ಮಧುಮೇಹ ಇರುವವರು ಮೊಟ್ಟೆಗಳನ್ನು ತಿನ್ನಬಹುದೇ? ಇಲ್ಲಿದೆ ಮಹತ್ವದ ಮಾಹಿತಿ..!

ಮೊಟ್ಟೆ ತಿನ್ನುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೊಟ್ಟೆ ತಿನ್ನುವುದು ವಿಶೇಷವಾಗಿ ಒಳ್ಳೆಯದು.ಜೊತೆಗೆ ಮೊಟ್ಟೆ ತಿನ್ನುವುದರಿಂದ ಸಕ್ಕರೆ ಕಾಯಿಲೆಯೂ ಸಹ ನಿಯಂತ್ರಣದಲ್ಲಿರುತ್ತದೆ ಎಂದು ತಜ್ಞರು ತಮ್ಮ ಸಂಶೋಧನೆಯಲ್ಲಿ ಕಂಡುಕೊಂಡಿದ್ದಾರೆ.

Written by - Manjunath Naragund | Last Updated : Oct 16, 2025, 03:38 PM IST
  • ವಾರಕ್ಕೆ 4 ಮೊಟ್ಟೆಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಬಹುದು
  • 4 ಮೊಟ್ಟೆಗಳಿಗಿಂತ ಹೆಚ್ಚು ತಿನ್ನುವುದರಿಂದ ಯಾವುದೇ ಹೆಚ್ಚುವರಿ ಪ್ರಯೋಜನವಿಲ್ಲ
  • ಇದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ
ಮಧುಮೇಹ ಇರುವವರು ಮೊಟ್ಟೆಗಳನ್ನು ತಿನ್ನಬಹುದೇ? ಇಲ್ಲಿದೆ ಮಹತ್ವದ ಮಾಹಿತಿ..!
ಸಾಂದರ್ಭಿಕ ಚಿತ್ರ

ಮೊಟ್ಟೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಅವುಗಳನ್ನು ಸೂಪರ್‌ಫುಡ್ ಎಂದು ಪರಿಗಣಿಸಲಾಗುತ್ತದೆ.ಇದಕ್ಕೆ ಮುಖ್ಯವಾಗಿ ಮೊಟ್ಟೆಯಿಂದ ವಿವಿಧ ರೀತಿಯ ಖಾದ್ಯಗಳನ್ನು ಸುಲಭವಾಗಿ ತಯಾರಿಸಬಹುದಾಗಿದೆ.ಇದರಿಂದಾಗಿ ಮೊಟ್ಟೆಯು ಜಗತ್ತಿನಾದ್ಯಂತ ಎಲ್ಲರ ನೆಚ್ಚಿನ ಆಹಾರವಾಗಿದೆ.

Add Zee News as a Preferred Source

ಇದರ ಆಹಾರ ಪದಾರ್ಥಗಳಿಗೆ ಹೋಲಿಸಿದರೆ ಅವುಗಳ ಬೆಲೆ ತುಂಬಾ ಕಡಿಮೆ ಎಂದೇ ಹೇಳಬಹುದು.ಇದಲ್ಲದೆ ತಜ್ಞರು ಹೇಳುವಂತೆ ಮೊಟ್ಟೆಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಗುಣವನ್ನು ಹೊಂದಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ವಾರದಲ್ಲಿ ಈ ದಿನ ವಿಷ್ಣುವನ್ನು ಪೂಜಿಸಿ, ನಿಮ್ಮ ಮನೆ ಸಂಪತ್ತಿನಿಂದ ತುಂಬಿರಲಿದೆ..!

