿದ್ದಾರೆ. ಇಂದು ಅವರನ್ನು ಮನೆಯವರೆಲ್ಲ ಕನ್ವಿನ್ಸ್ ಮಾಡುತ್ತಿದ್ದಾರೆ ಕೂಡ. ಜೊತೆಗೆ ‘ಭಾಗ್ಯಲಕ್ಷ್ಮಿ’ ಧಾರಾವಾಹಿಯ ನಟಿ ಸುಷ್ಮಾ ಕೆ. ರಾವ್ ಕೂಡ ಬಂದು ವರ್ತೂರ್ ಅವರ ಜೊತೆಗೆ ಮಾತನಾಡಿ ಹೋಗಿದ್ದಾರೆ. ಆದರೆ ವರ್ತೂರ್ ಅವರ ನಿರ್ಧಾರ ಏನು ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಈ ನಡುವೆಯೇ ಅವರ ಅಮ್ಮನೇ ಬಿಗ್‌ಬಾಸ್ ಮನೆಯೊಳಗೆ ಬಂದಿರುವುದು ಕುತೂಹಲ ಹೆಚ್ಚಿಸಿದೆ. ಜೊತೆಗೆ ಅವರು, ‘ನನ್ನ ಆಸೆ ನೆರವೇರಿಸ್ತಾನೆ ನನ್ ಮಗ. ನಾನು ಇದೊಂದು ರಿಕ್ವೆಸ್ಟ್ ಮಾಡ್ಕೊಳ್ತಿದ್ದೀನಿ ನನ್ ಮಗನಲ್ಲಿ’ ಎಂದು ನಡುಗುವ ಧ್ವನಿಯಲ್ಲಿ ಹೇಳಿರುವುದೂ ಪ್ರೋಮೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ-ಯಡಿಯೂರಪ್ಪನವರ ಮಗ ಈಶ್ವರಪ್ಪ ಪುತ್ರನ ರಾಜಕೀಯ ಭವಿಷ್ಯಕ್ಕೆ ಕಲ್ಲು ಹಾಕುವುದು ಖಚಿತ: ಕಾಂಗ್ರೆಸ್

ವರ್ತೂರ್ ಅವರ ಅಮ್ಮ, ಮಗನಲ್ಲಿ ಮಾಡಿಕೊಂಡ ವಿನಂತಿ ಏನು? ಅದನ್ನು ನೇರವೇರಿಸುವುದಕ್ಕೆ ವರ್ತೂರ್ ಸಿದ್ಧರಾಗ್ತಾರಾ? ಈ ಎಲ್ಲವನ್ನು JioCinemaದಲ್ಲಿ ಪ್ರಕಟವಾಗುತ್ತಿರುವ ಬಿಗ್‌ಬಾಸ್ ಕನ್ನಡ ನೋಡಿ ತಿಳಿದುಕೊಳ್ಳಬೇಕು.ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News