ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್,  ಬಿ.ಭೈರಪ್ಪ ಮೈಸೂರು, ಚೇತನ್ ಎಸ್ ರಮೇಶ್ ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರದ ಚಿತ್ರಕ್ಕಾಗಿ ಮನೋಹರ್ ಎಸ್ ದೊಡ್ಡಮನಿ ಅವರು ಬರೆದಿರುವ "ಕಣ್ಣನೋಟಕ್ಕೆ ಕಣ್ಣಾಗಿ ಬಂದಳು"ಎಂಬ ಯುಗಳಗೀತೆಯನ್ನು ತಮ್ಮ ಗಾಯನದ ಮೂಲಕ ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಪ್ರದೀಪ್ ಎಸ್ ವರ್ಮ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಈ ಹಾಡು ಬಿಡುಗಡೆಯಾಗಲಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕೊನೆಗೂ 58ನೇ ವಯಸ್ಸಿನಲ್ಲಿ ಸಲ್ಮಾನ್‌ ಖಾನ್‌ಗೆ ಕೂಡಿ ಬಂತು ಮದುವೆ ಭಾಗ್ಯ..! ಬಾಲಿವುಡ್‌ ಭಾಯಿಜಾನ್‌ ಕೈ ಹಿಡಿಯೋ ಆಕೆ ಬೇರಾರೂ ಅಲ್ಲ..


ಭಗೀರಥ ಚಿತ್ರದ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಟೀಸರ್ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ನಮ್ಮ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರಲಾಗುವುದು ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ. 


ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆ ಮಾಡಿದ್ದಾರೆ. ಅಕುಲ್ ನೃತ್ಯ ನಿರ್ದೇಶನ, ಸೂರಿ ಚಿತ್ತೂರು ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಹಾಗೂ ಮೋಹನ್ ರಾಸು ಅವರ ಸಹ ನಿರ್ದೇಶನ "ಭಗೀರಥ" ಚಿತ್ರಕ್ಕಿದೆ. 


ಇದನ್ನೂ ಓದಿ: ರಿಯಾಲಿಟಿ ಶೋ ಸ್ವರ್ಧಿ ಕಾರ್ತಿಕ್ ಅಲಿಯಾಸ್ ಹುಲಿ ಕಾರ್ತಿಕ್ ಮೇಲೆ ಎಫ್ ಐ ಆರ್


ಜಯಪ್ರಕಾಶ್, ಚಂದನ ರಾಘವೇಂದ್ರ, ಧೀನಾ ಉಪಡ, ರೂಪ, ನಿಸರ್ಗ ಅಣ್ಣಪ್ಪ, ಶಶಿಧರ್, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.