ಮಧುಮೇಹ ನಿಯಂತ್ರಣ ಸಲಹೆಗಳು:

ಮೊಟ್ಟೆ ತಿನ್ನುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೊಟ್ಟೆ ತಿನ್ನುವುದು ವಿಶೇಷವಾಗಿ ಒಳ್ಳೆಯದು.ಇದಲ್ಲದೆ...ಮೊಟ್ಟೆ ತಿನ್ನುವ ಜನರಲ್ಲಿ ಮಧುಮೇಹ ಸಮಸ್ಯೆಗಳು ಸುಲಭವಾಗಿ ನಿಯಂತ್ರಿಸಲ್ಪಡುತ್ತವೆ ಎಂದು ತಜ್ಞರು ಹೇಳುತ್ತಾರೆ.ಮೊಟ್ಟೆ ತಿನ್ನುವುದರಿಂದ ಟೈಪ್ 2 ಮಧುಮೇಹ ಕಡಿಮೆಯಾಗುತ್ತದೆ ಮತ್ತು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.

ವಾರಕ್ಕೆ ನಾಲ್ಕು ಮೊಟ್ಟೆಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಬಹುದು.ಆದರೆ ನಾಲ್ಕು ಮೊಟ್ಟೆಗಳಿಗಿಂತ ಹೆಚ್ಚು ತಿನ್ನುವುದರಿಂದ ಯಾವುದೇ ಹೆಚ್ಚುವರಿ ಪ್ರಯೋಜನವಿಲ್ಲ ಎಂದು ತಜ್ಞರು ಹೇಳುತ್ತಾರೆ.ವಾರಕ್ಕೆ ನಾಲ್ಕು ಮೊಟ್ಟೆಗಳನ್ನು ತಿನ್ನುವುದರಿಂದ ಗ್ಲೂಕೋಸ್, ಚಯಾಪಚಯ ಮತ್ತು ಉರಿಯೂತದ ಮಟ್ಟಗಳು ಕಡಿಮೆಯಾಗುತ್ತವೆ. ಇದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಬೆಳಿಗ್ಗೆ ಮೊಟ್ಟೆಗಳನ್ನು ತಿನ್ನುವುದು ಹೆಚ್ಚು ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಇಂಟರ್ನೆಟ್ ನಲ್ಲಿ ಹೊಸ ಕ್ರಾಂತಿ ಸೃಷ್ಟಿಸಲಿದೆ ವೈಫೈ 8..! ಭಾರತಕ್ಕೆ ಬರೋದು ಯಾವಾಗ ಗೊತ್ತೇ?

ಇತ್ತೀಚಿನ ದಿನಗಳಲ್ಲಿ ಮಧುಮೇಹವು ಅನೇಕ ಜನರನ್ನು ಕಾಡುತ್ತಿರುವ ಒಂದು ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ದೀರ್ಘಕಾಲೀನ ನೋವನ್ನು ಉಂಟುಮಾಡುವ ಈ ಕಾಯಿಲೆಯನ್ನು ಗುಣಪಡಿಸುವುದು ತುಂಬಾ ಕಷ್ಟದ ಕೆಲಸವಾಗಿದೆ.ಏಕೆಂದರೆ.. ಇದಕ್ಕೆ ಇನ್ನೂ ಯಾವುದೇ ಚಿಕಿತ್ಸೆಯನ್ನು ಕಂಡು ಹಿಡಿದಿಲ್ಲ.ಆರೋಗ್ಯ ತಜ್ಞರ ಪ್ರಕಾರ, ನಾವು ಸೇವಿಸುವ ಆಹಾರದಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಈ ರೋಗವನ್ನು ನಿಯಂತ್ರಿಸಬಹುದು. ರಕ್ತದಲ್ಲಿನ ಸಕ್ಕರೆಯಿಂದ ಬಳಲುತ್ತಿರುವವರು ವೈದ್ಯರ ಸಲಹೆಯಂತೆ ಸರಿಯಾದ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.

ಸೂಚನೆ:ಈ ಮಾಹಿತಿಯನ್ನು ಸಾಮಾನ್ಯ ಜ್ಞಾನಕ್ಕಾಗಿ ಮಾತ್ರ ನೀಡಲಾಗಿದೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ತಜ್ಞರನ್ನು ಸಂಪರ್ಕಿಸಿ.ಜೀ ಕನ್ನಡ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ.

 

About the Author

Trending News