ಈ ಎಲೆಗಳಲ್ಲಿ ಪೋಷಕಾಂಶಗಳ ಭಂಡಾರವೇ ಅಡಗಿದೆ: ನೂರಾರು ಕಾಯಿಲೆಗಳಿಗೆ ಅಮೃತದಂತೆ ಕೆಲಸ ಮಾಡುತ್ತೆ!!

ಹಿತ್ತಲಲ್ಲಿ ತುಂಬಾ ಸುಲಭವಾಗಿ ಬೆಳೆಯಬಹುದಾದ ಈ ಸಸ್ಯದ ಎಲೆ, ಕಾಯಿಗಳಲ್ಲಿ ಅಗಾಧ ಪ್ರಮಾಣದ ಪೋಷಕಾಂಶಗಳು ಅಡಕವಾಗಿವೆ. ಹಾಗಾಗಿಯೇ ಇದನ್ನು ಆರೋಗ್ಯದ ಗಣಿ ಎಂದು ಪರಿಗಣಿಸಲಾಗಿದೆ.   

Written by - Yashaswini V | Last Updated : Jul 15, 2025, 01:07 PM IST
  • ಹಿತ್ತಲಲ್ಲಿ ಸುಲಭವಾಗಿ ಬೆಳೆಯಬಹುದಾದ ಈ ಸಸ್ಯ ಆರೋಗ್ಯದ ಗಣಿ
  • ಇದರ ಎಲೆಗಳನ್ನು ಆಹಾರದಲ್ಲಿ ಸೇರಿಸುವುದರಿಂದ ನೂರಾರು ಕಾಯಿಲೆಗಳಿಂದ ದೂರ ಉಳಿಯಬಹುದು.
  • ಇದರಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಯಿಂದಲೂ ನಮ್ಮನ್ನು ದೂರ ಉಳಿಸುತ್ತದೆ.
ಈ ಎಲೆಗಳಲ್ಲಿ ಪೋಷಕಾಂಶಗಳ ಭಂಡಾರವೇ ಅಡಗಿದೆ: ನೂರಾರು ಕಾಯಿಲೆಗಳಿಗೆ ಅಮೃತದಂತೆ ಕೆಲಸ ಮಾಡುತ್ತೆ!!

Drumstick Leaves Benefits: ಮನೆಯ ಮುಂದೆ ಸಣ್ಣ ಜಾಗದಲ್ಲಿ ಸುಲಭವಾಗಿ ಬೆಳೆಯಬಹುದಾದ ಮರ 'ನುಗ್ಗೆ ಮರ'. ನುಗ್ಗೆಯ ಕಾಯಿ ಮಾತ್ರವಲ್ಲ ಅದರ ಎಲೆಗಳೂ ಕೂಡ ತಿನ್ನಲು ಬಲು ರುಚಿಕರ. ನುಗ್ಗೆಯ ಎಲೆಗಳಲ್ಲಿ ಎಂದರೆ ನುಗ್ಗೆ ಸೊಪ್ಪಿನಲ್ಲಿ  ಉತ್ಕರ್ಷಣ ನಿರೋಧಕಗಳು, ಕ್ಲೋರೊಫಿಲ್, ವಿಟಮಿನ್ ಸಿ, ಪ್ರೋಟೀನ್, ಕ್ಯಾಲ್ಸಿಯಂನಂತಹ  ಹಲವು ಬಗೆಯ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸಮೃದ್ಧವಾಗಿರುವುದರಿಂದ ಇದನ್ನು ಆರೋಗ್ಯದ ಭಂಡಾರ ಎನ್ನಲಾಗುತ್ತದೆ. 

Add Zee News as a Preferred Source

ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ನುಗ್ಗೆಸೊಪ್ಪನ್ನು ನಮ್ಮ ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ಮಧುಮೇಹ, ಹೈ ಬಿಪಿ, ಹೃದ್ರೋಗ, ಕಣ್ಣಿನ ಸಮಸ್ಯೆಗಳು, ಸಂಧಿವಾತದಂತಹ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎನ್ನಲಾಗುತ್ತದೆ. ಹಾಗಿದ್ದರೆ, ನುಗ್ಗೆಸೊಪ್ಪು ನಮ್ಮನ್ನು ಯಾವೆಲ್ಲಾ ಗಂಭೀರ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಸುತ್ತದೆ ಎಂದು ತಿಳಿಯೋಣ... 

