)
ಬೆಂಗಳೂರು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದರಿಂದ ಹೃದಯ ಸಂಬಂಧಿತ ರೋಗಗಳ ಅಪಾಯ ಹೆಚ್ಚಾಗುತ್ತದೆ. ಇದು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುವುದು ಮುಖ್ಯ. ಹೆಚ್ಚು ಹುರಿದ ಆಹಾರವನ್ನು ತಿನ್ನುವುದು, ಜಂಕ್ ಫುಡ್ನ ಅತಿಯಾದ ಸೇವನೆ ಮತ್ತು ವ್ಯಾಯಾಮ ಮಾಡದಿರುವುದು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವಾಗುತ್ತದೆ. ಬದಲಾಗುತ್ತಿರುವ ಹವಾಮಾನ ಮತ್ತು ತಾಪಮಾನದಿಂದಾಗಿಯೂ ಕೂಡಾ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು.
ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದಾಗುವ ಅನಾನುಕೂಲಗಳೇನು? :
ದೇಹದ ಜೀವಕೋಶಗಳ ರಚನೆ, ಜೀವಸತ್ವಗಳ ಬಳಕೆ ಮತ್ತು ಹಾರ್ಮೋನುಗಳ ಮಟ್ಟದಲ್ಲಿನ ಏರಿಳಿತಗಳಂತಹ ಪ್ರಕ್ರಿಯೆಗಳಲ್ಲಿ ಕೊಲೆಸ್ಟ್ರಾಲ್ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ, ಈ ಎಲ್ಲಾ ಪ್ರಕ್ರಿಯೆಗಳ ಮೇಲೆ ಪರಿಣಾಮ ಬೀರಬಹುದು.ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗಿಗಳು ಕೂಡಾ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯನ್ನು ಎದುರಿಸಬೇಕಾಗಬಹುದು.
ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮಾರ್ಗಗಳು? :
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಆಹಾರವು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಗಮನ ಹರಿಸಿದರೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ಬಗೆಹರಿಸಬಹುದು.
ಹೆಚ್ಚು ಹುರಿದ ಆಹಾರವನ್ನು ಸೇವಿಸಬೇಡಿ :
ಸಂಸ್ಕರಿಸಿದ ಎಣ್ಣೆ, ಪಾಮ್ ಎಣ್ಣೆ ಮತ್ತು ಇತರ ಸ್ಯಾಚುರೇಟೆಡ್ ಕೊಬ್ಬುಗಳನ್ನು ಹೊಂದಿರುವ ಆಹಾರವನ್ನು ಸೇವಿಸದಿದ್ದರೆ ಒಳ್ಳೆಯದು. ಇದರ ಬದಲಾಗಿ
ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಹೆಚ್ಚಿನ ಫೈಬರ್ ಆಹಾರಗಳನ್ನು ಸೇವಿಸಿ.
ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸೋಂಪು-ಜೀರಿಗೆ ನೀರು :
ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡಲು, ಕೆಲವು ನೈಸರ್ಗಿಕ ಪದಾರ್ಥಗಳು ಮತ್ತು ಆಯುರ್ವೇದ ಗಿಡಮೂಲಿಕೆಗಳನ್ನು ಸೇವಿಸಬಹುದು. ಆಯುರ್ವೇದವು ಕೊಲೆಸ್ಟ್ರಾಲ್ ಮಟ್ಟವನ್ನು ನೈಸರ್ಗಿಕವಾಗಿ ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾದ ಅನೇಕ ವಿಷಯಗಳ ಬಗ್ಗೆ ಹೇಳುತ್ತದೆ. ಮೆಂತ್ಯೆ, ಜೀರಿಗೆ, ಕೊತ್ತಂಬರಿ ಬೀಜಗಳು ಮತ್ತು ಇತರ ಅನೇಕ ಆಯುರ್ವೇದ ಗಿಡಮೂಲಿಕೆಗಳು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ವಸ್ತುಗಳನ್ನು ಬೆರೆಸಿದ ನೀರನ್ನು ಸೇವಿಸಬೇಕು. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪಾನೀಯ ತಯಾರಿಸುವುದು ಹೇಗೆ ? :
ಮೆಂತ್ಯೆ ಬೀಜಗಳು, ಹಸಿ ಸೋಂಪು ಬೀಜಗಳು, ಜೀರಿಗೆ ಬೀಜಗಳು ಮತ್ತು ಒಣಗಿದ ಕೊತ್ತಂಬರಿ ಬೀಜಗಳನ್ನು ತಲಾ 2 ಟೀ ಚಮಚಗಳಷ್ಟು ತೆಗೆದುಕೊಂಡು ಒಂದು ಪಾತ್ರೆ ಅಥವಾ ಬಾಣಲೆಯಲ್ಲಿ ಹಾಕಿಕೊಳ್ಳಿ.
ನಂತರ, ಅದಕ್ಕೆ ಒಂದು ತುಂಡು ದಾಲ್ಚಿನ್ನಿ ಸೇರಿಸಿ ಎಲ್ಲವನ್ನೂ 5-10 ನಿಮಿಷಗಳ ಕಾಲ ಹುರಿಯಿರಿ. ಇದನ್ನು ಉರಿಯಿಂದ ತೆಗೆದು ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಎಲ್ಲಾ ಬೀಜಗಳನ್ನು ಚೆನ್ನಾಗಿ ಪುಡಿ ಮಾಡಿ.
ಈ ಪುಡಿಯನ್ನು ಒಂದು ಪಾತ್ರೆಯಲ್ಲಿ ಹಾಕಿ ಶೇಖರಿಸಿ ಇಟ್ಟುಕೊಳ್ಳಿ. ಪ್ರತಿದಿನ ಬೆಳಿಗ್ಗೆ ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಒಂದು ಟೀ ಚಮಚ ಈ ಪುಡಿಯನ್ನು ಬೆರೆಸಿ ಕುಡಿಯಿರಿ.
(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.