)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಜಾಮೀನು ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆದಿತ್ತು. ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ರಮ್ಯಾ ಟ್ವೀಟ್ ಮಾಡಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳು ರಮ್ಯಾ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲು ಆರಂಭಿಸಿದರು.
ದರ್ಶನ್ ಗೆಳತಿ ಪವಿತ್ರಾ ಗೌಡ ಅವರಿಗೆ ಕೊಲೆಯಾದ ರೇಣುಕಾಸ್ವಾಮಿ ಕಳಿಸುತ್ತಿದ್ದ ರೀತಿಯಲ್ಲೇ ದರ್ಶನ್ ಅಭಿಮಾನಿಗಳು ತನಗೆ ಮೆಸೇಜ್ ಕಳಿಸುತ್ತಿದ್ದಾರೆ ಎಂದು ರಮ್ಯಾ ಟ್ವೀಟ್ ಮಾಡಿದ್ದರು.
ಮಾಜಿ ಸಂಸದೆ ಹಾಗೂ ಚಿತ್ರ ನಟಿ ರಮ್ಯಾ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳಿಸುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದಿಂದ ಸ್ವಪ್ರೇರಿತ ದೂರು ದಾಖಲಿಸಿದೆ.
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಮಿ ಚೌದರಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ರಮ್ಯಾ ಅವರ ವಿರುದ್ಧ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಮಾಡುತ್ತಿದ್ದಾರೆ. ಇದರಿಂದ ಮಹಿಳೆಯ ಸ್ಥಾನಮಾನಕ್ಕೆ ತೊಂದರೆಯಾಗುತ್ತಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿದೆ.
ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಲು ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ಕೋರಿದೆ. ಮಹಿಳಾ ಆಯೋಗ ಆಧ್ಯಕ್ಷೆ ನಾಗಲಕ್ಷಿ ಚೌದರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನ ಪ್ರತಿಯನ್ನು ಎಕ್ಸ್ ಖಾತೆಯಲ್ಲಿ ನಟಿ ರಮ್ಯಾ ಹಂಚಿಕೊಂಡಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.