KJ Yesudas health : ಖ್ಯಾತ ಗಾಯಕ ಕೆ.ಜೆ. ಯೇಸುದಾಸ್ ಆಸ್ಪತ್ರೆಗೆ ದಾಖಲು..!? ಪುತ್ರ ವಿಜಯ್‌ ಮಾಹಿತಿ, ಆತಂಕದಲ್ಲಿ ಅಭಿಮಾನಿಗಳು

KJ Yesudas hospitalised : ಖ್ಯಾತ ಗಾಯಕ ಕೆ.ಜೆ. ಯೇಸುದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೀಗ ಈ ಕುರಿತು ಸ್ವತಃ ಯೇಸುದಾಸ್‌ ಪುತ್ರ ವಿಜಯ್ ಯೇಸುದಾಸ್ ಅವರು ಮಾಹಿತಿ ನೀಡಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Krishna N K | Last Updated : Feb 27, 2025, 03:37 PM IST
    • ಖ್ಯಾತ ಗಾಯಕ ಕೆ.ಜೆ. ಯೇಸುದಾಸ್ ಅವರ ಆರೋಗ್ಯದಲ್ಲಿ ಏರುಪೇರು
    • ಈ ಕುರಿತು ಸ್ವತಃ ಯೇಸುದಾಸ್‌ ಪುತ್ರ ವಿಜಯ್ ಯೇಸುದಾಸ್ ಅವರು ಮಾಹಿತಿ ನೀಡಿದ್ದಾರೆ..
    • ಇತ್ತೀಚೆಗೆ ತಮ್ಮ 85ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಯೇಸುದಾಸ್
KJ Yesudas health : ಖ್ಯಾತ ಗಾಯಕ ಕೆ.ಜೆ. ಯೇಸುದಾಸ್ ಆಸ್ಪತ್ರೆಗೆ ದಾಖಲು..!? ಪುತ್ರ ವಿಜಯ್‌ ಮಾಹಿತಿ, ಆತಂಕದಲ್ಲಿ ಅಭಿಮಾನಿಗಳು

KJ Yesudas health news : ಇತ್ತೀಚೆಗೆ ತಮ್ಮ 85 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಯೇಸುದಾಸ್, ಆರು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿಗಳು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿವೆ.. ಇದೀಗ ಈ ಕುರಿತು ವಿಜಯ್‌ ಯೇಸುದಾಸ್‌ ಸ್ಪಷ್ಟನೆ ನೀಡಿದ್ದಾರೆ..

Add Zee News as a Preferred Source

ಖ್ಯಾತ ಚಲನಚಿತ್ರ ಗಾಯಕ ಕೆ.ಜೆ. ಯೇಸುದಾಸ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳಿದ್ದವು. ಇದು ಭಾರತೀಯ ಸಿನಿ ವಲಯಗಳಲ್ಲಿ ಕಳವಳವನ್ನು ಹೆಚ್ಚಿಸಿತು. ಆದರೆ, ಈ ಸುದ್ದಿಗೆ ಅವರ ಮಗ ಮತ್ತು ಗಾಯಕ ವಿಜಯ್ ಯೇಸುದಾಸ್ ಇತ್ತೀಚೆಗೆ ಪ್ರತಿಕ್ರಿಯಿಸಿದ್ದು, ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. 

ಇದನ್ನೂ ಓದಿ:18 ಕ್ಕೆ ಮದುವೆ, ಎರಡು ವಿಚ್ಛೇದನ.. 44 ನೇ ವಯಸ್ಸಿನಲ್ಲಿ 10 ವರ್ಷ ಚಿಕ್ಕ ನಟನ ಜೊತೆ ಸ್ಟಾರ್‌ ನಟಿಯ ಡೇಟಿಂಗ್‌!?

ಅಲ್ಲದೆ, ಯೇಸುದಾಸ್ ಆರೋಗ್ಯವಾಗಿದ್ದಾರೆ.. ಅವರು ಪ್ರಸ್ತುತ ಅಮೆರಿಕದಲ್ಲಿದ್ದಾರೆ ಎಂದು ಅವರ ಆಪ್ತ ಮೂಲಗಳು ದೃಢಪಡಿಸಿವೆ. ಇತ್ತೀಚೆಗೆ, ಜನವರಿ 10 ರಂದು, ಯೇಸುದಾಸ್ ಅವರು 85ನೇ ವರ್ಷಕ್ಕೆ ಕಾಲಿಟ್ಟರು. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತು. ಯೇಸುದಾಸು ಆರು ದಶಕಗಳಿಗೂ ಹೆಚ್ಚು ಕಾಲ 50,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಧ್ವನಿಗೆ ಅನೇಕ ಅಭಿಮಾನಿಗಳಿದ್ದಾರೆ.

ಗಾನ ಗಂಧರ್ವನ್ (ದಿ ಸೆಲೆಸ್ಟಿಯಲ್ ಸಿಂಗರ್) ಎಂದೇ ಜನಪ್ರಿಯರಾದ ಯೇಸುದಾಸ್ ಮಲಯಾಳಂ, ತಮಿಳು, ಕನ್ನಡ, ತೆಲುಗು, ತೆಲುಗು, ಅರೇಬಿಕ್, ರಷ್ಯನ್ ಮತ್ತು ಇತರ ಹಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ.. ಎಂಟು ರಾಷ್ಟ್ರೀಯ ಪ್ರಶಸ್ತಿಗಳು ಮತ್ತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಿಂದ ರಾಜ್ಯ ಸರ್ಕಾರಿ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ..

ಇದನ್ನೂ ಓದಿ:Traffic Rules ಫಾಲೋ ಮಾಡು ಅಂದಿದ್ದಕೆ ಅ*ಶ್ಲೀಲ ಸನ್ನೆ ಮಾಡಿ ಕಾರು ಚಾಲಕ ಕಿರಿಕ್..! ವಿಡಿಯೋ ವೈರಲ್... ದೂರು ದಾಖಲು 

1975 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2017 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳು ಸಂದಿವೆ. ಆದರೆ, ಯೇಸುದಾಸ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಇದ್ದಕ್ಕಿದ್ದಂತೆ ಹರಡಿತು. ಆದರೆ, ವಿಜಯ್ ಯೇಸುದಾಸ್ ಸ್ಪಷ್ಟನೆ ನೀಡಿರುವುದರಿಂದ, ಸಿನಿರಂಗ ಮತ್ತು ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News