ಬೇಸಿಗೆಯಲ್ಲಿ ತೆಂಗಿನ ಎಣ್ಣೆಯನ್ನು ಈ ರೀತಿಯಲ್ಲಿ ಹಚ್ಚಿದರೆ ಯಾವ ಕ್ರೀಂ ಲೋಶನ್ ಇಲ್ಲದೆಯೇ ಹೊಳೆಯುತ್ತದೆ ತ್ವಚೆ !

How to use Coconut Oil on skin in summer : ಬೇಸಿಗೆಯಲ್ಲಿ ಮುಖಕ್ಕೆ ಏನಾದರೂ ಹಚ್ಚಬೇಕಾದರೆ ಜನರು ಹೆದರುತ್ತಾರೆ. ಯಾಕೆಂದರೆ ಇದು ಮೊಡವೆ ಮತ್ತು ಚರ್ಮದ ಸೋಂಕುಗಳನ್ನು ಹೆಚ್ಚಿಸುತ್ತದೆ. ಬೇಸಿಗೆಯಲ್ಲಿ ಚರ್ಮದ ಆರೈಕೆಗೆ ಈ ವಿಧಾನದ ಮೂಲಕ ತೆಂಗಿನ ಎಣ್ಣೆಯನ್ನು ಬಳಸಿದರೆ ತ್ವಚೆಯ ಕಾಂತಿ ಮಿರ ಮಿರನೆ ಮಿಂಚುತ್ತದೆ. 

Written by - Ranjitha R K | Last Updated : Apr 15, 2025, 03:03 PM IST
  • ಬೇಸಿಗೆಯಲ್ಲಿ ಮುಖಕ್ಕೆ ಏನಾದರೂ ಹಚ್ಚಬೇಕಾದರೆ ಜನರು ಹೆದರುತ್ತಾರೆ
  • ಬೇಸಿಗೆ ಕಾಲದಲ್ಲಿ ಚರ್ಮಕ್ಕೆ ತೆಂಗಿನ ಎಣ್ಣೆ ಹಚ್ಚುವುದರಿಂದ ಹಾನಿಯಾಗುವ ಭಯವಿರುತ್ತದೆ
  • ಬೇಸಿಗೆಯಲ್ಲಿ ಚರ್ಮಕ್ಕೆ ತೆಂಗಿನ ಎಣ್ಣೆಯನ್ನು ಹೇಗೆ ಬಳಸುವುದು ನೋಡೋಣ.
ಬೇಸಿಗೆಯಲ್ಲಿ ತೆಂಗಿನ ಎಣ್ಣೆಯನ್ನು ಈ ರೀತಿಯಲ್ಲಿ ಹಚ್ಚಿದರೆ ಯಾವ ಕ್ರೀಂ ಲೋಶನ್ ಇಲ್ಲದೆಯೇ ಹೊಳೆಯುತ್ತದೆ ತ್ವಚೆ !

ಬೆಂಗಳೂರು : ತೆಂಗಿನ ಎಣ್ಣೆಯನ್ನು ಚರ್ಮದ ಆರೈಕೆಗಾಗಿ ವ್ಯಾಪಕವಾಗಿ ಬಳಸಲಾಗುತ್ತದೆ. ಸಾಮಾನ್ಯವಾಗಿ ಚಳಿಗಾಲ ಮತ್ತು ಮಳೆಗಾಲದ ದಿನಗಳಲ್ಲಿ ತೆಂಗಿನ ಎಣ್ಣೆಯಿಂದ ತ್ವಚೆಯ ಮಸಾಜ್ ಮಾಡಲಾಗುತ್ತದೆ. ಬೇಸಿಗೆ ಕಾಲದಲ್ಲಿ ಚರ್ಮಕ್ಕೆ ತೆಂಗಿನ ಎಣ್ಣೆ ಹಚ್ಚುವುದರಿಂದ ಹಾನಿಯಾಗುವ ಭಯವಿರುತ್ತದೆ. ಅದಕ್ಕಾಗಿಯೇ ಬೇಸಿಗೆಯಲ್ಲಿ ತೆಂಗಿನ ಎಣ್ಣೆಯನ್ನು ಚರ್ಮಕ್ಕೆ ಬಳಸಬೇಕೆ ಅಥವಾ ಬೇಡವೇ ಎಂಬುದು ಅನೇಕರಿಗೆ ಅರ್ಥವಾಗುವುದಿಲ್ಲ.ಬೇಸಿಗೆಯಲ್ಲಿ ಚರ್ಮಕ್ಕೆ ತೆಂಗಿನ ಎಣ್ಣೆಯನ್ನು ಹೇಗೆ ಬಳಸುವುದು ನೋಡೋಣ.  

Add Zee News as a Preferred Source

ಅಲೋವೆರಾ ಜೆಲ್ ಜೊತೆಗೆ : 
ಬೇಸಿಗೆಯಲ್ಲಿ ನಿಮ್ಮ ಚರ್ಮದ ಆರೈಕೆಗಾಗಿ ತೆಂಗಿನ ಎಣ್ಣೆಯನ್ನು ಅಲೋವೆರಾ ಜೆಲ್‌ನೊಂದಿಗೆ ಬೆರೆಸಿ ಮುಖಕ್ಕೆ ಹಚ್ಚಬೇಕು. ಇದು ಚರ್ಮವನ್ನು ಪೋಷಿಸಿ ಕಾಂತಿಯನ್ನು ಹೆಚ್ಚಿಸುತ್ತದೆ. ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುತ್ತದೆ. 

