ಖಾಲಿ ಹೊಟ್ಟೆಯಲ್ಲಿ ಈ ಎಲೆಗಳನ್ನು ಸೇವಿಸಿದರೆ ದೂರವಾಗುವುದು ಅಪಾಯಕಾರಿ ಕಾಯಿಲೆಗಳು

Leaves On Enpty Stomach:ಪ್ರಾಚೀನ ಕಾಲದಿಂದಲೂ ಗಿಡಮೂಲಿಕೆಗಳಿಗೆ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದ ಪ್ರಕಾರ ಕೆಲವು ಎಲೆಗಳನ್ನು ನಿತ್ಯ ಖಾಲಿ ಹೊಟ್ಟೆಗೆ ಸೇವಿಸುವುದರಿಂದ ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ತಪ್ಪಿಸಬಹುದು

Written by - Ranjitha R K | Last Updated : Jan 11, 2023, 09:49 AM IST
  • ಪ್ರಕೃತಿ ಮನುಷ್ಯರ ಪಾಲಿಗೆ ವರದಾನ
  • ಮರಗಳು ಮತ್ತು ಸಸ್ಯಗಳ ಎಲೆಗಳು ಔಷಧೀಯ ಗುಣಗಳನ್ನು ಹೊಂದಿವೆ.
  • ಈ ಎಲೆಗಳನ್ನು ಸೇವಿಸುವುದರಿಂದ ಯಾವಾಗಲೂ ಆರೋಗ್ಯಕರವಾಗಿರಬಹುದು.
 ಖಾಲಿ ಹೊಟ್ಟೆಯಲ್ಲಿ ಈ ಎಲೆಗಳನ್ನು ಸೇವಿಸಿದರೆ ದೂರವಾಗುವುದು ಅಪಾಯಕಾರಿ ಕಾಯಿಲೆಗಳು  title=

Leaves On Enpty Stomach : ಪ್ರಕೃತಿ ಮನುಷ್ಯರ ಪಾಲಿಗೆ ವರದಾನ. ಪ್ರಕೃತಿಯಲ್ಲಿರುವ ಮರಗಳು ಮತ್ತು ಸಸ್ಯಗಳ ಪ್ರತಿಯೊಂದು ಭಾಗವು ಮನುಷ್ಯನಿಗೆ ಪ್ರಯೋಜನಕಾರಿಯಾಗಿದೆ. ಕೆಲವು ಮರಗಳು ಮತ್ತು ಸಸ್ಯಗಳ ಎಲೆಗಳು ಔಷಧೀಯ ಗುಣಗಳನ್ನು ಹೊಂದಿವೆ. ಈ ಎಲೆಗಳನ್ನು ಸೇವಿಸುವುದರಿಂದ ಯಾವಾಗಲೂ ಆರೋಗ್ಯಕರವಾಗಿರಬಹುದು. ಪ್ರಾಚೀನ ಕಾಲದಿಂದಲೂ ಗಿಡಮೂಲಿಕೆಗಳಿಗೆ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದ ಪ್ರಕಾರ ಕೆಲವು ಎಲೆಗಳನ್ನು ನಿತ್ಯ ಖಾಲಿ ಹೊಟ್ಟೆಗೆ ಸೇವಿಸುವುದರಿಂದ ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ತಪ್ಪಿಸಬಹುದು.

ಬೇವಿನ ಎಲೆಗಳು :
ಬೇವಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ, ಆಂಟಿ ವೈರಲ್ ಮತ್ತು ಉರಿಯೂತದ ಗುಣಲಕ್ಷಣಗಳಿವೆ. ಬೇವಿನಲ್ಲಿರುವ ಪೋಷಕಾಂಶಗಳು ಅನೇಕ ರೋಗಗಳ ಅಪಾಯವನ್ನು ನಿವಾರಿಸುತ್ತದೆ. ಇದರ ಎಲೆಗಳನ್ನು ಸೇವಿಸುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಬೇವಿನ ಎಲೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಬಾಯಿಯ ದುರ್ವಾಸನೆ ಮತ್ತು ಹಲ್ಲಿನ  ಸಮಸ್ಯೆಯನ್ನು ತೊಡೆದು ಹಾಕುವಲ್ಲಿ ಪ್ರಯೋಜನಕಾರಿಯಾಗಿದೆ. 

ಇದನ್ನೂ ಓದಿ : High Cholesterol: ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಕರಗಿಸಲು ಚಳಿಗಾಲದಲ್ಲಿ ಈ ಹಣ್ಣುಗಳನ್ನು ಸೇವಿಸಿ

ತುಳಸಿ ಎಲೆಗಳು :
ತುಳಸಿ ಔಷಧೀಯ ಗುಣಗಳ ಆಗರವಾಗಿದೆ. ಇದರಲ್ಲಿರುವ ಪೋಷಕಾಂಶಗಳು ಅನೇಕ ರೋಗಗಳ ಅಪಾಯವನ್ನು ನಿವಾರಿಸುತ್ತದೆ. ತುಳಸಿ ಎಲೆಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ಶೀತ ಮತ್ತು ಜ್ವರದ ಸಮಸ್ಯೆಯನ್ನು ನಿವಾರಿಸುತ್ತದೆ. ಚರ್ಮ, ಕೂದಲಿನ ಆರೋಗ್ಯಕ್ಕೂ ಬೆಸ್ಟ್ ತುಳಸಿ. 

ಪುದೀನ ಎಲೆಗಳು :
ಖಾಲಿ ಹೊಟ್ಟೆಯಲ್ಲಿ ಪುದೀನಾ ಎಲೆಗಳನ್ನು ತಿನ್ನುವುದರಿಂದ ಜೀರ್ಣಕಾರಿ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಇವುಗಳ ಸೇವನೆಯಿಂದ ಗ್ಯಾಸ್, ಹೊಟ್ಟೆ ಉಬ್ಬುವುದು ಮತ್ತು ಅಸಿಡಿಟಿಯಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.

ಪೇರಳೆ ಎಲೆಗಳು :
ಪೇರಳೆ ಎಲೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಈ ಎಲೆಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಪೇರಳೆ ಎಲೆಗಳು ಶೀತ ಮತ್ತು ಜ್ವರದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಈ ಎಲೆಗಳನ್ನು ನೀರಿನಲ್ಲಿ ಕುದಿಸಿ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. 

ಇದನ್ನೂ ಓದಿ : ನೀವೂ ಸಹ ರಾತ್ರಿ ಸ್ವೆಟರ್ ಧರಿಸಿ ಮಲಗುತ್ತೀರಾ? ಇಂದೇ ಈ ಅಭ್ಯಾಸವನ್ನು ಬಿಡಿ

ಕರಿಬೇವಿನ ಎಲೆ :
ಕರಿಬೇವಿನ ಎಲೆಗಳನ್ನು ಆಹಾರದ ಘಮ ಹೆಚ್ಚಿಸಲು ಬಳಸಲಾಗುತ್ತದೆ. ಈ ಎಲೆಗಳು ಔಷಧೀಯ ಗುಣಗಳಿಂದ ಕೂಡಿದೆ. ಕರಿಬೇವಿನ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಮಧುಮೇಹದಲ್ಲಿ ಪ್ರಯೋಜನಕಾರಿ. ಕರಿಬೇವಿನ ಎಲೆಗಳ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆಯಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

 

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News