ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
ಇದನ್ನೂ ಓದಿ: ಗೋರಂಟಿ ಅಲ್ಲ.. ಈ ಎಲೆಯ ಪುಡಿ ತೆಂಗಿನೆಣ್ಣೆಯಲ್ಲಿ ಬೆರೆಸಿ ತಲೆಗೆ ಹಚ್ಚಿ, ಬಿಳಿಕೂದಲು 10 ನಿಮಿಷದಲ್ಲೇ ಗಾಢ ಕಪ್ಪಾಗುವುದು!
"ಯುದ್ಧಕಾಂಡ" ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ. ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ನಿಭಾಯಿಸಿದ್ದಾರೆ. ಪವನ್ ಭಟ್ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಬೇಬಿ ರಾದ್ನ್ಯ ಸಹ ಈ ಚಿತ್ರದಲ್ಲಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯುಳ್ಳ ಚಿತ್ರವಾಗಿದೆ. "ಯುದ್ಧ ಕಾಂಡ" ತೀರಾ ಕಡಿಮೆ ಬಜೆಟ್ ಅಥವಾ ತೀರಾ ಹೆವಿ ಬಜೆಟ್ ನ ಚಿತ್ರವಲ್ಲ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣವಾಗಿರುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಾಗಿ ಜನರನ್ನು ತಲುಪಬೇಕು. ಉತ್ತಮ ಸಂದೇಶವಿರುವ ಈ ಚಿತ್ರವನ್ನು ರಾಷ್ಟ್ರಪತಿಗಳಿಗೂ ತೋರಿಸುವ ಯೋಚನೆ ಇದೆ. ಏಪ್ರಿಲ್ 18 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ಮಾಪಕ & ನಾಯಕ ಅಜೇಯ್ ರಾವ್.
"ಯುದ್ಧ ಕಾಂಡ" 2022ರಲ್ಲೇ ಬರೆದ ಕಥೆ. ಈ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ಈ ರೀತಿ ಕಥೆಯನ್ನು ನಿರ್ಮಾಪಕರು ಒಪ್ಪುತ್ತಾರೊ, ಇಲ್ಲವೊ? ಎಂಬ ಸಂಶಯದಿಂದ ಕಥೆ ಯಾರಿಗೂ ಹೇಳಿರಲಿಲ್ಲ. ಅನಂತರ ಕಥೆ ಕೇಳಿದ ಅಜೇಯ್ ರಾವ್ ಅವರು ನಿರ್ಮಾಣಕ್ಕೆ ಮುಂದಾದರು. ಚಿತ್ರಕಥೆ ಕೂಡ ಅಜೇಯ್ ರಾವ್ ಅವರದೆ. ಇನ್ನು, ಇದೊಂದು ಕೋರ್ಟ್ ರೂಮ್ ಡ್ರಾಮ. ನಾಗಾಭರಣ, ಪ್ರಕಾಶ್ ಬೆಳವಾಡಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಹೇಮಂತ್ ಜೋಯಿಸ್,ಕೆ ಬಿ ಪ್ರವೀಣ್ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿ ಮೈಂಡ್ಸ್ ಅವರ ಸಂಕಲನ "ಯುದ್ಧ ಕಾಂಡ" ಚಿತ್ರಕ್ಕಿದೆ ಎಂದರು ನಿರ್ದೇಶಕ ಪವನ್ ಭಟ್.
"ಯುದ್ಧಕಾಂಡ" ಚಿತ್ರದಲ್ಲಿ ಅನ್ಯಾಯದಿಂದ ನೊಂದ ಹೆಣ್ಣನ್ನು ಪ್ರತಿನಿಧಿಸುವ ಪಾತ್ರ ನನ್ನದು . ಪವನ್ ಭಟ್ ಅವರ ಕಥೆ ಚೆನ್ನಾಗಿದೆ ಎಂದು ನಟಿ ಅರ್ಚನಾ ಜೋಯಿಸ್ ತಿಳಿಸಿದರು.
ನ್ಯಾಯಾಧೀಶರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ತಮ್ಮ ಪಾತ್ರದ ಬಗ್ಗೆ ವಿವರಿಸಿದ ಟಿ.ಎಸ್ ನಾಗಾಭರಣ, "ಯುದ್ಧ ಕಾಂಡ" ಎಲ್ಲರಿಗೂ ಪ್ರಿಯವಾಗುವ ಚಿತ್ರವಾಗಲಿದೆ ಎಂಬ ಭರವಸೆ ನಮ್ಮ ತಂಡಕ್ಕಿದೆ ಎಂದರು.
ನಾನು ಹೆಚ್ಚಾಗಿ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಅಜೇಯ್ ರಾವ್ ಅವರು ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ನಟಿಸಲು ಒಪ್ಪಿಕೊಂಡೆ. ನನ್ನದು ಈ ಚಿತ್ರದಲ್ಲಿ ವಕೀಲನ ಪಾತ್ರ ಎಂದು ಪ್ರಕಾಶ್ ಬೆಳವಾಡಿ ಹೇಳಿದರು.
ಸಂಕಲನಕಾರ ಶ್ರೀ ಕ್ರೇಜಿ ಮೈಂಡ್ಸ್ ಮತ್ತು ತಂಡದ ಇತರೆ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