ಇದನ್ನೂ ಓದಿ :  ಮಧುಮೇಹವನ್ನ ಮೂಲದಿಂದಲೇ ಗುಣಪಡಿಸುವ ಸಂಜೀವಿನಿ ಈ ಎಲೆ! ಬೇಯಿಸಿ ತಿಂದರೆ ಹಾರ್ಟ್‌ಅಟ್ಯಾಕ್‌ ಭಯವೇ ಇರಲ್ಲ..

ಅರಿಶಿನದೊಂದಿಗೆ : 
ಚರ್ಮವನ್ನು ಸೋಂಕು ಮುಕ್ತವಾಗಿಡಲು, ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಅರಿಶಿನವನ್ನು ಬೆರೆಸಿ ಬೇಸಿಗೆಯಲ್ಲಿ ಮುಖಕ್ಕೆ ಹಚ್ಚಬಹುದು.ಇದು ಮೊಡವೆ ಮತ್ತು ಸೋಂಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. 2 ಟೀ ಚಮಚ ತೆಂಗಿನ ಎಣ್ಣೆಯಲ್ಲಿ 1 ಟೀ ಚಮಚ ಅರಿಶಿನ ಪುಡಿಯನ್ನು ಮಿಶ್ರಣ ಮಾಡಿ. ಅದನ್ನು ಚರ್ಮಕ್ಕೆ ಹಚ್ಚಿ. 30 ನಿಮಿಷಗಳ ನಂತರ, ಮುಖವನ್ನು ನೀರಿನಿಂದ ಸ್ವಚ್ಛಗೊಳಿಸಿ. 

ಕಪೂರ್ ಜೊತೆ : 
ಶಿಲೀಂಧ್ರ ಸೋಂಕನ್ನು ತಪ್ಪಿಸಲು, ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಕರ್ಪೂರವನ್ನು ಬೆರೆಸಿ ಹಚ್ಚಬೇಕು. ಈ ಮಿಶ್ರಣವನ್ನು ಚರ್ಮದ ಮೇಲೆ ಹಚ್ಚುವುದರಿಂದ ಶಿಲೀಂಧ್ರ ಮತ್ತು ಸೋಂಕನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಶಿಲೀಂಧ್ರಗಳ ಸೋಂಕಿನಿಂದ ಪರಿಹಾರ ಪಡೆಯಲು ಈ ಮಿಶ್ರಣವನ್ನು ಹಚ್ಚಬಹುದು.  

ಇದನ್ನೂ ಓದಿ : ಮಧುಮೇಹ ರೋಗಿಗಳು ಸೇವಿಸಬೇಕಾದ ಆಹಾರಗಳು..! ಇಲ್ಲಿದೆ ಸಂಪೂರ್ಣ ವಿವರ..!

ಟೀ ಟ್ರೀ ಎಣ್ಣೆ : 
ಬೇಸಿಗೆಯಲ್ಲಿ ಬೆವರಿನ ಜಿಗುಟುತನದಿಂದಾಗಿ ಅನೇಕ ರೀತಿಯ ಚರ್ಮದ ಸಮಸ್ಯೆಗಳು ಹೆಚ್ಚಾಗಬಹುದು. ಇದು ಮೊಡವೆ, ಚರ್ಮದ ಸೋಂಕು ಮತ್ತು ದದ್ದುಗಳನ್ನು ಹೆಚ್ಚಿಸಬಹುದು. ಈ ಸಮಸ್ಯೆಗಳನ್ನು ತಪ್ಪಿಸಲು, ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಟೀ ಟ್ರೀ ಎಣ್ಣೆಯನ್ನು ಬೆರೆಸಿ ಚರ್ಮದ ಮೇಲೆ ಹಚ್ಚಿ. ಇದು ಚರ್ಮದ ಅಲರ್ಜಿ ಮತ್ತು ಸೋಂಕುಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ಮಲಗುವ ಮುನ್ನ ತೆಂಗಿನ ಎಣ್ಣೆಯನ್ನು ಹೀಗೆ ಹಚ್ಚಿ : 
ಬೇಸಿಗೆಯಲ್ಲಿ, ರಾತ್ರಿ ಮಲಗುವ ಮುನ್ನ ನಿಮ್ಮ ಮುಖವನ್ನು ನೀರಿನಿಂದ ಸ್ವಚ್ಛಗೊಳಿಸಿ. ನಂತರ ಕೆಲವು ಹನಿ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಅದರಿಂದ ಮುಖಕ್ಕೆ ಮಸಾಜ್ ಮಾಡಿ. ರಾತ್ರಿಯಿಡೀ ಮುಖದ ಮೇಲೆ ಬಿಡಿ. ರಾತ್ರಿ ಮಲಗುವ ಮುನ್ನ ತೆಂಗಿನ ಎಣ್ಣೆಯಿಂದ ಮುಖಕ್ಕೆ ಮಸಾಜ್ ಮಾಡುವುದರಿಂದ ಸುಕ್ಕುಗಳ ಸಮಸ್ಯೆ ಕಡಿಮೆಯಾಗುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿ ನೀಡಲಾಗಿದೆ. ಜೀ ನ್ಯೂಸ್ ಇದನ್ನು  ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News