ಮಧುಮೇಹ: 
ನುಗ್ಗೆ ಸೊಪ್ಪನ್ನು ಮಧುಮೇಹೀಗಳಿಗೆ ಅಮೃತವಿದ್ದಂತೆ ಎಂದು ಪರಿಗಣಿಸಲಾಗಿದೆ.ಇದರಲ್ಲಿರುವ ಮಧುಮೇಹ ವಿರೋಧಿ ಗುಣಗಳು ದೇಹದಲ್ಲಿ ಬ್ಲಡ್ ಶುಗರ್ ಕಡಿಮೆ ಮಾಡಿ, ಶುಗರ್ ನಿಯಂತ್ರಣದಲ್ಲಿಡುವಲ್ಲಿ ಪರಿಣಾಮಕಾರಿ ನೈಸರ್ಗಿಕ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. 

ಇದನ್ನೂ ಓದಿ- ಬಿಟ್ಟುಬಿಡದೇ ಅನಾರೋಗ್ಯ ಕಾಡ್ತಾ ಇದ್ರೆ ದೇಹದಲ್ಲಿ ಈ ಅಂಶ ಕಡಿಮೆಯಾಗಿದೆ ಅಂತ ಅರ್ಥ..!

ಅಧಿಕ ರಕ್ತದೊತ್ತಡ: 
ನುಗ್ಗೆ ಎಲ್ಲೆಗಳಲ್ಲಿ ಪೊಟ್ಯಾಸಿಯಮ್ ಹೇರಳವಾಗಿ ಕಂಡು ಬರುತ್ತದೆ. ಇದು ರಕ್ತನಾಳಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುವ ಮೂಲಕ ಹೈ ಬಿಪಿಯನ್ನು ಕಂಟ್ರೋಲ್ ಮಾಡಲು ಲಾಭದಾಯ ಎಂದು ಸಾಬೀತುಪಡಿಸುತ್ತದೆ. 

ಕ್ಯಾನ್ಸರ್ ನಿವಾರಕ: 
ನುಗ್ಗೆ ಸೊಪ್ಪಿನಲ್ಲಿ ಉತ್ಕರ್ಷಣ ನಿರೋಧಕಗಳು, ಸತು ಮತ್ತು ವಿಟಮಿನ್ ಸಿ ನಂತಹ ಅಗತ್ಯ ಪೋಷಕಾಂಶಗಳು ಅಡಕವಾಗಿರುವುದರಿಂದ ಇದರ ಸೇವನೆಯಿಂದ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳು ಬರದಂತೆ ತಡೆಯಬಹುದಾಗಿದೆ. ಕ್ಯಾನ್ಸರ್ ರೋಗಿಗಳು ಇದನ್ನು ತಿನ್ನುವುದರಿಂದ ಕ್ಯಾನ್ಸರ್ ಕೋಶಗಳ ವಿರುದ್ಧ ಸಮರ್ಥವಾಗಿ ಹೋರಾಡಬಹುದಾಗಿದೆ. 

ಇದನ್ನೂ ಓದಿ- ಬೆಳಗಿನ ಜಾವ ಇದೊಂದು ಕೆಲಸ ಮಾಡಿದ್ರೆ ಕೊಲೆಸ್ಟ್ರಾಲ್ ಬೆಣ್ಣೆಯಂತೆ ಕರಗಿ ಹೋಗುತ್ತೆ!   

ಉತ್ತಮ ಜೀರ್ಣಾಂಗ ವ್ಯವಸ್ಥೆ: 
ನುಗ್ಗೆ ಸೊಪ್ಪಿನಲ್ಲಿ ನಾರಿನಾಂಶ ಉತ್ತಮ ಪ್ರಮಾಣದಲ್ಲಿ ಕಂಡು ಬರುವುದರಿಂದ ಇದರ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ಧತೆಯಂತ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News