ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಪ್ರಾರಂಭವಾಗಿದ್ದ ಈ ಗಲಾಟೆ, ಕೊಲೆಯಲ್ಲಿ ಅಂತ್ಯ ಕಂಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ ​ನಲ್ಲಿ ರೋಹಿತ್ ಶರ್ಮಾ ವಿಶ್ವದಾಖಲೆ! ಮಾರ್ಗನ್ ದಾಖಲೆ ಪುಡಿ


ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹುಡುಕುತ್ತಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಈ ಕೇಸ್ʼ​ಗೆ ಪ್ರಮುಖ ಸಾಕ್ಷಿಯಾಗಿ ಅದೇ ಮಾಹಿತಿ ಇರಲಿದೆ. ಕೊಲೆ ನಡೆದ ಬಳಿಕ ರೇಣುಕಾಸ್ವಾಮಿ ಮೊಬೈಲ್‌ ಅನ್ನು ಕೊಲೆ ಎಸಗಿದವರು ಮೋರಿಯಲ್ಲಿ ಎಸೆದಿದ್ದರು. ಇದೀಗ ಆ ಮೊಬೈಲ್ ಪೊಲೀಸರಿಗೆ ಸಿಕ್ಕಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ.


ಅಷ್ಟೇ ಅಲ್ಲದೆ, ರೇಣುಕಾಸ್ವಾಮಿ ಮೊಬೈಲ್ ಅನ್ನು​ ರಿಟ್ರೀವ್ ಮಾಡಲಾಗುತ್ತದೆ. ಒಂದು ವೇಳೆ ಆ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾದರೆ, ನಟ ದರ್ಶನ್‌ ಸೇರಿ ಇತರರಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.


ಇದನ್ನೂ ಓದಿ: 7 ತಿಂಗಳು ಮೈದಾನದಿಂದ ಹೊರಗಿದ್ದು ಕ್ರಿಕೆಟ್‌ ನಿಯಮವನ್ನೇ ಮರೆತ್ರಾ ಕೆಎಲ್‌ ರಾಹುಲ್!‌


ರೇಣುಕಾ ಸ್ವಾಮಿ ಬಳಸಿದ್ದ ನಂಬರ್ʼ​ನಲ್ಲೇ ಹೊಸ ಸಿಮ್​ ಪಡೆದುಕೊಂಡು ಡೇಟಾ ರಿಟ್ರೀವ್​ ಮಾಡಲಾಗಿದೆ. ಇನ್ನು ಆತ ಬಳಕೆ ಮಾಡಿದ್ದ ವಾಟ್ಸಪ್ ,ಇನ್‌ʼಸ್ಟಾಗ್ರಾಂ, ಫೇಸ್‌ ಬುಕ್ ಮುಂತಾದ ಆ್ಯಪ್ʼ​ಗಳ ಮಾಹಿತಿ ಕೂಡ ಈಗ ಪೊಲೀಸರಿಗೆ ಸಿಕ್ಕಿದ್ದು, ಆತ ಯಾರಿಗೆಲ್ಲ ಸಂದೇಶ ಕಳಿಸಿದ್ದ? ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ ಮೆಸೇಜ್​ ಏನು? ಅದಕ್ಕೆ ಆಕೆ ಕೊಟ್ಟ ಪ್ರತಿಕ್ರಿಯೆ ಏನು ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಇನ್ನು ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವೇ ಪ್ರಮುಖ ಸಾಕ್ಷಿಯಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