ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ.
ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಮೂರನೇ ಕೊಡುಗೆ ಟಗರು ಪಲ್ಯ.