ಮೈಸೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಸ್ವತಃ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿರುವ ವನ್ಯಜೀವಿ ಛಾಯಾಚಿತ್ರಗಳನ್ನು ನಿಮಗೂ ನೀಡಬೇಕು ಅನ್ನೋ ಕುತೂಹಲ ಇದೆಯೇ? ಕೊಳ್ಳಬೇಕು ಅನ್ನೋ ಆಸೆ ಇದೆಯೇ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ!


COMMERCIAL BREAK
SCROLL TO CONTINUE READING

ಅರಣ್ಯ ಇಲಾಖೆ ಸಹಯೋಗದಲ್ಲಿ ನಟ ದರ್ಶನ್ ತೂಗುದೀಪ ಅವರು ತೆಗೆದಿರುವ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟವನ್ನು ಮಾರ್ಚ್ 1 ರಿಂದ 3ರವರೆಗೆ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ಆಯೋಜಿಸಲಾಗಿದೆ. 


ಈ ಬಗ್ಗೆ ಸ್ವತಃ ದರ್ಶನ್ ಅವರೇ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದು, 'ಲೈಫ್ ಆನ್ ದಿ ವೈಲ್ಡ್ ಸೈಡ್' ಹೆಸರಿನಲ್ಲಿ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಈ ಛಾಯಾಚಿತ್ರಗಳ ಮಾರಾಟದಿಂದ ಬಂದ ಹಣವನ್ನು ವನ್ಯಜೀವಿ ಸಂರಕ್ಷಣಾ ನಿಧಿಗೆ ಬಳಕೆಯಾಗಲಿದೆ ಎಂದು ಹೇಳಿರುವ ದರ್ಶನ್, ವಿಶ್ವ ವನ್ಯಜೀವಿ ದಿನವಾದ ಮಾರ್ಚ್ 3ರಂದು ತಾವೂ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ತಾವು ವನ್ಯಜೀವಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿರುವ ವೀಡಿಯೋ ಸಹ ದರ್ಶನ್ ಶೇರ್ ಮಾಡಿದ್ದಾರೆ.