ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿದ್ದ ಕನ್ನಡದ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ  (70) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.


COMMERCIAL BREAK
SCROLL TO CONTINUE READING

ರಂಗಭೂಮಿ, ಸಿನಿಮಾ ರಂಗ ಹಾಗೂ ಕಿರುತೆರೆಯ ಧಾರವಾಹಿಗಳಲ್ಲಿ ಗುರುತಿಸಿಕೊಂಡಿದ್ದ ಗಂಗಾಧರಯ್ಯ ಪೋಷಕ ಪಾತ್ರಗಳಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಲಾಕ್‌ಡೌನ್‌ ತೆರವಿನ ಬಳಿಕ ಪ್ರೇಮಲೋಕ ಧಾರಾವಾಹಿಯ ಶೂಟಿಂಗ್​ನಲ್ಲೂ ಭಾಗಿಯಾಗಿದ್ದರು.


ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗಂಗಾಧರಯ್ಯ ಅವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹಾಗಾಗಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.